AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾಗಿ ಮೊಬೈಲ್​ ಬಳಸಬೇಡ ಎಂದು ತಿಳಿ ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಂಗಿ

ಮೊಬೈಲ್​, ಟಿವಿ, ಇಂಟರ್ನೆಟ್​ ಬಳಕೆಯಿಂದಾಗಿ ಜನರು ಸಂಬಂಧವನ್ನೇ ಮರೆಯುತ್ತಿದ್ದಾರೆ. ಊಟ ಮಾಡುವಾಗಲೂ, ಮಲಗುವಾಗಲೂ, ಕೆಲಸದ ವೇಳೆಯಲ್ಲೂ, ಶಾಲೆ, ಕಾಲೇಜುಗಳಲ್ಲೂ ಮೊಬೈಲ್​ ಬಳಕೆ ವಿಪರೀತವಾಗಿದೆ. ಹೆಚ್ಚು ಮೊಬೈಲ್​ ಬಳಕೆ ಮಾಡಬೇಡ ಎಂದಿದ್ದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

ಹೆಚ್ಚಾಗಿ ಮೊಬೈಲ್​ ಬಳಸಬೇಡ ಎಂದು ತಿಳಿ ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಂಗಿ
ನಯನಾ ರಾಜೀವ್
|

Updated on: May 05, 2024 | 9:46 AM

Share

ಹೆಚ್ಚಾಗಿ ಮೊಬೈಲ್​ ಫೋನ್​ ಬಳಕೆ ಮಾಡಬೇಡ ಎಂದಿದ್ದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 14 ವರ್ಷದ ಬಾಲಕಿ ಮೊಬೈಲ್​ಗೆ ಅಡಿಕ್ಟ್​ ಆಗಿದ್ದಳು, ಹುಡುಗರೊಂದಿಗೆ ಹೆಚ್ಚು ಕಾಲ ಮಾತನಾಡುತ್ತಿದ್ದಳು, ಇದನ್ನು ಅರಿತ ಅಣ್ಣ ತಂಗಿಗೆ ಬುದ್ಧಿವಾದ ಹೇಳಿದ್ದ. ಇದಕ್ಕೆ ಕೋಪಗೊಂಡ ಬಾಲಕಿ ಅಣ್ಣನನ್ನು ಹತ್ಯೆ ಮಾಡಿದ್ದಾಳೆ.

ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ ಅಪರಾಧಕ್ಕಾಗಿ ಬಾಲಕಿಯನ್ನು ಬಂಧಿಸಲಾಗಿದೆ. ಘಟನೆಯ ಸಮಯದಲ್ಲಿ ಇತರ ಕುಟುಂಬ ಸದಸ್ಯರು ಕೆಲಸದ ಮೇಲೆ ಹೊರಗೆ ಹೋಗಿದ್ದರೆ ಬಾಲಕಿ ಮತ್ತು ಆಕೆಯ ಸಹೋದರ (18) ಮನೆಯಲ್ಲಿದ್ದರು ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಮೊಬೈಲ್ ಫೋನ್‌ನಲ್ಲಿ ಹುಡುಗರೊಂದಿಗೆ ಮಾತನಾಡುತ್ತೀಯ ಎಂದು ಬೈದಿದ್ದ, ಇನ್ನು ಮುಂದೆ ಫೋನ್ ಬಳಸದಂತೆ ತಿಳಿ ಹೇಳಿದ್ದ. ಬಳಿಕ ಅಣ್ಣ ಮಲಗಿದಾಗ ಕೊಡಲಿಯಿಂದ ಕುತ್ತಿಗೆಗೆ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂತರ ಬಾಲಕಿ ಸ್ನಾನ ಮಾಡಿ ತನ್ನ ಬಟ್ಟೆಯ ಮೇಲಿನ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿ, ತನ್ನ ಅಣ್ಣನನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾಳೆ.

ಮತ್ತಷ್ಟು ಓದಿ: Crime News: ಬಾತ್​ರೂಂನಲ್ಲಿ ಹುಟ್ಟಿದ ಮಗುವನ್ನು ಕತ್ತು ಹಿಸುಕಿ ಕೊಂದ ತಾಯಿ!

ಪೊಲೀಸರ ವಿಚಾರಣೆ ವೇಳೆ ಆಕೆ ಆತನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ