AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

Gujarat Crime News: ತನ್ನ ಬಾಯ್​ಫ್ರೆಂಡ್​ನನ್ನು ಕೆಲಸದಿಂದ ತೆಗೆದುಹಾಕಿದ ಬಳಸಿದ ಬಟ್ಟೆಗಳನ್ನು ಮರುಬಳಕೆ ಮಾಡುವ ಕಂಪನಿಗೆ ಪಾಠ ಕಲಿಸಲು ಮುಂದಾದ ಪ್ರೇಯಸಿಯೊಬ್ಬಳು ಏನು ಮಾಡಿದ್ದಾಳೆ ಗೊತ್ತಾ?

Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 11, 2021 | 12:35 PM

Share

ರಾಜ್​ಕೋಟ್: ಕೊರೋನಾದಿಂದ ಲಾಕ್​ಡೌನ್ ಘೋಷಣೆಯಾಗಿದ್ದರಿಂದ ದೇಶದ ಬಹುತೇಕ ಕಂಪೆನಿಗಳ ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದರು. ಕಳೆದೊಂದು ವರ್ಷದಿಂದ ಉಂಟಾದ ಆರ್ಥಿಕ ಕುಸಿತದಿಂದ ಸಾವಿರಾರು ಜನರು ನಿರುದ್ಯೋಗಿಗಳಾಗಿದ್ದಾರೆ. ಇದೇ ರೀತಿ ಗುಜರಾತ್​ನ (Gujarat) ಗಾಂಧಿಧಾಮದ ಬಟ್ಟೆ ಕಾರ್ಖಾನೆಯೊಂದರ (Cloth Factory) ಉದ್ಯೋಗಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿತ್ತು. ಆದರೆ, ಇದರಿಂದ ಕೋಪಗೊಂಡ ಆತನ ಪ್ರೇಯಸಿ ಆ ಕಾರ್ಖಾನೆಗೆ ಬೆಂಕಿ (Fire) ಹಚ್ಚಲು ಪ್ರಯತ್ನಿಸಿದ್ದಾಳೆ!

ಇದೇನಿದು ವಿಚಿತ್ರ ಅಂತೀರಾ? ಇದೊಂದು ರೀತಿಯ ವಿಚಿತ್ರ ಕತೆಯೆಂಬುದು ನಿಜ. ಗುಜರಾತ್​ನ ಗಾಂಧಿಧಾಮದಲ್ಲಿರುವ ಬಳಸಿದ ಬಟ್ಟೆಗಳನ್ನು ಮರುಬಳಕೆ ಮಾಡುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ವಿನೋದ್ ಎಂಬ ಉದ್ಯೋಗಿಯನ್ನು ಇತ್ತೀಚೆಗಷ್ಟೆ ಕೆಲಸದಿಂದ ತೆಗೆದುಹಾಕಲಾಗಿತ್ತು. ಹೀಗಾಗಿ, ಆ ಫ್ಯಾಕ್ಟರಿಯ ಮಾಲೀಕರಿಗೆ ಬುದ್ಧಿ ಕಲಿಸಲು ಮುಂದಾದ ವಿನೋದ್​ನ ಪ್ರೇಯಸಿ ಮಾಯಾಬೆನ್ ಪರ್ಮಾರ್ ಎಂಬ 24 ವರ್ಷದ ಯುವತಿ ಆ ಫ್ಯಾಕ್ಟರಿಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾಳೆ.

ಅಷ್ಟಕ್ಕೂ ಆಗಿದ್ದೇನು?: ಜುಲೈ 5ರಂದು ಸಂಜೆ 5.30ರ ವೇಳೆಗೆ ಗಾಂಧಿಧಾಮದ ಬಳಿ ಇರುವ ಗಣೇಶ್ ನಗರ ಎಂಬಲ್ಲಿರುವ ಕನಮ್ ಇಂಟರ್​ನ್ಯಾಷನಲ್ ಪ್ರೈ. ಲಿಮಿಟೆಡ್ ಎಂಬ ಕಂಪನಿಯ ಯೂನಿಟ್​ಗೆ ಹೋದ ಮಾಯಾಬೆನ್ ಬಟ್ಟೆ ಕೊಳ್ಳುವ ರೀತಿ ವರ್ತಿಸಿದ್ದಳು. ಈಗಾಗಲೇ ಬಳಸಲ್ಪಟ್ಟ ಬಟ್ಟೆಗಳನ್ನು ರೀಸೈಕಲ್ ಮಾಡುವ ಫ್ಯಾಕ್ಟರಿ ಇದಾಗಿದ್ದು, ಅಲ್ಲಿ ಬಟ್ಟೆಗಳನ್ನು ರಾಶಿ ಹಾಕಲಾಗಿತ್ತು. ಆಗ ತನ್ನ ಬ್ಯಾಗ್​ನಲ್ಲಿದ್ದ ಲೈಟರ್ ತೆಗೆದುಕೊಂಡು ಆಕೆ ಬಟ್ಟೆಯ ರಾಶಿಗೆ ಬೆಂಕಿ ಹಚ್ಚಿದ್ದಾಳೆ.

ತಕ್ಷಣ ಇದನ್ನು ಸಿಸಿಟಿವಿಯಲ್ಲಿ ಗಮನಿಸಿದ ಫ್ಯಾಕ್ಟರಿ ಸಿಬ್ಬಂದಿ ಆ ಬೆಂಕಿಯನ್ನು ಆರಿಸಿದ್ದಾರೆ. ಇದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಬೆಂಕಿ ಬೇರೆ ಬಟ್ಟೆಗಳಿಗೆ ಹರಡುವ ಮೊದಲೇ ಆರಿಸಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬಳಿಕ ಮಾಯಾಬೆನ್​ಳನ್ನು ಪೊಲೀಸರಿಗೆ ಹಿಡಿದುಕೊಡಲಾಗಿದೆ.

ಯಾಕೆ ಈ ರೀತಿ ಬೆಂಕಿ ಹಚ್ಚಲು ಪ್ರಯತ್ನಿಸಿದ್ದು ಎಂದು ಆಕೆಯನ್ನು ವಿಚಾರಣೆ ನಡೆಸಿದ ಪೊಲೀಸರಿಗೆ ಮಾಯಾಬೆನ್​ಳ ಪ್ರೇಮಿ ಅಲ್ಲಿಯೇ ಉದ್ಯೋಗಿಯಾಗಿದ್ದ ಎಂಬುದು ಗೊತ್ತಾಗಿದೆ. ನನ್ನ ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತುಹಾಕಿದ್ದಕ್ಕೆ ನನಗೆ ಬಹಳ ಕೋಪ ಬಂದಿತ್ತು. ಅದೇ ಕಾರಣಕ್ಕೆ ಫ್ಯಾಕ್ಟರಿಯ ಮಾಲೀಕರ ವಿರುದ್ಧ ದ್ವೇಷ ತೀರಿಸಿಕೊಳ್ಳಬೇಕೆಂದು ಬೆಂಕಿ ಹಚ್ಚಲು ಪ್ರಯತ್ನಿಸಿದೆ ಎಂದು ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಆಕೆ ಹೇಳಿದ್ದನ್ನು ಕೇಳಿ ಫ್ಯಾಕ್ಟರಿಯ ಆಡಳಿತ ಮಂಡಳಿಯವರು ಕೂಡ ಶಾಕ್ ಆಗಿದ್ದಾರೆ.

ಮಾಯಾಬೆನ್​ ವಿರುದ್ಧ ಕಂಪನಿಯ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆ ದೂರಿನ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿದೆ. ಈ ಕೃತ್ಯದ ಹಿಂದೆ ಆಕೆಯ ಬಾಯ್​ಫ್ರೆಂಡ್ ವಿನೋದ್ ಕೈವಾಡವೂ ಇದೆಯಾ? ಎಂಬುದು ಇನ್ನೂ ಗೊತ್ತಾಗಿಲ್ಲ. ಒಟ್ಟಾರೆ, ಆ ಕ್ಷಣದ ಕೋಪಕ್ಕೆ ಬುದ್ಧಿ ಕೊಟ್ಟು ಆ ಯುವತಿ ಪೊಲೀಸ್ ಠಾಣೆ ಸೇರಿದ್ದಾಳೆ.

ಇದನ್ನೂ ಓದಿ: Viral Video: ದಲಿತ ಯುವಕನನ್ನು ಮರಕ್ಕೆ ಕಟ್ಟಿಹಾಕಿ ಗುಪ್ತಾಂಗಕ್ಕೆ ಥಳಿಸಿದ ಶಾಕಿಂಗ್ ವಿಡಿಯೋ ವೈರಲ್

ಇದನ್ನೂ ಓದಿ: Fire Accident in Dhaka: ಧಗಧಗನೆ ಹೊತ್ತಿ ಉರಿದ ಬಾಂಗ್ಲಾದೇಶದ ಫುಡ್ ಫ್ಯಾಕ್ಟರಿ, ಬೆಂಕಿ ದುರಂತದಲ್ಲಿ 52 ಜನ ಸಜೀವ ದಹನ

(Gujarat woman tries to set cloth factory afire after her boyfriend sacked from job)

Published On - 12:35 pm, Sun, 11 July 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?