AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 1.90 ಕೋಟಿ ರೂ. ಇನ್ಷುರೆನ್ಸ್​ ಹಣಕ್ಕಾಗಿ ಅಪಘಾತದಲ್ಲಿ ಹೆಂಡತಿಯನ್ನು ಕೊಂದ ಗಂಡ!

Shocking News: ಗಂಡ ಮಹೇಶ್​ ಚಂದ್​ ಹೇಳಿದ್ದಕ್ಕೆ ತನ್ನ ಕಸಿನ್ ಜೊತೆ ದೇವಸ್ಥಾನಕ್ಕೆ ಸ್ಕೂಟಿಯಲ್ಲಿ ಹೋಗುತ್ತಿದ್ದ ಶಾಲು ಎಂಬ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದಿತ್ತು. ಆ ಅಪಘಾತದಲ್ಲಿ ಶಾಲು ಸ್ಥಳದಲ್ಲೇ ಮೃತಪಟ್ಟಿದ್ದರು.

Crime News: 1.90 ಕೋಟಿ ರೂ. ಇನ್ಷುರೆನ್ಸ್​ ಹಣಕ್ಕಾಗಿ ಅಪಘಾತದಲ್ಲಿ ಹೆಂಡತಿಯನ್ನು ಕೊಂದ ಗಂಡ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 02, 2022 | 11:19 AM

ಜೈಪುರ: 1.90 ಕೋಟಿ ರೂ. ವಿಮಾ ಮೊತ್ತವನ್ನು (Insurance Money) ಪಡೆದುಕೊಳ್ಳಲು ಸಂಚು ಮಾಡಿದ ಗಂಡನೊಬ್ಬ ಹೆಂಡತಿಗೆ ಅಪಘಾತ (Accident) ಮಾಡಿಸಿ ಕೊಂದಿರುವ ಘಟನೆ ರಾಜಸ್ಥಾನದಲ್ಲಿ(Rajasthan) ನಡೆದಿದೆ. ರೌಡಿ ಶೀಟರ್​ಗೆ ಸುಪಾರಿ ಕೊಟ್ಟಿದ್ದ ಗಂಡ ಯಾರಿಗೂ ಅನುಮಾನ ಬಾರದಂತೆ ಅಪಘಾತದಲ್ಲಿ ಹೆಂಡತಿಯನ್ನು ಕೊಲ್ಲಿಸಿದ್ದಾನೆ. ಆರೋಪಿಯ ಹೆಂಡತಿ ಪ್ರಯಾಣಿಸುತ್ತಿದ್ದ ಸ್ಕೂಟಿಗೆ ಕಾರಿನಿಂದ ಡಿಕ್ಕಿ ಹೊಡೆದ ರೌಡಿ ಶೀಟರ್​ ಆಕೆಯನ್ನು ಕೊಲೆ ಮಾಡಿದ್ದಾನೆ.

ಆರಂಭದಲ್ಲಿ ಇದೊಂದು ಆಕಸ್ಮಿಕ ಅಪಘಾತವೆಂದೇ ಎಲ್ಲರೂ ನಂಬಿದ್ದರು. ಗಂಡ ಮಹೇಶ್​ ಚಂದ್​ ಹೇಳಿದ್ದಕ್ಕೆ ತನ್ನ ಕಸಿನ್ ಜೊತೆ ದೇವಸ್ಥಾನಕ್ಕೆ ಸ್ಕೂಟಿಯಲ್ಲಿ ಹೋಗುತ್ತಿದ್ದ ಶಾಲು ಎಂಬ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದಿತ್ತು. ಆ ಅಪಘಾತದಲ್ಲಿ ಶಾಲು ಸ್ಥಳದಲ್ಲೇ ಮೃತಪಟ್ಟಿದ್ದರು. ಆಕೆಯ ಕಸಿನ್​ಗೆ ತೀವ್ರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅಕ್ಟೋಬರ್ 5ರಂದು ನಡೆದಿದ್ದ ಈ ಘಟನೆಯನ್ನು ಅಪಘಾತವೆಂದು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿತ್ತು.

ಇದನ್ನೂ ಓದಿ: Crime News: ಉತ್ತರ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 6 ಜನ ಸಾವು, 15 ಮಂದಿಗೆ ಗಾಯ

ಆಕೆಯ ಕುಟುಂಬಸ್ಥರು ಕೂಡ ಇದೊಂದು ಅಪಘಾತವೆಂದೇ ನಂಬಿದ್ದರು. ಪೊಲೀಸರು ಕೂಡ ಇದು ರಸ್ತೆ ಅಪಘಾತದ ಪ್ರಕರಣವೆಂದುಕೊಂಡಿದ್ದರು. ಆದರೆ, ತನಿಖೆಯ ಸಮಯದಲ್ಲಿ ಮಹೇಶ್ ಚಂದ್ ತನ್ನ ಪತ್ನಿಯ ವಿಮಾ ಹಣಕ್ಕಾಗಿ ತನ್ನ ಹೆಂಡತಿಯನ್ನು ಕೊಲ್ಲಲು ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ ಎಂದು ಜೈಪುರ ಪಶ್ಚಿಮದ ಡಿಸಿಪಿ ವಂದಿತಾ ರಾಣಾ ಹೇಳಿದ್ದಾರೆ.

2 ತಿಂಗಳ ಹಿಂದೆ ನಡೆದ ಈ ಘಟನೆ ಹಿಟ್ ಆ್ಯಂಡ್ ರನ್ ಕೇಸ್ ಅನ್ನಿಸಿಕೊಂಡಿತ್ತು. ಆದರೆ, ಈ ಪ್ರಕರಣ ಇದೀಗ ಕೊಲೆಯಾಗಿ ದಾಖಲಾಗಿದೆ. ಮಹೇಶ್ ಮತ್ತು ಶಾಲು ಇಬ್ಬರೂ 2015ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗೆ ಅವರಿಬ್ಬರ ನಡುವೆ ಜಗಳ ಹೆಚ್ಚಾಗಿದ್ದರಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು. ಹೆಂಡತಿಯನ್ನು ಕೊಂದರೆ ಆಕೆಯ ಹೆಸರಲ್ಲಿರುವ ವಿಮಾ ಹಣ ಸಿಗುವುದೆಂಬ ಉದ್ದೇಶದಿಂದ ಮಹೇಶ್ ಅಪಘಾತದ ಸಂಚು ರೂಪಿಸಿದ್ದ.

ಇದನ್ನೂ ಓದಿ: ಎತ್ತಿನೊಂದಿಗೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಟೆಕಿ ಕಾಲ್ನಡಿಗೆ; ಮಂಜುನಾಥನಿಗೆ ಹೀಗೊಂದು ಹರಕೆ

ಇದಕ್ಕಾಗಿ ಹೆಂಡತಿಗೆ ಮತ್ತೆ ಹತ್ತಿರವಾಗಿದ್ದ ಮಹೇಶ್ ಆಕೆಯ ಬಳಿ ನಾನು ಒಂದು ಹರಕೆ ಹೊತ್ತಿದ್ದೇನೆ. ನನ್ನ ಆಸೆ ಈಡೇರಬೇಕೆಂದರೆ ನೀನು ಸ್ಕೂಟಿಯಲ್ಲಿ ದೇವಸ್ಥಾನಕ್ಕೆ 11 ದಿನ ಭೇಟಿ ನೀಡಿ ಪೂಜೆ ಸಲ್ಲಿಸಬೇಕು ಎಂದು ಮಹೇಶ್ ಶಾಲುಗೆ ಹೇಳಿದ್ದ. ಗಂಡನ ಮಾತನ್ನು ನಂಬಿದ್ದ ಶಾಲು ದಿನವೂ ಬೆಳಗ್ಗೆ 4.30ಕ್ಕೆ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸುತ್ತಿದ್ದರು. ಅ. 5ರಂದು ಆಕೆ ಬೆಳಗಿನ ಜಾವ ಸ್ಕೂಟಿಯಲ್ಲಿ ದೇವಸ್ಥಾನಕ್ಕೆ ಹೋಗುವಾಗ ಕಾರೊಂದು ಡಿಕ್ಕಿ ಹೊಡೆದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಈ ಪ್ರಕರಣದಲ್ಲಿ ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ