Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಂಧ್ರದಲ್ಲಿ ವೈದ್ಯರ ಕುಟುಂಬದ ಐವರ ನಿಗೂಢ ಸಾವು

ಆಂಧ್ರಪ್ರದೇಶದ ವೈದ್ಯರೊಬ್ಬರು ಮತ್ತು ಅವರ ಕುಟುಂಬದ ನಾಲ್ವರು ಸದಸ್ಯರು ವಿಜಯವಾಡದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಾವಿಗೆ ಆತ್ಮಹತ್ಯೆ ಕಾರಣವೋ ಅಥವಾ ಅವರನ್ನು ಯಾರಾದರೂ ಕೊಲೆ ಮಾಡಿದ್ದಾರೋ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

Crime News: ಆಂಧ್ರದಲ್ಲಿ ವೈದ್ಯರ ಕುಟುಂಬದ ಐವರ ನಿಗೂಢ ಸಾವು
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Apr 30, 2024 | 7:17 PM

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ (Vijayawada) ದಾರುಣ ಘಟನೆಯೊಂದು ನಡೆದಿದೆ. ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇದು ಅನುಮಾನ ಸೃಷ್ಟಿಸಿದೆ. ಈ ಅನುಮಾನಾಸ್ಪದ ಸಾವಿನ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ವೈದ್ಯರಾದ ಡಾ. ಶ್ರೀನಿವಾಸ್ ಶವವಾಗಿ ಪತ್ತೆಯಾಗಿದ್ದು (Dead body), ಮನೆಯಲ್ಲಿ ಅವರ ಪತ್ನಿ, ಮಕ್ಕಳು, ತಾಯಿಯ ಹೆಣವೂ ಪತ್ತೆಯಾಗಿದೆ.

ಡಾ. ಶ್ರೀನಿವಾಸ್ ಎಂಬ ವೈದ್ಯ ತನ್ನ ಮನೆಯ ಹೊರಗೆ, ಅಂಗಳದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯೊಳಗೆ ಅವರ ಪತ್ನಿ, ಇಬ್ಬರು ಮಕ್ಕಳು ಮತ್ತು ತಾಯಿಯ ಶವಗಳು ರಕ್ತದ ಮಡುವಿನಲ್ಲಿ ಪತ್ತೆಯಾಗಿವೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಪೊಲೀಸರ ಪ್ರಕಾರ, ಗುರುನಾನಕ್ ನಗರದಲ್ಲಿ ಈ ಘಟನೆ ನಡೆದಿದ್ದು, ಡಾ. ಶ್ರೀನಿವಾಸ್ ತಮ್ಮ ಮನೆಯ ಹೊರಗಿನ ಅಂಗಳದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಡಾ.ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕುಟುಂಬದ ಇತರ ನಾಲ್ವರನ್ನು ಕೊಲೆ ಮಾಡಲಾಗಿದೆಯೇ ಅಥವಾ ಬೇರೆ ಏನಾದರೂ ವಿಷಯವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶ್ವಾನದಳ ಹಾಗೂ ಸುಳಿವು ತಂಡ ಮನೆಯಿಂದ ಸಾಕ್ಷ್ಯ ಸಂಗ್ರಹಿಸಿದೆ.

ಪೊಲೀಸರು ರಕ್ತದಿಂದ ಕೂಡಿದ್ದ ಚೂರಿಯನ್ನು ವಶಪಡಿಸಿಕೊಂಡಿದ್ದಾರೆ. ಡಾ. ಶ್ರೀನಿವಾಸ್ ಅವರು ಬರೆದಿ ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ನನ್ನ ಸಹೋದರನಿಗೆ ಕಾರಿನ ಕೀಗಳನ್ನು ನೀಡಿ” ಎಂದು ಬರೆಯಲಾಗಿದೆ. ಅವರ ಕಾರಿನಲ್ಲಿದ್ದ ಬ್ಯಾಗನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಾದಿನಿ ಮದುವೆಗೆ ಕರೆಯಲಿಲ್ಲ ಎಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಯೋಧ

ಮೃತರನ್ನು ಡಾ.ಡಿ.ಶ್ರೀನಿವಾಸ್ (40), ಅವರ ಪತ್ನಿ ಉಷಾರಾಣಿ (36), ಅವರ ಮಕ್ಕಳಾದ ಶೈಲಜಾ (9), ಶ್ರೀಹಾನ್ (5), ಮತ್ತು ಶ್ರೀನಿವಾಸ್ ಅವರ ತಾಯಿ ರಮಣಮ್ಮ (65) ಎಂದು ಗುರುತಿಸಲಾಗಿದೆ. ಸ್ಥಳೀಯರು ಮತ್ತು ಡಾ. ಶ್ರೀನಿವಾಸ್ ಅವರ ಸ್ನೇಹಿತರ ಪ್ರಕಾರ, ಅವರು ಆಸ್ಪತ್ರೆಯನ್ನು ಹೊಂದಿದ್ದು, ಬಹಳ ಸಾಲ ಮಾಡಿಕೊಂಡಿದ್ದರು. ಇದೇ ಕಾರಣದಿಂದ ಆಸ್ಪತ್ರೆಯನ್ನು ಟ್ರಸ್ಟ್‌ಗೆ ಬಾಡಿಗೆಗೆ ನೀಡಿದ್ದಾರೆ ಎಂಬ ವದಂತಿಯಿದೆ. ಈ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಪ್ರಕರಣ ದಾಖಲಾಗಬೇಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!