AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜೇಶ್ವರ; ಚಿಕ್ಕ ಬಾಲಕಿಯ ಹೊಡೆದು ರಸ್ತೆಗೆಸೆದು ಕ್ರೌರ್ಯ ಮೆರೆದ ವ್ಯಕ್ತಿ ಬಂಧನ

Kasaragod Crime; ಆರೋಪಿಯು ಬಾಲಕಿಗೆ ಹೊಡೆದು ಆಕೆಯನ್ನು ನೆಲಕ್ಕೆ ಎಸೆದಿರುವ ಸಿಸಿಟಿವಿ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಏಕಾಏಕಿ ಬಾಲಕಿಯತ್ತ ಬಂದ ಆರೋಪಿ ಆಕೆಗೆ ಹೊಡೆಯುತ್ತಾನೆ. ಬಳಿಕ ಆಕೆಯನ್ನು ಎತ್ತಿ ಎಸೆದು ಏನೂ ಆಗಿಯೇ ಇಲ್ಲ ಎಂಬಂತೆ ನಡೆದುಕೊಂಡು ಹೋಗಿ ಮತ್ತೊಂದು ಬದಿಯಲ್ಲಿ ನಿಂತಿರುವುದು ವಿಡಿಯೊದಲ್ಲಿದೆ.

ಮಂಜೇಶ್ವರ; ಚಿಕ್ಕ ಬಾಲಕಿಯ ಹೊಡೆದು ರಸ್ತೆಗೆಸೆದು ಕ್ರೌರ್ಯ ಮೆರೆದ ವ್ಯಕ್ತಿ ಬಂಧನ
ಆರೋಪಿಯು ಬಾಲಕಿಯನ್ನು ಎತ್ತಿ ಎಸೆದಿರುವುದು (ಟ್ವಿಟರ್ ಸ್ಕ್ರೀನ್​ಗ್ರ್ಯಾಬ್ ಚಿತ್ರ)
TV9 Web
| Edited By: |

Updated on: Nov 18, 2022 | 12:23 PM

Share

ಕಾಸರಗೋಡು: ರಸ್ತೆ ಬದಲಿಯಲ್ಲಿದ್ದ 8 ವರ್ಷ ವಯಸ್ಸಿನ ಬಾಲಕಿಯನ್ನು ವ್ಯಕ್ತಿಯೊಬ್ಬ ಹೊಡೆದು, ಎತ್ತಿ ರಸ್ತೆಗೆ ಎಸೆದ ಘಟನೆ ಕೇರಳದ ಕಾಸರಗೋಡಿ (Kasaragod) ಮಂಜೇಶ್ವರ (Manjeshwar) ಎಂಬಲ್ಲಿ ಗುರುವಾರ ನಡೆದಿದೆ. ಬಾಲಕಿಯು ಮದರಸಾದಿಂದ ಹೊರಬಂದು ಮನೆಯವರಿಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಎಂಬಾತನನ್ನು ಬಂಧಿಸಲಾಗಿದೆ. ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಘಾತಗೊಂಡು ನಿಂತಿದ್ದ ಬಾಲಕಿಯನ್ನು ಗಮನಿಸಿದ ಮನೆಯವರು ಏನಾಗಿದೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ, ಯಾರೋ ಬಂದು ಹೊಡೆದಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ಸಮೀಪದ ಶಾಲೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಆರೋಪಿಯು ಬಾಲಕಿಗೆ ಹೊಡೆದು ಆಕೆಯನ್ನು ನೆಲಕ್ಕೆ ಎಸೆದಿರುವ ಸಿಸಿಟಿವಿ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಏಕಾಏಕಿ ಬಾಲಕಿಯತ್ತ ಬಂದ ಆರೋಪಿ ಆಕೆಗೆ ಹೊಡೆಯುತ್ತಾನೆ. ಬಳಿಕ ಆಕೆಯನ್ನು ಎತ್ತಿ ಎಸೆದು ಏನೂ ಆಗಿಯೇ ಇಲ್ಲ ಎಂಬಂತೆ ನಡೆದುಕೊಂಡು ಹೋಗಿ ಮತ್ತೊಂದು ಬದಿಯಲ್ಲಿ ನಿಂತಿರುವುದು ವಿಡಿಯೊದಲ್ಲಿದೆ. ದಿಢೀರ್ ಹಲ್ಲೆಯಿಂದ ಆಘಾತಗೊಂಡ ಬಾಲಕಿ ಅಲ್ಲಿಂದ ಎದ್ದು ಬದಿಗೆ ಸರಿಯುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.

ವಿಡಿಯೊ ಇಲ್ಲಿದೆ;

ಘಟನೆಯಿಂದ ಆಘಾತಗೊಂಡಿದ್ದ ಬಾಲಕಿ ಆರಂಭದಲ್ಲಿ ಏನೂ ಹೇಳಿರಲಿಲ್ಲ. ಕೊನೆಯಲ್ಲಿ ಯಾರೋ ಹೊಡೆದರು ಎಂದಷ್ಟೇ ಹೇಳಿದಳು. ಆಮೇಲೆ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ನಿಜ ವಿಚಾರ ತಿಳಿಯಿತು ಎಂದು ಆಕೆಯ ಸಂಬಂಧಿಕರು ತಿಳಿಸಿದ್ದಾರೆ.

ಘಟನೆ ಸಂಬಂಧಿತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಬಾಲಕಿ ಗಾಯಗೊಂಡಿರುವುದು ತಿಳಿದುಬಂದಿಲ್ಲ. ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು