AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜೇಶ್ವರ; ಚಿಕ್ಕ ಬಾಲಕಿಯ ಹೊಡೆದು ರಸ್ತೆಗೆಸೆದು ಕ್ರೌರ್ಯ ಮೆರೆದ ವ್ಯಕ್ತಿ ಬಂಧನ

Kasaragod Crime; ಆರೋಪಿಯು ಬಾಲಕಿಗೆ ಹೊಡೆದು ಆಕೆಯನ್ನು ನೆಲಕ್ಕೆ ಎಸೆದಿರುವ ಸಿಸಿಟಿವಿ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಏಕಾಏಕಿ ಬಾಲಕಿಯತ್ತ ಬಂದ ಆರೋಪಿ ಆಕೆಗೆ ಹೊಡೆಯುತ್ತಾನೆ. ಬಳಿಕ ಆಕೆಯನ್ನು ಎತ್ತಿ ಎಸೆದು ಏನೂ ಆಗಿಯೇ ಇಲ್ಲ ಎಂಬಂತೆ ನಡೆದುಕೊಂಡು ಹೋಗಿ ಮತ್ತೊಂದು ಬದಿಯಲ್ಲಿ ನಿಂತಿರುವುದು ವಿಡಿಯೊದಲ್ಲಿದೆ.

ಮಂಜೇಶ್ವರ; ಚಿಕ್ಕ ಬಾಲಕಿಯ ಹೊಡೆದು ರಸ್ತೆಗೆಸೆದು ಕ್ರೌರ್ಯ ಮೆರೆದ ವ್ಯಕ್ತಿ ಬಂಧನ
ಆರೋಪಿಯು ಬಾಲಕಿಯನ್ನು ಎತ್ತಿ ಎಸೆದಿರುವುದು (ಟ್ವಿಟರ್ ಸ್ಕ್ರೀನ್​ಗ್ರ್ಯಾಬ್ ಚಿತ್ರ)
TV9 Web
| Edited By: |

Updated on: Nov 18, 2022 | 12:23 PM

Share

ಕಾಸರಗೋಡು: ರಸ್ತೆ ಬದಲಿಯಲ್ಲಿದ್ದ 8 ವರ್ಷ ವಯಸ್ಸಿನ ಬಾಲಕಿಯನ್ನು ವ್ಯಕ್ತಿಯೊಬ್ಬ ಹೊಡೆದು, ಎತ್ತಿ ರಸ್ತೆಗೆ ಎಸೆದ ಘಟನೆ ಕೇರಳದ ಕಾಸರಗೋಡಿ (Kasaragod) ಮಂಜೇಶ್ವರ (Manjeshwar) ಎಂಬಲ್ಲಿ ಗುರುವಾರ ನಡೆದಿದೆ. ಬಾಲಕಿಯು ಮದರಸಾದಿಂದ ಹೊರಬಂದು ಮನೆಯವರಿಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಎಂಬಾತನನ್ನು ಬಂಧಿಸಲಾಗಿದೆ. ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಘಾತಗೊಂಡು ನಿಂತಿದ್ದ ಬಾಲಕಿಯನ್ನು ಗಮನಿಸಿದ ಮನೆಯವರು ಏನಾಗಿದೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ, ಯಾರೋ ಬಂದು ಹೊಡೆದಿರುವುದಾಗಿ ಬಾಲಕಿ ತಿಳಿಸಿದ್ದಾಳೆ. ಸಮೀಪದ ಶಾಲೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಆರೋಪಿಯು ಬಾಲಕಿಗೆ ಹೊಡೆದು ಆಕೆಯನ್ನು ನೆಲಕ್ಕೆ ಎಸೆದಿರುವ ಸಿಸಿಟಿವಿ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಏಕಾಏಕಿ ಬಾಲಕಿಯತ್ತ ಬಂದ ಆರೋಪಿ ಆಕೆಗೆ ಹೊಡೆಯುತ್ತಾನೆ. ಬಳಿಕ ಆಕೆಯನ್ನು ಎತ್ತಿ ಎಸೆದು ಏನೂ ಆಗಿಯೇ ಇಲ್ಲ ಎಂಬಂತೆ ನಡೆದುಕೊಂಡು ಹೋಗಿ ಮತ್ತೊಂದು ಬದಿಯಲ್ಲಿ ನಿಂತಿರುವುದು ವಿಡಿಯೊದಲ್ಲಿದೆ. ದಿಢೀರ್ ಹಲ್ಲೆಯಿಂದ ಆಘಾತಗೊಂಡ ಬಾಲಕಿ ಅಲ್ಲಿಂದ ಎದ್ದು ಬದಿಗೆ ಸರಿಯುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.

ವಿಡಿಯೊ ಇಲ್ಲಿದೆ;

ಘಟನೆಯಿಂದ ಆಘಾತಗೊಂಡಿದ್ದ ಬಾಲಕಿ ಆರಂಭದಲ್ಲಿ ಏನೂ ಹೇಳಿರಲಿಲ್ಲ. ಕೊನೆಯಲ್ಲಿ ಯಾರೋ ಹೊಡೆದರು ಎಂದಷ್ಟೇ ಹೇಳಿದಳು. ಆಮೇಲೆ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ನಿಜ ವಿಚಾರ ತಿಳಿಯಿತು ಎಂದು ಆಕೆಯ ಸಂಬಂಧಿಕರು ತಿಳಿಸಿದ್ದಾರೆ.

ಘಟನೆ ಸಂಬಂಧಿತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಬಾಲಕಿ ಗಾಯಗೊಂಡಿರುವುದು ತಿಳಿದುಬಂದಿಲ್ಲ. ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ