AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕುಕ್ಕರ್‌ನಿಂದ ಹೆಂಡತಿಗೆ ಹೊಡೆದು ಆತ್ಮಹತ್ಯೆಗೆ ಯತ್ನಿಸಿದ ಗಂಡ

ಪೊಲೀಸರ ಪ್ರಕಾರ, ಪ್ರೆಶರ್ ಕುಕ್ಕರ್​ನಿಂದ ಹೊಡೆದು ತನ್ನ ಹೆಂಡತಿಯನ್ನು ಕೊಂದ ನಂತರ ವ್ಯಕ್ತಿಯೊಬ್ಬ ರೈಲ್ವೆ ಹಳಿಯ ಮೇಲೆ ಮಲಗಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ, ಆತನನ್ನು ರಕ್ಷಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Crime News: ಕುಕ್ಕರ್‌ನಿಂದ ಹೆಂಡತಿಗೆ ಹೊಡೆದು ಆತ್ಮಹತ್ಯೆಗೆ ಯತ್ನಿಸಿದ ಗಂಡ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jun 18, 2024 | 8:30 PM

Share

ನವದೆಹಲಿ: ಮನೆಯಲ್ಲಿ ಹೆಂಡತಿಯೊಂದಿಗೆ ಗಲಾಟೆ ಮಾಡಿಕೊಂಡ ನಂತರ ಆಕೆಗೆ ಕುಕ್ಕರ್​​ನಲ್ಲಿ ಹೊಡೆದು ಗಂಡನೇ ಕೊಲೆ (Murder) ಮಾಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಹೆಂಡತಿಯೊಂದಿಗೆ ಗಲಾಟೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರೆಶರ್ ಕುಕ್ಕರ್‌ನಿಂದ ಹೊಡೆದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಸೋಮವಾರ ಕೊಲೆ ಮಾಡಿದ್ದಾನೆ. ಬಳಿಕ ಆ ವ್ಯಕ್ತಿ ಆತ್ಮಹತ್ಯೆಗೆ (Suicide) ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.

“20 ವರ್ಷದ ಆಯುಷಿ ಮಿಶ್ರಾ ಎಂದು ಗುರುತಿಸಲಾದ ಮಹಿಳೆಯ ವಿರೂಪಗೊಂಡ ಶವವನ್ನು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಎಂ ಆವಾಸ್ ಯೋಜನೆಯಲ್ಲಿರುವ ಅವರ ಮನೆಯಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ” ಎಂದು ದಕ್ಷಿಣದ ಹೆಚ್ಚುವರಿ ಪೊಲೀಸ್ ಉಪ ಕಮಿಷನರ್ ಶಶಾಂಕ್ ಸಿಂಗ್ ಹೇಳಿದ್ದಾರೆ.

“30 ವರ್ಷದ ನಿತಿನ್ ಮಿಶ್ರಾ ಮತ್ತು ಅವರ ಪತ್ನಿಯ ನಡುವಿನ ತೀವ್ರ ಜಗಳವೇ ಕೊಲೆಗೆ ಕಾರಣ ಎಂದು ಹೇಳಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ. ಆ ದಂಪತಿ ಕೇವಲ 1 ವರ್ಷದ ಹಿಂದೆ ವಿವಾಹವಾಗಿದ್ದರು.

ಇದನ್ನೂ ಓದಿ: ಪ್ರಿಯಕರನ ಜತೆ ಸೇರಿ ಗಂಡನ ಕೊಲೆಗೆ ಸಂಚು, ಅಪಘಾತದಲ್ಲೂ ಸಾಯ್ಲಿಲ್ಲ ಕೊನೆಗೆ ಗುಂಡು ಹಾರಿಸಿ ಕೊಂದ ಪತ್ನಿ

ಪೊಲೀಸರ ಪ್ರಕಾರ, ತನ್ನ ಹೆಂಡತಿಯನ್ನು ಕೊಂದ ನಂತರ, ಆ ವ್ಯಕ್ತಿ ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಈ ಪ್ರಕ್ರಿಯೆಯಲ್ಲಿ ಆತ ಗಾಯಗೊಂಡಿದ್ದಾನೆ. ಪೊಲೀಸರು ವ್ಯಕ್ತಿಯನ್ನು ವಿಚಾರಿಸಿದಾಗ ಕೊಲೆಯ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾನೆ. ನಂತರ ಪೊಲೀಸರು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರು ಮನೆಗೆ ತಲುಪಿದಾಗ ಆ ಮಹಿಳೆಯ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿತು. ವರದಿಯ ಪ್ರಕಾರ, ಸೀತಾಪುರ ಮೂಲದ 30 ವರ್ಷದ ನಿತಿನ್ ಮಿಶ್ರಾ ರಿಯಲ್ ಎಸ್ಟೇಟ್ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಪತ್ನಿಯೊಂದಿಗೆ ಬಾಡಿಗೆಗೆ ವಾಸವಾಗಿದ್ದರು. ಪತಿ-ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಬದಲಾಯಿತು ವಿಚಾರಣೆ ಭಾಷೆ; ಪೊಲೀಸರ ಕಾಲಿಗೆ ಬಿದ್ದ ಕೊಲೆ ಆರೋಪಿ ದರ್ಶನ್?

ಪತ್ನಿಯನ್ನು ಕೊಂದ ಬಳಿಕ ನಿತಿನ್ ಮನೆಯ ಬಾಗಿಲು ಮುಚ್ಚಿ ಧೌಧನ್ ಖೇಡಾ ಬಳಿಯ ರೈಲ್ವೆ ಹಳಿ ತಲುಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲಿನ ಮುಂದೆ ಜಿಗಿಯಲು ಯತ್ನಿಸಿದ ಕೂಡಲೇ ಜನರು ಜಿಆರ್‌ಪಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆತನನ್ನು ರಕ್ಷಿಸಲಾಯಿತು. ಆಗ ಅವನ ಕೈಕಾಲುಗಳಿಗೆ ಗಾಯವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ