AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪ್ರೇಮಿ; ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ

ತಮ್ಮ ಸಂಬಂಧವನ್ನು ಮುಂದುವರೆಸಲು ಆ ಯುವತಿ ನಿರಾಕರಿಸಿದ್ದರಿಂದ ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ.

Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪ್ರೇಮಿ; ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ
ಮಾಜಿ ಪ್ರೇಯಸಿಗೆ ಚಾಕುವಿನಿಂದ ಇರಿದ ಯುವಕImage Credit source: Zee News
TV9 Web
| Edited By: |

Updated on: Jan 04, 2023 | 12:33 PM

Share

ನವದೆಹಲಿ: ದೆಹಲಿಯ ಕಾಂಜಾವಾಲಾದಲ್ಲಿ (Kanjhawala Accident) ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದು, ಕಾರಿನಲ್ಲಿ ಆಕೆಯನ್ನು ಎಳೆದುಕೊಂಡು ಹೋಗಿ ಕೊಂದ ಘಟನೆಯ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ (Shocking News) ಬೆಳಕಿಗೆ ಬಂದಿದೆ. ಜನವರಿ 2ರಂದು ವಾಯುವ್ಯ ದೆಹಲಿಯ ಆದರ್ಶ್ ನಗರದಲ್ಲಿ ಯುವತಿಯೊಬ್ಬಳು ತನ್ನ ಜೊತೆಗಿನ ಪ್ರೀತಿಯನ್ನು ಮುಂದುವರೆಸಲು ಒಪ್ಪದ ಕಾರಣ ಕೋಪಗೊಂಡ ಯುವಕ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಚಾಕುವಿನಿಂದ ಆಕೆಗೆ ಇರಿದು ಕೊಲ್ಲಲು ಪ್ರಯತ್ನಿಸಿದ್ದಾನೆ. ಆದರೆ, ಅದೃಷ್ಟವಶಾತ್ ಆಕೆ ಬದುಕುಳಿದಿದ್ದಾಳೆ.

ತಮ್ಮ ಸಂಬಂಧವನ್ನು ಮುಂದುವರೆಸಲು ಆ ಯುವತಿ ನಿರಾಕರಿಸಿದ್ದರಿಂದ ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನು ಸುಖ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವನನ್ನು ಹರಿಯಾಣದ ಅಂಬಾಲಾದಿಂದ ಬಂಧಿಸಲಾಗಿದೆ. ಗಾಯಗೊಂಡ ಯುವತಿಯನ್ನು ದೆಹಲಿಯ ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಕಾಲೇಜೊಂದರಲ್ಲಿ ಹಾಡಹಗಲೇ ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಯುವಕ: ಪ್ರೀತಿ ಪ್ರೇಮದ ಶಂಕೆ

ಮಾಧ್ಯಮ ವರದಿಗಳ ಪ್ರಕಾರ, ಆ ಯುವತಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದು, ಕಳೆದ 5 ವರ್ಷಗಳ ಹಿಂದೆ ಸುಖ್ವಿಂದರ್ ಜೊತೆ ಸಂಬಂಧ ಹೊಂದಿದ್ದಳು. ಎಎನ್‌ಐ ಹಂಚಿಕೊಂಡಿರುವ ಸಿಸಿಟಿವಿ ಫೂಟೇಜ್‌ನಲ್ಲಿ ಆರೋಪಿಯು ಆ ಯುವತಿಗೆ ಪದೇ ಪದೇ ಚಾಕುವಿನಿಂದ ಇರಿದಿರುವುದು ಕಂಡುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ