Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಗೆ ಬೇರೆಯವನೊಂದಿಗೆ ಮದುವೆ ನಿಶ್ಚಯ; ವಿಚಾರಿಸಲು ಹೋದ ಯುವಕನನ್ನು ಕೊಂದ ಕುಟುಂಬಸ್ಥರು

ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪ್ರೇಯಸಿಗೆ ಬೇರೆಯವನೊಂದಿಗೆ ಮದುವೆ ನಿಶ್ಚಯ; ವಿಚಾರಿಸಲು ಹೋದ ಯುವಕನನ್ನು ಕೊಂದ ಕುಟುಂಬಸ್ಥರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on:Jun 24, 2021 | 12:26 PM

ಪ್ರೀತಿಸುತ್ತಿದ್ದ ಯುವತಿಯ ಮನೆಯವರು, 21 ವರ್ಷದ ಯುವಕನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ದಿಂಡಿಗಲ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಲಾಗಿದೆ ಎಂದು ವರದಿಗಳ ಪ್ರಕಾರ ತಿಳಿದು ಬಂದಿದೆ.

21 ವರ್ಷದ ಯುವಕನ ಹೆಸರು ಭಾರತಿರಾಜ. ದಿಂಡಿಗಲ್​ ಜಿಲ್ಲೆಯ ಪುದುಪುಟ್ಟಿ ಮೂಲದವನು. ಸುರುಮೈನ ಖಾಸಗಿ ಹೊಟೇಲ್​ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಐದು ವರ್ಷಗಳಿಂದ 20 ವರ್ಷದ ಯುವತಿ ಪರಮೇಶ್ವರಿಯನ್ನು ಪ್ರೀತಿಸುತ್ತಿದ್ದ. ಈ ಕುರಿತಂತೆ ಯುವತಿ ಕುಟುಂಬಸ್ಥರಿಗೆ ತಿಳಿದಾಗ ಇವರ ಪ್ರೀತಿಯನ್ನು ನಿರಾಕರಿಸಿದ್ದಾರೆ ಹಾಗೂ ಬೇರೆ ಹುಡುಗನೊಂದಿಗೆ ಮದುವೆ ನಿಶ್ಚಯ ಮಾಡಲು ನಿರ್ಧರಿಸಿದ್ದಾರೆ.

ಈ ವಿಷಯನ್ನು ಪ್ರಿಯತಮ ಭಾರತಿರಾಜನಿಗೆ  ಯುವತಿ ಪರಮೇಶ್ವರಿ ಹೇಳಿದ್ದಾಳೆ. ವಿಷಯ ತಿಳಿದ ಬಳಿಕವೇ ಭಾರತಿರಾಜ ತನ್ನಿಬ್ಬರ ಸ್ನೇಹಿತರೊಡನೆ ಆಕೆಯ ಮನೆಗೆ ತೆರಳಿದ್ದಾನೆ. ಆ ಸಂದರ್ಭದಲ್ಲಿ ಪರಮೇಶ್ವರಿ ಕುಟುಂಬಸ್ಥರು ಮತ್ತು ಭಾರತಿರಾಜನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಪರಮೇಶ್ವರಿ ಸಹೋದರ ಮಲೈಸಾಮಿ ಭಾರತಿರಾಜನಿಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಇಬ್ಬರ ಜಗಳದಲ್ಲಿ ಗಂಭೀರ ಗಾಯಗೊಂಡ ಇವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾರತಿರಾಜ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿದ ಭಾರತಿರಾಜ ಅವರ ತಂದೆ, ನನ್ನ ಮಗನ ಸಾವಿನಲ್ಲಿ ಭಾಗಿಯಾದವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಾಥಮಿಕ ತನಿಖೆಯ ಬಳಿಕ ಪರಮೇಶ್ವರಿ ಪೋಷಕರಾದ ರಸು(63),ಅಲಕುನಾಚಿ(58) ಸಹೋದರರಾದ ಮಲೈಸಾಮಿ(33) ಮತ್ತು ಬಾಲ​ಕುಮಾರ್​(28) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:

Rekha Kadiresh: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್​ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ವರದಕ್ಷಿಣೆ ಕಿರುಕುಳ; ಮದುವೆಯಾದ ಮೂರೇ ತಿಂಗಳಿಗೆ ಯುವತಿ ಕೊಲೆ, ಪರಾರಿಯಾದ ಕುಟುಂಬ

Published On - 12:20 pm, Thu, 24 June 21

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್