AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮುಂಬೈನಲ್ಲಿ ಹಾಡಹಗಲೇ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ; ವೈರಲ್ ಆಗಿರುವ ಭಯಾನಕ ವಿಡಿಯೋ ಇಲ್ಲಿದೆ

Shocking Video | ಐದಾರು ಜನರು ಬಂದು ವಕೀಲ ಸತ್ಯದೇವ್ ಮೇಲೆ ಮಚ್ಚು, ಲಾಂಗಿನಿಂದ ದಾಳಿ ನಡೆಸಿರುವುದು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.

Crime News: ಮುಂಬೈನಲ್ಲಿ ಹಾಡಹಗಲೇ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ; ವೈರಲ್ ಆಗಿರುವ ಭಯಾನಕ ವಿಡಿಯೋ ಇಲ್ಲಿದೆ
ವಕೀಲನನ್ನು ಥಳಿಸಿರುವ ದೃಶ್ಯ
TV9 Web
| Edited By: |

Updated on: Jul 19, 2021 | 6:40 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈ ಮಹಾನಗರಿಯಲ್ಲಿ ರೌಡಿಸಂ ಇನ್ನೂ ನಿಂತಿಲ್ಲ. ಇಲ್ಲಿ ದಿನನಿತ್ಯ ಹತ್ತಾರು ಕೊಲೆ, ಸುಲಿಗೆ, ಕಿಡ್ನಾಪ್, ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿರುತ್ತವೆ. ಸದ್ಯಕ್ಕೆ ಮುಂಬೈನ ವಕೀಲರೊಬ್ಬರ ಮೇಲೆ ಹಾಡಹಗಲೇ ದುರ್ಷರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 

ಮುಂಬೈನ ಬೋರಿವಲಿ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನದ ವೇಳೆ ಕಾರಿನಲ್ಲಿ ಹೋಗುತ್ತಿದ್ದ ವಕೀಲ ಸತ್ಯದೇವ್ ಜೋಷಿ ಎಂಬುವವರನ್ನು ರೌಡಿಗಳ ಗುಂಪೊಂದು ಅಡ್ಡಹಾಕಿತ್ತು. ಕೈಯಲ್ಲಿ ಮಚ್ಚು, ಲಾಂಗುಗಳನ್ನು ಹಿಡಿದುಕೊಂಡು ಬಂದಿದ್ದ ಅವರು ಜೋಷಿಯ ಕಾರನ್ನು ಮಧ್ಯರಸ್ತೆಯಲ್ಲಿ ಅಡ್ಡಹಾಕಿದ್ದರು. ಕಾರಿನಿಂದ ಇಳಿದು ಏನೆಂದು ಕೇಳುತ್ತಿದ್ದಾಗ ಅವರ ಹಿಂದಿನಿಂದ ಬಂದ ರೌಡಿಗಳು ಮಚ್ಚಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾರೆ. ದೊಣ್ಣೆಗಳಿಂದಲೂ ಥಳಿಸಿದ್ದಾರೆ.

ವಕೀಲ ಮದನ್ ಜೆ. ಗುಪ್ತಾ ಎಂಬುವವರು ಟ್ವಿಟ್ಟರ್​ನಲ್ಲಿ ಈ ಭಯಾನಕವಾದ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಐದಾರು ಜನರು ಬಂದು ವಕೀಲ ಸತ್ಯದೇವ್ ಮೇಲೆ ದಾಳಿ ನಡೆಸಿರುವುದು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಹಗಲು ವೇಳೆಯಲ್ಲೇ ಒಬ್ಬ ವಕೀಲರಿಗೆ ಈ ರೀತಿ ಆಗಿರುವುದನ್ನು ನೋಡಿದ ನೆಟ್ಟಿಗರು ಮುಂಬೈನಲ್ಲಿ ಜನಸಾಮಾನ್ಯರಿಗೆ ಯಾವ ರೀತಿಯ ರಕ್ಷಣೆಯನ್ನು ನಿರೀಕ್ಷಿಸಲು ಸಾಧ್ಯ ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದು, ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಈ ರೀತಿ ವಕೀಲರ ಮೇಲೆ ಹಲ್ಲೆ ನಡೆಸಲು ಕಾರಣವೇನೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಸತ್ಯದೇವ್ ವಾದ ಮಂಡನೆ ಮಾಡುತ್ತಿದ್ದ ಕಕ್ಷಿದಾರರ ವಿರೋಧಿ ಬಣದಿಂದ ಈ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.

ಈ ಘಟನೆಯಲ್ಲಿ ವಕೀಲ ಸತ್ಯದೇವ್ ಜೋಷಿ ಗಂಭೀರವಾಗಿ ಗಾಯಗೊಂಡಿದ್ದು, ಹೊಟ್ಟೆ, ತಲೆಗೆ ಹೊಲಿಗೆಯನ್ನು ಹಾಕಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಹೇಳಿಕೆ ನೀಡಿದ ನಂತರ ಅಸಲಿ ವಿಷಯ ಗೊತ್ತಾಗುವ ಸಾಧ್ಯತೆಯಿದೆ. ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Cadbury Chocolate: ಡೇರಿ ಮಿಲ್ಕ್ ಚಾಕೋಲೇಟ್​ನಲ್ಲಿ ದನದ ಮಾಂಸವಿದೆಯಾ?; ಕ್ಯಾಡ್​ಬರಿಯಿಂದ ಅಚ್ಚರಿಯ ಸ್ಪಷ್ಟನೆ

Viral Video: ಮದುವೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ವಧು; ಕಂಗಾಲಾಗಿ ಮಂಟಪದಿಂದ ಓಡಿಹೋದ ವರ!

(Mumbai lawyer attacked with swords in Borivali in daylight Watch Shocking Video)

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ