AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮುಂಬೈನಲ್ಲಿ ಹಾಡಹಗಲೇ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ; ವೈರಲ್ ಆಗಿರುವ ಭಯಾನಕ ವಿಡಿಯೋ ಇಲ್ಲಿದೆ

Shocking Video | ಐದಾರು ಜನರು ಬಂದು ವಕೀಲ ಸತ್ಯದೇವ್ ಮೇಲೆ ಮಚ್ಚು, ಲಾಂಗಿನಿಂದ ದಾಳಿ ನಡೆಸಿರುವುದು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.

Crime News: ಮುಂಬೈನಲ್ಲಿ ಹಾಡಹಗಲೇ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ; ವೈರಲ್ ಆಗಿರುವ ಭಯಾನಕ ವಿಡಿಯೋ ಇಲ್ಲಿದೆ
ವಕೀಲನನ್ನು ಥಳಿಸಿರುವ ದೃಶ್ಯ
TV9 Web
| Edited By: |

Updated on: Jul 19, 2021 | 6:40 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈ ಮಹಾನಗರಿಯಲ್ಲಿ ರೌಡಿಸಂ ಇನ್ನೂ ನಿಂತಿಲ್ಲ. ಇಲ್ಲಿ ದಿನನಿತ್ಯ ಹತ್ತಾರು ಕೊಲೆ, ಸುಲಿಗೆ, ಕಿಡ್ನಾಪ್, ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿರುತ್ತವೆ. ಸದ್ಯಕ್ಕೆ ಮುಂಬೈನ ವಕೀಲರೊಬ್ಬರ ಮೇಲೆ ಹಾಡಹಗಲೇ ದುರ್ಷರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 

ಮುಂಬೈನ ಬೋರಿವಲಿ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನದ ವೇಳೆ ಕಾರಿನಲ್ಲಿ ಹೋಗುತ್ತಿದ್ದ ವಕೀಲ ಸತ್ಯದೇವ್ ಜೋಷಿ ಎಂಬುವವರನ್ನು ರೌಡಿಗಳ ಗುಂಪೊಂದು ಅಡ್ಡಹಾಕಿತ್ತು. ಕೈಯಲ್ಲಿ ಮಚ್ಚು, ಲಾಂಗುಗಳನ್ನು ಹಿಡಿದುಕೊಂಡು ಬಂದಿದ್ದ ಅವರು ಜೋಷಿಯ ಕಾರನ್ನು ಮಧ್ಯರಸ್ತೆಯಲ್ಲಿ ಅಡ್ಡಹಾಕಿದ್ದರು. ಕಾರಿನಿಂದ ಇಳಿದು ಏನೆಂದು ಕೇಳುತ್ತಿದ್ದಾಗ ಅವರ ಹಿಂದಿನಿಂದ ಬಂದ ರೌಡಿಗಳು ಮಚ್ಚಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾರೆ. ದೊಣ್ಣೆಗಳಿಂದಲೂ ಥಳಿಸಿದ್ದಾರೆ.

ವಕೀಲ ಮದನ್ ಜೆ. ಗುಪ್ತಾ ಎಂಬುವವರು ಟ್ವಿಟ್ಟರ್​ನಲ್ಲಿ ಈ ಭಯಾನಕವಾದ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಐದಾರು ಜನರು ಬಂದು ವಕೀಲ ಸತ್ಯದೇವ್ ಮೇಲೆ ದಾಳಿ ನಡೆಸಿರುವುದು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಹಗಲು ವೇಳೆಯಲ್ಲೇ ಒಬ್ಬ ವಕೀಲರಿಗೆ ಈ ರೀತಿ ಆಗಿರುವುದನ್ನು ನೋಡಿದ ನೆಟ್ಟಿಗರು ಮುಂಬೈನಲ್ಲಿ ಜನಸಾಮಾನ್ಯರಿಗೆ ಯಾವ ರೀತಿಯ ರಕ್ಷಣೆಯನ್ನು ನಿರೀಕ್ಷಿಸಲು ಸಾಧ್ಯ ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದು, ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಈ ರೀತಿ ವಕೀಲರ ಮೇಲೆ ಹಲ್ಲೆ ನಡೆಸಲು ಕಾರಣವೇನೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಸತ್ಯದೇವ್ ವಾದ ಮಂಡನೆ ಮಾಡುತ್ತಿದ್ದ ಕಕ್ಷಿದಾರರ ವಿರೋಧಿ ಬಣದಿಂದ ಈ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.

ಈ ಘಟನೆಯಲ್ಲಿ ವಕೀಲ ಸತ್ಯದೇವ್ ಜೋಷಿ ಗಂಭೀರವಾಗಿ ಗಾಯಗೊಂಡಿದ್ದು, ಹೊಟ್ಟೆ, ತಲೆಗೆ ಹೊಲಿಗೆಯನ್ನು ಹಾಕಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಹೇಳಿಕೆ ನೀಡಿದ ನಂತರ ಅಸಲಿ ವಿಷಯ ಗೊತ್ತಾಗುವ ಸಾಧ್ಯತೆಯಿದೆ. ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Cadbury Chocolate: ಡೇರಿ ಮಿಲ್ಕ್ ಚಾಕೋಲೇಟ್​ನಲ್ಲಿ ದನದ ಮಾಂಸವಿದೆಯಾ?; ಕ್ಯಾಡ್​ಬರಿಯಿಂದ ಅಚ್ಚರಿಯ ಸ್ಪಷ್ಟನೆ

Viral Video: ಮದುವೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ವಧು; ಕಂಗಾಲಾಗಿ ಮಂಟಪದಿಂದ ಓಡಿಹೋದ ವರ!

(Mumbai lawyer attacked with swords in Borivali in daylight Watch Shocking Video)

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ