AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಕ್ಕೆ ಬರುವ ಯುವತಿಯರ ಅಶ್ಲೀಲ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಗಿಡ್ಡ ಡ್ರೆಸ್ ಹಾಕಿಕೊಂಡು ಪ್ರವಾಸಕ್ಕೆ ಬರುತ್ತಿದ್ದ ಯುವತಿಯರ ವಿಡಿಯೋಗಳನ್ನು ತೆಗೆಯುತ್ತಿದ್ದ ವ್ಯಕ್ತಿ ಆ ವಿಡಿಯೋಗಳನ್ನು ಕೆಟ್ಟದಾಗಿ ಬಳಸಿಕೊಳ್ಳುತ್ತಿದ್ದ.

ಪ್ರವಾಸಕ್ಕೆ ಬರುವ ಯುವತಿಯರ ಅಶ್ಲೀಲ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 17, 2021 | 7:37 PM

Share

ಜೈಪುರ: ರಾಜಸ್ಥಾನದ ಜೈಪುರಕ್ಕೆ ಪ್ರವಾಸಕ್ಕೆ ಬರುವ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಅವರ ಅಶ್ಲೀಲ ಚಿತ್ರಗಳನ್ನು ವಿಡಿಯೋ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಿಡ್ಡ ಡ್ರೆಸ್ ಹಾಕಿಕೊಂಡು ಪ್ರವಾಸಕ್ಕೆ ಬರುತ್ತಿದ್ದ ಯುವತಿಯರ ವಿಡಿಯೋಗಳನ್ನು ತೆಗೆಯುತ್ತಿದ್ದ ವ್ಯಕ್ತಿ ಆ ವಿಡಿಯೋಗಳನ್ನು ಕೆಟ್ಟದಾಗಿ ಬಳಸಿಕೊಳ್ಳುತ್ತಿದ್ದ. ಅಂಬರ್ ಕೋಟೆಯಲ್ಲಿ ಆ ವ್ಯಕ್ತಿಯನ್ನು ರೆಡ್​ಹ್ಯಾಂಡ್ ಆಗಿ ಹಿಡಿದಿರುವ ಪೊಲೀಸರಿಗೆ ಆತನ ಮೊಬೈಲ್​ನಲ್ಲಿ ಆ ರೀತಿಯ ಅಸಭ್ಯ ಹಾಗೂ ಅಶ್ಲೀಲವಾದ 200ಕ್ಕೂ ಹೆಚ್ಚು ವಿಡಿಯೋಗಳು ಸಿಕ್ಕಿವೆ.

ಸಿಕರ್ ಜಿಲ್ಲೆಯ ನಿವಾಸಿಯಾಗಿರುವ ಸುರೇಶ್ ಕುಮಾರ್ ಯಾದವ್ ಎಂಬ 34 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಸುಮಾರು 3 ತಿಂಗಳಿನಿಂದ ಪ್ರವಾಸಕ್ಕೆ ಬರುವ ಯುವತಿಯರ ವಿಡಿಯೋಗಳನ್ನು ಚಿತ್ರೀಕರಿಸಿಕೊಳ್ಳುತ್ತಿದ್ದುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ.

ಪ್ರವಾಸಕ್ಕೆ ಬರುವ ಯುವತಿಯರ ಪಕ್ಕದಲ್ಲಿ ಕುಳೀತುಕೊಳ್ಳುತ್ತಿದ್ದ ಸುರೇಶ್ ಆ ಪ್ರವಾಸಿಗರ ಶೂ ಲೇಸ್ ಕಟ್ಟುವ ನೆಪದಲ್ಲಿ ಅಥವಾ ಏನಾದರೂ ಹೆಕ್ಕುವ ನೆಪದಲ್ಲಿ ಕೆಳಗೆ ಬಗ್ಗಿ ಮೊಬೈಲ್​ನಿಂದ ಆ ಯುವತಿಯ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದ. ಗಿಡ್ಡ ಉಡುಗೆ ಹಾಕಿಕೊಳ್ಳುವ ಯುವತಿಯರೇ ಈತನ ಟಾರ್ಗೆಟ್ ಆಗಿದ್ದರು. ಈ ವಿಷಯ ಆ ಯುವತಿಯರಿಗೆ ಗೊತ್ತಾಗದಂತೆ ಎಚ್ಚರ ವಹಿಸುತ್ತಿದ್ದ.

ಆದರೆ, ಈ ಬಗ್ಗೆ ಬೇರೆಯವರಿಂದ ಮಾಹಿತಿ ಸಿಕ್ಕಿದ್ದರಿಂದ ಅಂಬರ್ ಕೋಟೆಗೆ ಮಾಮೂಲಿ ಸೀರೆಯುಟ್ಟು ಹೋಗಿದ್ದ ಮಹಿಳಾ ಪೊಲೀಸ್ ಸುರೇಶ್​ನ ಮೊಬೈಲ್ ಚೆಕ್ ಮಾಡಿದ್ದಳು. ಆಗ ಆತನ ಮೊಬೈಲ್​ನಲ್ಲಿ 200ಕ್ಕೂ ಹೆಚ್ಚು ವಿಡಿಯೋಗಳಿರುವುದು ಪತ್ತೆಯಾಗಿತ್ತು. ಆತನ ಚಲನವಲನಗಳನ್ನು ವೀಕ್ಷಿಸುತ್ತಿದ್ದ ಆ ಪೊಲೀಸ್​ ಅನುಮಾನಗೊಂಡು ಆತನ ಮೊಬೈಲ್ ಪರಿಶೀಲಿಸಿದ್ದರು.

ಪ್ರವಾಸಿ ತಾಣಗಳಾದ ದೇವಸ್ಥಾನಗಳು, ಟ್ರೆಕಿಂಗ್ ತಾಣಗಳು, ಪ್ರವಾಸಿ ಸ್ಥಳಗಳಲ್ಲಿಯೇ ಆ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ಪ್ರವಾಸಿ ಯುವತಿಯರ ವಿಡಿಯೋಗಳಿರುವ ಮೊಬೈಲನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಈ ರೀತಿಯ ವಿಡಿಯೋಗಳನ್ನು ಚಿತ್ರೀಕರಿಸಲೆಂದೇ ತಾನು 3 ತಿಂಗಳಿನಿಂದ ಆಗಾಗ ಜೈಪುರಕ್ಕೆ ಬರುತ್ತಿದ್ದುದಾಗಿ ಆತ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Viral News: ಕೆಟ್ಟ ಕೈ ಬರಹವೇ ಶಾಪವಾಯ್ತು; ಬ್ಯಾಂಕ್​ ದರೋಡೆಗೆ ಹೋದವನು ಬರಿಗೈಯಲ್ಲಿ ಬಂದ!

(Crime News: Rajasthan Police arrested man making obscene videos of tourists in Tourist Places)

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ