AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!

ಅರುಣಾಚಲಪ್ರದೇಶದ ಜೈಲಿನಲ್ಲಿದ್ದ 7 ಮಂದಿ ವಿಚಾರಣಾಧೀನ ಕೈದಿಗಳು ಭಾನುವಾರ ರಾತ್ರಿ ಸೆಕ್ಯುರಿಟಿ ಗಾರ್ಡ್​ಗಳ ಮುಖಕ್ಕೆ ಖಾರದ ಪುಡಿ ಎರಚಿ ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ.

Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 12, 2021 | 5:00 PM

ನಾನಾ ಅಪರಾಧಗಳನ್ನು ಮಾಡಿ ಜೈಲು ಸೇರಿದ್ದ ಅರುಣಾಚಲ ಪ್ರದೇಶದ 7 ಕೈದಿಗಳು ಕಾರಾಗ್ರಹದಲ್ಲೂ ತಮ್ಮ ಅಸಲಿ ಬುದ್ಧಿಯನ್ನು ತೋರಿಸಿದ್ದಾರೆ. ಜೈಲಿಗೆ ಕಾವಲಿದ್ದ ಸೆಕ್ಯುರಿಟಿ ಗಾರ್ಡ್​ಗಳ ಮುಖಕ್ಕೆ ಖಾರದ ಪುಡಿ, ಮೆಣಸಿನ ಕಾಳಿನ ಪುಡಿಯನ್ನು ಎರಚಿ ಜೈಲಿನಿಂದ ಪರಾರಿಯಾಗಿದ್ದಾರೆ. ಈ ಮೂಲಕ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಆ 7 ಕೈದಿಗಳಿಗಾಗಿ ಪೊಲೀಸರು ಮತ್ತೆ ಹುಡುಕಾಟ ನಡೆಸಿದ್ದಾರೆ.

ಅರುಣಾಚಲಪ್ರದೇಶದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿರುವ ಪಾಸಿಘಾಟ್​ ಜೈಲಿನಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಈ ಜೈಲಿನಲ್ಲಿದ್ದ 7 ಮಂದಿ ವಿಚಾರಣಾಧೀನ ಕೈದಿಗಳು ಭಾನುವಾರ ರಾತ್ರಿ ಸೆಕ್ಯುರಿಟಿ ಗಾರ್ಡ್​ಗಳ ಮುಖಕ್ಕೆ ಖಾರದ ಪುಡಿ ಎರಚಿ ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ. ಆ ಜೈಲಿನಲ್ಲಿ 94 ಕೈದಿಗಳಿದ್ದರು.

ಭಾನುವಾರ ರಾತ್ರಿ 7.30ರ ವೇಳೆಗೆ 7 ಕೈದಿಗಳು ಜೈಲಿನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅವರ ಕಣ್ಣಿಗೆ ಖಾರದ ಪುಡಿ ಹಾಕಿದ್ದಾರೆ. ಈ ದಾಳಿಯಲ್ಲಿ ಐದಕ್ಕೂ ಹೆಚ್ಚು ಸೆಕ್ಯುರಿಟಿ ಗಾರ್ಡ್​ಗಳಿಗೆ ಗಾಯಗಳಾಗಿವೆ. ಈ ದಾಳಿ ನಡೆದ ವೇಳೆ ಕೇವಲ 10 ಮಂದಿ ಸೆಕ್ಯುರಿಟಿ ಗಾರ್ಡ್​ಗಳು ಕಾರ್ಯ ನಿರ್ವಹಿಸುತ್ತಿದ್ದರು.

ಪರಾರಿಯಾಗಿರುವ ಕೈದಿಗಳ ಮಾಹಿತಿಯನ್ನು ಎಲ್ಲ ಪೊಲೀಸ್ ಠಾಣೆಗಳಿಗೂ ಕಳುಹಿಸಲಾಗಿದ್ದು, ಅವರನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ. ಅಭಿಜಿತ್ ಗೊಗೋಯ್, ತಾರೋ ಹಮಾಮ್, ಕಲಾಂ ಅಪಂಗ್, ತಾಲುಮ್ ಪನೀಯಿಂಗ್, ಸುಭಾಷ್ ಮಂಡಲ್, ರಾಜಾ ತಾಯೆಂಗ್ ಮತ್ತು ದನಿ ಗಮ್ಲಿನ್ ಜೈಲಿನಿಂದ ಪರಾರಿಯಾಗಿರುವ ಕೈದಿಗಳಾಗಿದ್ದಾರೆ.

ಇದನ್ನೂ ಓದಿ: Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!

ಇದನ್ನೂ ಓದಿ: Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್