AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಹಾರಾಷ್ಟ್ರದಲ್ಲಿ ಮನೆಯೊಳಗೆ ಜನರೇಟರ್ ಸ್ಫೋಟ; ಒಂದೇ ಕುಟುಂಬದ 6 ಜನ ಸಾವು

Maharashtra Crime News: ಈ ಘಟನೆ ಸಂಭವಿಸಿದಾಗ ಮನೆಯಲ್ಲಿದ್ದ ಒಬ್ಬಳು ಅಪ್ರಾಪ್ತ ಬಾಲಕಿಯನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದ್ದು, ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Crime News: ಮಹಾರಾಷ್ಟ್ರದಲ್ಲಿ ಮನೆಯೊಳಗೆ ಜನರೇಟರ್ ಸ್ಫೋಟ; ಒಂದೇ ಕುಟುಂಬದ 6 ಜನ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jul 13, 2021 | 3:41 PM

Share

ಮುಂಬೈ: ಮನೆಯೊಳಗೆ ಜನರೇಟರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಚಂದ್ರಾಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯರಾತ್ರಿ ಈ ದುರಂತ ಸಂಭವಿಸಿದೆ. ಜನರೇಟರ್​ ಸ್ಫೋಟಗೊಂಡಿದ್ದರಿಂದ ಕಾರ್ಬನ್ ಮಾನಾಕ್ಸೈಡ್ (carbon monoxide) ಬಿಡುಗಡೆಯಾಗಿ ಮನೆಯೊಳಗಿದ್ದ 6 ಜನರು ಕೊನೆಯುಸಿರೆಳೆದಿದ್ದಾರೆ. ಸಾವನ್ನಪ್ಪಿದವರಲ್ಲಿ ಮೂವರು ಅಪ್ರಾಪ್ತರು ಕೂಡ ಸೇರಿದ್ದಾರೆ.

ನಿನ್ನೆ ಸಂಜೆಯಿಂದ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ದುರ್ಗಾಪುರದಲ್ಲಿ ಪವರ್ ಕಟ್ ಇತ್ತು. ಇಡೀ ಊರಿನಲ್ಲೇ ಕರೆಂಟ್ ಇರಲಿಲ್ಲ. ಹೀಗಾಗಿ, ರಾತ್ರಿ ಊಟ ಮಾಡುವ ಸಂದರ್ಭದಲ್ಲಿ ಮನೆಯೊಳಗಿದ್ದ ಪವರ್ ಜನರೇಟರ್ ಅನ್ನು ಆನ್ ಮಾಡಿದ್ದಾರೆ. ಈ ವೇಳೆ ಜನರೇಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು, ಉಸಿರಾಡಲು ಸಾಧ್ಯವಾಗದೆ ಮನೆಯೊಳಗಿದ್ದವರು ಪ್ರಾಣ ಬಿಟ್ಟಿದ್ದಾರೆ. ಈ ಘಟನೆ ಸಂಭವಿಸಿದಾಗ ಮನೆಯಲ್ಲಿದ್ದ ಒಬ್ಬಳು ಅಪ್ರಾಪ್ತ ಬಾಲಕಿಯನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದ್ದು, ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದುರಂತದಲ್ಲಿ ಸಾವನ್ನಪ್ಪಿದವರೆಲ್ಲರೂ 25 ವರ್ಷದೊಳಗಿನವರೇ ಆಗಿದ್ದಾರೆ. ಸಾವನ್ನಪ್ಪಿದವರನ್ನು ಕಂಟ್ರಾಕ್ಟರ್ ರಮೇಶ್ ಲಷ್ಕರ್ (25), ಅಜಯ್ ಲಷ್ಕರ್ (21), ಲಖನ್ ಲಷ್ಕರ್ (10), ಕಿಶನ್ ಲಷ್ಕರ್ (8). ಪೂಜಾ ಲಷ್ಕರ್ (14), ಮಾಧುರಿ ಲಷ್ಕರ್ (20) ಎಂದು ಗುರುತಿಸಲಾಗಿದೆ. 6 ಮಂದಿಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಜನರೇಟರ್ ಸ್ಫೋಟವಾಗಲು ಕಾರಣವೇನೆಂಬ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಜುಲೈ 17ರವರೆಗೆ ಕರೆಂಟ್ ಇರೋದಿಲ್ಲ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ