AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಟವಾಡುತ್ತಿದ್ದಾಗ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು 5 ವರ್ಷದ ಬಾಲಕ ಸಾವು

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಕರಣ್‌ಪುರದ ಸುತಾರಿ ಗ್ರಾಮದಲ್ಲಿ 5 ವರ್ಷದ ಬಾಲಕ ಕುದಿಯುತ್ತಿರುವ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

Crime News: ಆಟವಾಡುತ್ತಿದ್ದಾಗ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದು 5 ವರ್ಷದ ಬಾಲಕ ಸಾವು
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on: Nov 09, 2022 | 3:57 PM

Share

ನವದೆಹಲಿ: ಮನೆಯೊಳಗೆ ಆಟವಾಡುತ್ತಿದ್ದಾಗ 5 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ಬಿಸಿ ಸಾಂಬಾರಿನ ಪಾತ್ರೆಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಕರಣ್‌ಪುರದ ಸುತಾರಿ ಗ್ರಾಮದಲ್ಲಿ 5 ವರ್ಷದ ಬಾಲಕ ಕುದಿಯುತ್ತಿರುವ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ರೈತ ಸುಶೀಲ್ ಸಿಂಗ್ ಅವರ 5 ವರ್ಷದ ಮಗ ಪ್ರಶಾಂತ್ ಕಾರ್ಯಕ್ರಮಕ್ಕೆ ಅಡುಗೆ ಮಾಡುತ್ತಿದ್ದ ಜಾಗದಲ್ಲಿ ಆಟವಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಆ ಬಾಲಕನ ಮುಂಡನ ಕಾರ್ಯಕ್ರಮದ ಪ್ರಯುಕ್ತ ಮನೆಯಲ್ಲಿ ದೊಡ್ಡ ಪಾತ್ರೆಗಳಲ್ಲಿ ಅಡುಗೆ ಮಾಡಲಾಗುತ್ತಿತ್ತು. ಈ ವೇಳೆ ಗೆಳೆಯರೊಂದಿಗೆ ಆಟವಾಡುತ್ತಿದ್ದ ಆತ ಆಕಸ್ಮಿಕವಾಗಿ ಕುದಿಯುತ್ತಿದ್ದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾನೆ. ಅಡುಗೆ ಮನೆಯಲ್ಲಿದ್ದ ಕಿಟಕಿಯ ಮೇಲೆ ಹತ್ತಿ ಕೆಳಗೆ ಹಾರುತ್ತಿದ್ದಾಗ ಆತ ಬ್ಯಾಲೆನ್ಸ್​ ತಪ್ಪಿ ಕುದಿಯುತ್ತಿದ್ದ ಪಾತ್ರೆಯೊಳಗೆ ಬಿದ್ದಿದ್ದಾನೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಬೈಕ್​ಗೆ ಲಾರಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು; ಮಕ್ಕಳಿಗೆ ಗಾಯ

ಆ ಬಾಲಕನ ಮನೆಯವರೆಲ್ಲ ನೆಂಟರನ್ನು ಸ್ವಾಗತಿಸುವುದರಲ್ಲಿ ಬ್ಯುಸಿಯಾಗಿದ್ದಾಗ ಅಡುಗೆ ಮನೆಯಲ್ಲಿ ಈ ಘಟನೆ ನಡೆದಿದೆ. ವಿಷಯ ಗೊತ್ತಾದ ತಕ್ಷಣ ಆತನನ್ನು ಮೀರತ್‌ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ಅಡ್ಮಿಟ್ ಮಾಡುವಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಶುಭ ಸಮಾರಂಭ ನಡೆಯಬೇಕಾಗಿದ್ದ ಆ ಮನೆಯಲ್ಲಿ ಆ ಬಾಲಕನ ಅಂತ್ಯಕ್ರಿಯೆ ನಡೆಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ