AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಒಪ್ಪಿಗೆಯಿಲ್ಲದೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್​ಗಳನ್ನು (Criminal Case) ಆಯಾ ರಾಜ್ಯದ ಹೈಕೋರ್ಟ್​ನ (High Courts) ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್​ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್​ (Supreme Court)  ನೀಡಿದೆ. ಇದರಿಂದ ತಮ್ಮ ಪ್ರಭಾವ ಬಳಸಿ ಕೇಸ್​ಗಳನ್ನು ವಾಪಾಸ್ ಪಡೆಯುವಂತೆ ಮಾಡುತ್ತಿದ್ದ ಜನಪ್ರತಿನಿಧಿಗಳಿಗೆ ಸುಪ್ರೀಂ ಕೋರ್ಟ್​ ಚುರುಕು ಮುಟ್ಟಿಸಿದೆ. […]

ಹೈಕೋರ್ಟ್​ ಒಪ್ಪಿಗೆಯಿಲ್ಲದೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ
ಸುಪ್ರೀಂ ಕೋರ್ಟ್
TV9 Web
| Edited By: |

Updated on:Aug 10, 2021 | 7:26 PM

Share

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್​ಗಳನ್ನು (Criminal Case) ಆಯಾ ರಾಜ್ಯದ ಹೈಕೋರ್ಟ್​ನ (High Courts) ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್​ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್​ (Supreme Court)  ನೀಡಿದೆ. ಇದರಿಂದ ತಮ್ಮ ಪ್ರಭಾವ ಬಳಸಿ ಕೇಸ್​ಗಳನ್ನು ವಾಪಾಸ್ ಪಡೆಯುವಂತೆ ಮಾಡುತ್ತಿದ್ದ ಜನಪ್ರತಿನಿಧಿಗಳಿಗೆ ಸುಪ್ರೀಂ ಕೋರ್ಟ್​ ಚುರುಕು ಮುಟ್ಟಿಸಿದೆ.

ಜನಪ್ರತಿನಿಧಿಗಳು ಅಥವಾ ಪ್ರಭಾವಿಗಳಿಗೆ ಸಂಬಂಧಿಸಿದ ವಿವಾದಿತ ಕೇಸ್​ಗಳನ್ನು ವಿಚಾರಣೆ ಮಾಡುವಾಗ ಆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಮೂಲಕ ಆ ಪ್ರಕರಣದ ತೀರ್ಪಿನ ಮೇಲೆ ಪ್ರಭಾವ ಬೀರುವ ಕೆಲಸ ಘಟನೆಗಳು ನಡೆದಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇಂದು ಈ ಆದೇಶ ನೀಡಿದೆ. ಹಾಗೇ, ಕ್ರಿಮಿನಲ್ ಕೇಸ್ ದಾಖಲಾಗಿರುವ ಜನಪ್ರತಿನಿಧಿಗಳ ರಾಜ್ಯದ ಹೈಕೋರ್ಟ್​ನ ಒಪ್ಪಿಗೆಯಿಲ್ಲದೆ ಅವರ ವಿರುದ್ಧದ ಕೇಸ್ ಅನ್ನು ಹಿಂಪಡೆಯುವುಂತಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಈ ಕುರಿತು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ವಿನೀತ್ ಸರನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಬಾಕಿ ಉಳಿದಿರುವ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳ ಮಾಹಿತಿಯನ್ನು ನೀಡುವಂತೆ ಹೈಕೋರ್ಟ್​ಗಳ ರಿಜಿಸ್ಟ್ರಾರ್​ಗಳಿಗೆ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಕೇರಳ ಸರ್ಕಾರ ವರ್ಸಸ್ ಕೆ. ಅಜಿತ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿದ ತೀರ್ಪಿನ ಬಳಿಕ 2020ರ ಸೆಪ್ಟೆಂಬರ್ 16ರಿಂದ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳನ್ನು ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್​ಗಳು ಮನವಿ ಮಾಡಿದ್ದವು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಅಭ್ಯರ್ಥಿಯಾಗಿ ನೇಮಕವಾದ 48 ಗಂಟೆಯೊಳಗೆ ಜನಪ್ರತಿನಿಧಿಗಳ ಅಪರಾಧ ಜಾತಕ ಸಾರ್ವಜನಿಕಗೊಳಿಸಲೇಬೇಕು: ಸುಪ್ರೀಂ ಕೋರ್ಟ್​ 

ನಕಲಿ ಟ್ವಿಟರ್ ಖಾತೆ: ಪೊಲೀಸರಿಗೆ ದೂರು ಸಲ್ಲಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ

(Criminal cases against MPs MLAs can not be withdrawn without High Court approval Supreme Court orders)

Published On - 2:12 pm, Tue, 10 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!