AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ಒಪ್ಪಿಗೆಯಿಲ್ಲದೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್​ಗಳನ್ನು (Criminal Case) ಆಯಾ ರಾಜ್ಯದ ಹೈಕೋರ್ಟ್​ನ (High Courts) ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್​ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್​ (Supreme Court)  ನೀಡಿದೆ. ಇದರಿಂದ ತಮ್ಮ ಪ್ರಭಾವ ಬಳಸಿ ಕೇಸ್​ಗಳನ್ನು ವಾಪಾಸ್ ಪಡೆಯುವಂತೆ ಮಾಡುತ್ತಿದ್ದ ಜನಪ್ರತಿನಿಧಿಗಳಿಗೆ ಸುಪ್ರೀಂ ಕೋರ್ಟ್​ ಚುರುಕು ಮುಟ್ಟಿಸಿದೆ. […]

ಹೈಕೋರ್ಟ್​ ಒಪ್ಪಿಗೆಯಿಲ್ಲದೆ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ಹಿಂಪಡೆಯುವಂತಿಲ್ಲ; ಸುಪ್ರೀಂ ಕೋರ್ಟ್​ ಆದೇಶ
ಸುಪ್ರೀಂ ಕೋರ್ಟ್
TV9 Web
| Edited By: |

Updated on:Aug 10, 2021 | 7:26 PM

Share

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್​ಗಳನ್ನು (Criminal Case) ಆಯಾ ರಾಜ್ಯದ ಹೈಕೋರ್ಟ್​ನ (High Courts) ಅನುಮತಿ ಇಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ. ಹಾಗೇ, ಜನಪ್ರತಿನಿಧಿಗಳ ಕೇಸ್​ಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾವಣೆ ಮಾಡುವಂತಿಲ್ಲ ಎಂದು ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್​ (Supreme Court)  ನೀಡಿದೆ. ಇದರಿಂದ ತಮ್ಮ ಪ್ರಭಾವ ಬಳಸಿ ಕೇಸ್​ಗಳನ್ನು ವಾಪಾಸ್ ಪಡೆಯುವಂತೆ ಮಾಡುತ್ತಿದ್ದ ಜನಪ್ರತಿನಿಧಿಗಳಿಗೆ ಸುಪ್ರೀಂ ಕೋರ್ಟ್​ ಚುರುಕು ಮುಟ್ಟಿಸಿದೆ.

ಜನಪ್ರತಿನಿಧಿಗಳು ಅಥವಾ ಪ್ರಭಾವಿಗಳಿಗೆ ಸಂಬಂಧಿಸಿದ ವಿವಾದಿತ ಕೇಸ್​ಗಳನ್ನು ವಿಚಾರಣೆ ಮಾಡುವಾಗ ಆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಮೂಲಕ ಆ ಪ್ರಕರಣದ ತೀರ್ಪಿನ ಮೇಲೆ ಪ್ರಭಾವ ಬೀರುವ ಕೆಲಸ ಘಟನೆಗಳು ನಡೆದಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇಂದು ಈ ಆದೇಶ ನೀಡಿದೆ. ಹಾಗೇ, ಕ್ರಿಮಿನಲ್ ಕೇಸ್ ದಾಖಲಾಗಿರುವ ಜನಪ್ರತಿನಿಧಿಗಳ ರಾಜ್ಯದ ಹೈಕೋರ್ಟ್​ನ ಒಪ್ಪಿಗೆಯಿಲ್ಲದೆ ಅವರ ವಿರುದ್ಧದ ಕೇಸ್ ಅನ್ನು ಹಿಂಪಡೆಯುವುಂತಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಈ ಕುರಿತು ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ವಿನೀತ್ ಸರನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಬಾಕಿ ಉಳಿದಿರುವ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳ ಮಾಹಿತಿಯನ್ನು ನೀಡುವಂತೆ ಹೈಕೋರ್ಟ್​ಗಳ ರಿಜಿಸ್ಟ್ರಾರ್​ಗಳಿಗೆ ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಕೇರಳ ಸರ್ಕಾರ ವರ್ಸಸ್ ಕೆ. ಅಜಿತ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿದ ತೀರ್ಪಿನ ಬಳಿಕ 2020ರ ಸೆಪ್ಟೆಂಬರ್ 16ರಿಂದ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳನ್ನು ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್​ಗಳು ಮನವಿ ಮಾಡಿದ್ದವು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ: ಅಭ್ಯರ್ಥಿಯಾಗಿ ನೇಮಕವಾದ 48 ಗಂಟೆಯೊಳಗೆ ಜನಪ್ರತಿನಿಧಿಗಳ ಅಪರಾಧ ಜಾತಕ ಸಾರ್ವಜನಿಕಗೊಳಿಸಲೇಬೇಕು: ಸುಪ್ರೀಂ ಕೋರ್ಟ್​ 

ನಕಲಿ ಟ್ವಿಟರ್ ಖಾತೆ: ಪೊಲೀಸರಿಗೆ ದೂರು ಸಲ್ಲಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ

(Criminal cases against MPs MLAs can not be withdrawn without High Court approval Supreme Court orders)

Published On - 2:12 pm, Tue, 10 August 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್