AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಎಸ್‌ಎಸ್ 21ನೇ ಶತಮಾನದ ಕೌರವರು ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ರಾಹುಲ್ ಗಾಂಧಿ ಆರ್‌ಎಸ್‌ಎಸ್ ಅನ್ನು 21 ನೇ ಶತಮಾನದ ಕೌರವರೊಂದಿಗೆ ಹೋಲಿಸಿದ್ದಾರೆ. ಅವರು(ಆರ್‌ಎಸ್‌ಎಸ್) ಈಗ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಶಾಖಾಗಳಲ್ಲಿದ್ದಾರೆ.ಭಾರತದ 2-3 ಬಿಲಿಯನೇರ್‌ಗಳು ಕೌರವರ ಜೊತೆ ನಿಂತಿದ್ದಾರೆ ಎಂದು ಹೇಳಿದ್ದರು.

ಆರ್‌ಎಸ್‌ಎಸ್ 21ನೇ ಶತಮಾನದ ಕೌರವರು ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 31, 2023 | 9:36 PM

Share

ಮುಖ್ಯಾಂಶಗಳು

  • ರಾಹುಲ್ ಗಾಂಧಿ ವಿರುದ್ಧ ಆರ್‌ಎಸ್‌ಎಸ್ ಸ್ವಯಂಸೇವಕ ಎಂದು ಹೇಳಿರುವ ಕಮಲ್ ಭಡೋರಿಯಾ ದೂರು
  • ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
  • ಜನವರಿಯಲ್ಲಿ ಕುರುಕ್ಷೇತ್ರದಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗೆ ಸಂಬಂಧಿಸಿ ಮೊಕದ್ದಮೆ ಹೂಡಲಾಗಿದೆ

ಜನವರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅನ್ನು 21 ನೇ ಶತಮಾನದ ಕೌರವರು ಎಂದು ಹೇಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ(Rahul Gandhi) ವಿರುದ್ಧ ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ. ಆರ್‌ಎಸ್‌ಎಸ್ ಸ್ವಯಂಸೇವಕ ಎಂದು ಹೇಳಿರುವ ಕಮಲ್ ಭಡೋರಿಯಾ ಅವರ ಪರವಾಗಿ ದೂರು ಸಲ್ಲಿಸಿರುವುದಾಗಿ ವಕೀಲ ಅರುಣ್ ಭಡೋರಿಯಾ ಹೇಳಿದ್ದಾರೆ. ನ್ಯಾಯಾಲಯವು ಏಪ್ರಿಲ್ 12 ರಂದು ದೂರನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ಹೇಳಿದರು. ನಾವು ಭಾರತೀಯ ದಂಡ ಸಂಹಿತೆಯ (IPC) 499 ಮತ್ತು 500 ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿದ್ದೇವೆ. ಎರಡು ನಿಬಂಧನೆಗಳು ಕ್ರಿಮಿನಲ್ ಮಾನನಷ್ಟಕ್ಕೆ ಸಂಬಂಧಿಸಿವೆ ಮತ್ತು ಗರಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸೂಚಿಸುತ್ತವೆ ಎಂದು ಹೇಳಿದ್ದಾರೆ. ಈ ದೂರು ಜನವರಿಯಲ್ಲಿ ಕುರುಕ್ಷೇತ್ರದಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗೆ ಸಂಬಂಧಿಸಿದೆ ಎಂದು ಅರುಣ್ ಹೇಳಿದ್ದಾರೆ.

ರಾಹುಲ್ ಗಾಂಧಿ ಆರ್‌ಎಸ್‌ಎಸ್ ಅನ್ನು 21 ನೇ ಶತಮಾನದ ಕೌರವರೊಂದಿಗೆ ಹೋಲಿಸಿದ್ದಾರೆ. ಅವರು(ಆರ್‌ಎಸ್‌ಎಸ್) ಈಗ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಶಾಖಾಗಳಲ್ಲಿದ್ದಾರೆ. ಭಾರತದ 2-3 ಬಿಲಿಯನೇರ್‌ಗಳು ಕೌರವರ ಜೊತೆ ನಿಂತಿದ್ದಾರೆ ಎಂದು ಹೇಳಿದ್ದರು.

ಜನವರಿ 11 ರಂದು ಕಮಲ್ ಭಡೋರಿಯಾ ಅವರು ನಾಯಕನಿಗೆ ಕಳುಹಿಸಿದ ಲೀಗಲ್ ನೋಟಿಸ್‌ಗೆ ಗಾಂಧಿ ಪ್ರತಿಕ್ರಿಯಿಸಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ PMOಗೆ ನೀಡುವ ಅಗತ್ಯವಿಲ್ಲ, ಕೇಜ್ರಿವಾಲ್‌ಗೆ 25 ಸಾವಿರ ದಂಡ: ಗುಜರಾತ್ ಹೈಕೋರ್ಟ್

ಮಾರ್ಚ್ 23 ರಂದು, ಸೂರತ್‌ನ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದಾಗಿ ಒಂದು ದಿನದ ನಂತರ ಅವರನ್ನು ಸಂಸತ್ತಿನಿಂದ ಅನರ್ಹ ಮಾಡಲಾಯಿತು.ರಾಹುಲ್ ಗಾಂಧಿ ಲೋಕಸಭೆಯಲ್ಲಿ ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Fri, 31 March 23

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ