AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರ: ಬಂಡುಕೋರರ ವಿರುದ್ಧದ ಕಾರ್ಯಾಚರಣೆಗಳ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ ಬಗ್ಗೆ ಸಿಆರ್​​ಪಿಎಫ್ ಚಿಂತನೆ

ಪುರುಷ ಪ್ರಾಬಲ್ಯದ ಭದ್ರತಾ ಪಡೆಗಳ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳ ಸಮಯದಲ್ಲಿ ಮಹಿಳೆಯರು ಆಗಾಗ್ಗೆ ಅನಾನುಕೂಲತೆಯನ್ನು ಅನುಭವಿಸುತ್ತಾರೆ ಎಂದು ಅವರು ಭಾವಿಸಿದ್ದರಿಂದ ಈ ವಿಚಾರವನ್ನು ಚರ್ಚಿಸಲಾಗುತ್ತಿದೆ ಎಂದು ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ (ಶ್ರೀನಗರ ವಲಯ) ಚಾರು ಸಿನ್ಹಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಬಂಡುಕೋರರ ವಿರುದ್ಧದ ಕಾರ್ಯಾಚರಣೆಗಳ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ ಬಗ್ಗೆ ಸಿಆರ್​​ಪಿಎಫ್ ಚಿಂತನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 30, 2022 | 7:50 PM

Share

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu & Kashmir) ಬಂಡುಕೋರರ ವಿರುದ್ಧದ ಕಾರ್ಯಾಚರಣೆಗಳ ಸಮಯದಲ್ಲಿ ಶೋಧ ಕಾರ್ಯಾಚರಣೆಯ ನಿಯೋಜನೆಗಾಗಿ ಮಹಿಳಾ ಸಿಬ್ಬಂದಿಗೆ ತರಬೇತಿ ನೀಡಲು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಚಿಂತಿಸಿದೆ ಎಂದು ಅರೆಸೈನಿಕ ಪಡೆಯ ಉನ್ನತ ಅಧಿಕಾರಿ ಶುಕ್ರವಾರ ತಿಳಿಸಿದ್ದಾರೆ. ಇದು ಜಾರಿಯಾದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಡಾಯದ ಇತಿಹಾಸದಲ್ಲಿ ಇದು ಮೊದಲ ಬಾರಿಯ ನಿಯೋಜನೆ ಇದಾಗಲಿದೆ. ಪುರುಷ ಪ್ರಾಬಲ್ಯದ ಭದ್ರತಾ ಪಡೆಗಳ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳ ಸಮಯದಲ್ಲಿ ಮಹಿಳೆಯರು ಆಗಾಗ್ಗೆ ಅನಾನುಕೂಲತೆಯನ್ನು ಅನುಭವಿಸುತ್ತಾರೆ ಎಂದು ಅವರು ಭಾವಿಸಿದ್ದರಿಂದ ಈ ವಿಚಾರವನ್ನು ಚರ್ಚಿಸಲಾಗುತ್ತಿದೆ ಎಂದು ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ (ಶ್ರೀನಗರ ವಲಯ) ಚಾರು ಸಿನ್ಹಾ ಹೇಳಿದ್ದಾರೆ. ಹಿಂದೆ ಯಾರಾದರೂ ಈ ಬಗ್ಗೆ ಯೋಚಿಸದೇ ಇರಬಹುದು ಆದರೆ ನಾವು ಪ್ರತಿದಿನ ಬಂಡಾಯ-ನಿಗ್ರಹ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಾಗ, ನಾವು ಮನೆಗಳನ್ನು ಪ್ರವೇಶಿಸುತ್ತೇವೆ.ಅಲ್ಲಿ ಕಾಶ್ಮೀರಿ ಮಹಿಳೆಯರಿದ್ದಾರೆ . ನಾವು ಪುರುಷ ಸಿಬ್ಬಂದಿಯನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಅವರ ಸಂವೇದನೆಯನ್ನು ಕೆಣಕಲು ನಾವು ಬಯಸುವುದಿಲ್ಲ. ಆದ್ದರಿಂದ, ಮಹಿಳಾ ಘಟಕವನ್ನು ತರುವುದಕ್ಕಿಂತ ಅದನ್ನು ನಿಭಾಯಿಸಲು ಉತ್ತಮ ಮಾರ್ಗ ಯಾವುದು ಎಂದು ನಾವು ಯೋಚಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಸಿಆರ್‌ಪಿಎಫ್ ಕಾಶ್ಮೀರದಲ್ಲಿ ಪೊಲೀಸರು ಮತ್ತು ಸೇನೆಯೊಂದಿಗೆ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಗಳಲ್ಲಿ ವಾಡಿಕೆಯಂತೆ ತೊಡಗಿಸಿಕೊಂಡಿದೆ, ಇದು ಆಗಾಗ್ಗೆ ಗುಂಡಿನ ಚಕಮಕಿಗಳಿಗೆ ಕಾರಣವಾಗುತ್ತದೆ.

ಸಿಆರ್‌ಪಿಎಫ್‌ನ ಕಾರ್ಯಾಚರಣೆಗಳು ಹೆಚ್ಚು ಸುಧಾರಿತ ಮತ್ತು ತಾಂತ್ರಿಕವಾಗಿ ಉತ್ತಮವಾಗಿವೆ ಎಂದು ಸಿನ್ಹಾ ಹೇಳಿದ್ದಾರೆ. ನಾವು ತರಬೇತಿಯ ಮೇಲೆ ಹೆಚ್ಚು ಗಮನಹರಿಸಿದ್ದೇವೆ. ನಾವು ಈಗ ನಮ್ಮ ಮಹಿಳಾ ಘಟಕದ ಮೇಲೆ ಒತ್ತು ನೀಡುತ್ತಿದ್ದೇವೆ ಎಂದಿದ್ದಾರೆ ಅವರು. ಬಂಡಾಯ ನಿಗ್ರಹ ಕಾರ್ಯಾಚರಣೆಯ ಸಂದರ್ಭದಲ್ಲಿ ಕಿರುಕುಳದ ನೀಡಲಾಗುತ್ತಿದೆ ಎಂಬ ಆರೋಪವಿದೆ. ಹುಡುಕಾಟದ ಸಮಯದಲ್ಲಿ ಮಹಿಳೆಯರು ಆರಾಮದಾಯಕವಾಗಿರಬೇಕೆಂದು ನಾವು ಬಯಸುತ್ತೇವೆ ಎಂದು ಸಿನ್ಹಾ ಹೇಳಿದರು. ನಾವು ಸ್ಥಳೀಯರ ಭಾವನೆಗಳನ್ನು ಗೌರವಿಸುತ್ತೇವೆ. ನಾವು ಮಹಿಳೆಯರೊಂದಿಗೆ ವ್ಯವಹರಿಸುವಾಗ, ಅವರು ಆರಾಮದಾಯಕವಾಗಿರಲು ನಾವು ಬಯಸುತ್ತೇವೆ ಎಂದಿದ್ದಾರೆ. ಇದನ್ನು ಪ್ರಯೋಗದ ಆಧಾರದ ಮೇಲೆ ಮಾಡಲಾಗುತ್ತಿದೆ.ಅವರು ಹೇಗೆ ತರಬೇತಿ ಪಡೆಯುತ್ತಾರೆ ಎಂಬುದನ್ನು ನಾವು ನೋಡಬೇಕಾಗಿದೆ ಎಂದಿದ್ದಾರೆ ಸಿನ್ಹಾ.

ಪ್ರಯೋಗದ ಭಾಗವಾಗಿ, ಅವರು ಸುಮಾರು ಆರು ತಿಂಗಳ ಕಾಲ ಕೆಲಸ ಮಾಡಿದ ತಂಡವನ್ನು ಕರೆತರಲಾಗಿದೆ. ನಾವು ಅವರನ್ನು ತರಬೇತಿಗೊಳಿಸಿದ್ದೇವೆ. ಅವರ ಆಸಕ್ತಿ ಮತ್ತು ಸಾಮರ್ಥ್ಯದ ಮಟ್ಟವನ್ನು ಪರೀಕ್ಷಿಸಿದ್ದೇವೆ. ಅವರು ತುಂಬಾ ಒಳ್ಳೆಯವರು ಮತ್ತು ಪ್ರಾಮಾಣಿಕರು ಮತ್ತು ತುಂಬಾ ಕಷ್ಟಪಟ್ಟು ಕೆಲಸ ಮಾಡುವವರು ಎಂದು ನಾವು ಕಂಡುಕೊಂಡಿದ್ದೇವೆ. ಈಗ, ಅದರ ಆಧಾರದ ಮೇಲೆ, ನಾವು ಇದನ್ನು ಮುಂದುವರಿಸಲು ನಿರ್ಧರಿಸಿದ್ದೇವೆ ಎಂದು ಸಿನ್ಹಾ ಹೇಳಿದ್ದಾರೆ.

ಮಾರ್ಚ್ ವೇಳೆಗೆ ಮಹಿಳಾ ಸಿಬ್ಬಂದಿ ನಾಲ್ಕರಿಂದ ಆರು ವಾರಗಳ ಹೆಚ್ಚುವರಿ ತರಬೇತಿಯ ನಂತರ ಮೈದಾನದಲ್ಲಿರಬೇಕು ಎಂದು ಸಿನ್ಹಾ ಹೇಳಿದರು. “ನಾವು ಅವುಗಳನ್ನು ವಿಭಿನ್ನ ಕಾರ್ಯಾಚರಣೆಗಳಲ್ಲಿ ಪರಿಚಯಿಸುತ್ತೇವೆ. ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಇದು ಪ್ರತ್ಯೇಕ ಕಾರ್ಯಾಚರಣೆ ಆಗಿರುವುದರಿಂದ ಅವರು ಇಲ್ಲಿ ಹೆಚ್ಚುವರಿ ತರಬೇತಿ ಪಡೆಯುತ್ತಾರೆ. ತಮ್ಮ ಪುರುಷ ಸಹೋದ್ಯೋಗಿಗಳು ಮಾಡುವ ಎಲ್ಲವನ್ನೂ ಮಹಿಳಾ ಘಟಕ ಮಾಡಲಿದೆ ಎಂದು ಸಿನ್ಹಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Fri, 30 December 22

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?