AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ

ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಅವಿನಾಶ್​ ಕುಮಾರ್ (29) ಕಳೆದ ನಾಲ್ಕು ತಿಂಗಳಿಂದಲೂ ರಜೆಯಲ್ಲಿದ್ದಾರೆ. ಅವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ.

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 8:06 AM

Share

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಇನ್ನಿತರ ನೆರವು ಒದಗಿಸುತ್ತಿದ್ದ  ಮೂವರನ್ನು ಜಾರ್ಖಂಡ್​​ನ ಆ್ಯಂಟಿ ಟೆರರಿಸ್ಟ್​ (ಭಯೋತ್ಪಾದಕ ವಿರೋಧಿ) ದಳ ಬಂಧಿಸಿದೆ. ಬಂಧಿತ ಮೂವರಲ್ಲಿ ಒಬ್ಬ ಕೇಂದ್ರೀ ಮೀಸಲು ಪಡೆ (CRPF)ಯ ಕಾನ್​ಸ್ಟೆಬಲ್​​ ಆಗಿದ್ದು, ಇವರು  2017ರಿಂದಲೂ ಪುಲ್ವಾಮಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಇವರು ಸಿಪಿಐ (ಎಂ) -(ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸಂಘಟನೆಗೆ ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ, ಮದ್ದುಗುಂಡು ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲ ಇನ್ನಿತರ ಕೆಲವು ಕ್ರಿಮಿನಲ್​ ಕೇಸ್​ಗಳಲ್ಲೂ ಬೇಕಾದವರು ಆಗಿದ್ದಾರೆ. ಈ ಮೂವರೂ ಸೇರಿಕೊಂಡು ಈಗಾಗಲೇ ಎಕೆ 47 ಮತ್ತು ಐಎನ್​​ಎಸ್​ಎಎಸ್​ ರೈಫಲ್ಸ್​​ಗಳನ್ನು ಭಾರಿ ಪ್ರಮಾಣದಲ್ಲಿ ಮಾವೋವಾದಿಗಳಿಗೆ ಪೂರೈಕೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.  

ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಅವಿನಾಶ್​ ಕುಮಾರ್ (29) ಕಳೆದ ನಾಲ್ಕು ತಿಂಗಳಿಂದಲೂ ರಜೆಯಲ್ಲಿದ್ದಾರೆ. ಅವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. ಹಾಗೇ ಇವರೊಂದಿಗೆ ಸೇರಿ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ನಿರ್ಮಾಣ ಗುತ್ತಿಗೆದಾರರಾದ ಪಂಕಜ್​ ಸಿಂಗ್​ (48) ಮತ್ತು ರಿಶಿ ಕುಮಾರ್ (49) ವಿರುದ್ಧವೂ ಪ್ರಕರಣ ದಾಖಲಾಗಿದೆ. ಮೂವರೂ ಬಿಹಾರದವರೇ ಆಗಿದ್ದು, ಇವರನ್ನು ಬಂಧಿಸಿದ ದಿನಾಂಕ, ಸ್ಥಳದ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಲಿಲ್ಲ.

ಈ ಮೂವರೂ ಸೇರಿ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ಸಿಪಿಐ(ಮಾವೋವಾದಿ) ಸಂಘಟನೆಯ ಕೇಡರ್​ಗಳಿಗೆ ಮತ್ತು ಇನ್ನಿತರ ಗ್ಯಾಂಗ್​ಸ್ಟರ್​ಗಳಿಗೆ ಪೂರೈಕೆ ಮಾಡುತ್ತಿದ್ದಾರೆ. ಮೂವರೂ ಬಿಹಾರದವರೇ ಆಗಿದ್ದು, ಅಲ್ಲಿನ ಭಯೋತ್ಪಾದಕ ನಿಗ್ರಹ ದಳದ ಸಹಾಯದಿಂದ ಬಂಧಿಸಲಾಗಿದೆ ಎಂದು ಜಾರ್ಖಂಡ ಎಟಿಎಸ್ ಎಸ್​ಪಿ ಪ್ರಶಾಂತ್​ ಆನಂದ್​ ತಿಳಿಸಿದ್ದಾರೆ. ಇದೀಗ ಬಂಧಿತನಾಗಿರುವ ಕಾನ್​ಸ್ಟೆಬಲ್​​ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ನ 182ನೇ ಬೆಟಾಲಿಯನ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಅದಕ್ಕೂ ಮೊದಲು ಛತ್ತೀಸ್​ಗಢ್​​ನ ಜಗದಲ್​​ಪುರ 204 ಕೋಬ್ರಾ ಬೆಟಾಲಿಯನ್​​ನಲ್ಲಿ ಇದ್ದ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Gold Price Today: ಇಂದು ಹಲವೆಡೆ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ನೀವು ಚಿನ್ನಾಭರಣ ಕೊಳ್ಳುವುದಾದರೆ ದರ ವಿವರ ಗಮನಿಸಿ

Published On - 8:00 am, Thu, 18 November 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ