AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ

ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಅವಿನಾಶ್​ ಕುಮಾರ್ (29) ಕಳೆದ ನಾಲ್ಕು ತಿಂಗಳಿಂದಲೂ ರಜೆಯಲ್ಲಿದ್ದಾರೆ. ಅವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ.

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 8:06 AM

Share

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಇನ್ನಿತರ ನೆರವು ಒದಗಿಸುತ್ತಿದ್ದ  ಮೂವರನ್ನು ಜಾರ್ಖಂಡ್​​ನ ಆ್ಯಂಟಿ ಟೆರರಿಸ್ಟ್​ (ಭಯೋತ್ಪಾದಕ ವಿರೋಧಿ) ದಳ ಬಂಧಿಸಿದೆ. ಬಂಧಿತ ಮೂವರಲ್ಲಿ ಒಬ್ಬ ಕೇಂದ್ರೀ ಮೀಸಲು ಪಡೆ (CRPF)ಯ ಕಾನ್​ಸ್ಟೆಬಲ್​​ ಆಗಿದ್ದು, ಇವರು  2017ರಿಂದಲೂ ಪುಲ್ವಾಮಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಇವರು ಸಿಪಿಐ (ಎಂ) -(ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸಂಘಟನೆಗೆ ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ, ಮದ್ದುಗುಂಡು ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲ ಇನ್ನಿತರ ಕೆಲವು ಕ್ರಿಮಿನಲ್​ ಕೇಸ್​ಗಳಲ್ಲೂ ಬೇಕಾದವರು ಆಗಿದ್ದಾರೆ. ಈ ಮೂವರೂ ಸೇರಿಕೊಂಡು ಈಗಾಗಲೇ ಎಕೆ 47 ಮತ್ತು ಐಎನ್​​ಎಸ್​ಎಎಸ್​ ರೈಫಲ್ಸ್​​ಗಳನ್ನು ಭಾರಿ ಪ್ರಮಾಣದಲ್ಲಿ ಮಾವೋವಾದಿಗಳಿಗೆ ಪೂರೈಕೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.  

ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಅವಿನಾಶ್​ ಕುಮಾರ್ (29) ಕಳೆದ ನಾಲ್ಕು ತಿಂಗಳಿಂದಲೂ ರಜೆಯಲ್ಲಿದ್ದಾರೆ. ಅವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. ಹಾಗೇ ಇವರೊಂದಿಗೆ ಸೇರಿ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ನಿರ್ಮಾಣ ಗುತ್ತಿಗೆದಾರರಾದ ಪಂಕಜ್​ ಸಿಂಗ್​ (48) ಮತ್ತು ರಿಶಿ ಕುಮಾರ್ (49) ವಿರುದ್ಧವೂ ಪ್ರಕರಣ ದಾಖಲಾಗಿದೆ. ಮೂವರೂ ಬಿಹಾರದವರೇ ಆಗಿದ್ದು, ಇವರನ್ನು ಬಂಧಿಸಿದ ದಿನಾಂಕ, ಸ್ಥಳದ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಲಿಲ್ಲ.

ಈ ಮೂವರೂ ಸೇರಿ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ಸಿಪಿಐ(ಮಾವೋವಾದಿ) ಸಂಘಟನೆಯ ಕೇಡರ್​ಗಳಿಗೆ ಮತ್ತು ಇನ್ನಿತರ ಗ್ಯಾಂಗ್​ಸ್ಟರ್​ಗಳಿಗೆ ಪೂರೈಕೆ ಮಾಡುತ್ತಿದ್ದಾರೆ. ಮೂವರೂ ಬಿಹಾರದವರೇ ಆಗಿದ್ದು, ಅಲ್ಲಿನ ಭಯೋತ್ಪಾದಕ ನಿಗ್ರಹ ದಳದ ಸಹಾಯದಿಂದ ಬಂಧಿಸಲಾಗಿದೆ ಎಂದು ಜಾರ್ಖಂಡ ಎಟಿಎಸ್ ಎಸ್​ಪಿ ಪ್ರಶಾಂತ್​ ಆನಂದ್​ ತಿಳಿಸಿದ್ದಾರೆ. ಇದೀಗ ಬಂಧಿತನಾಗಿರುವ ಕಾನ್​ಸ್ಟೆಬಲ್​​ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ನ 182ನೇ ಬೆಟಾಲಿಯನ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಅದಕ್ಕೂ ಮೊದಲು ಛತ್ತೀಸ್​ಗಢ್​​ನ ಜಗದಲ್​​ಪುರ 204 ಕೋಬ್ರಾ ಬೆಟಾಲಿಯನ್​​ನಲ್ಲಿ ಇದ್ದ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Gold Price Today: ಇಂದು ಹಲವೆಡೆ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ನೀವು ಚಿನ್ನಾಭರಣ ಕೊಳ್ಳುವುದಾದರೆ ದರ ವಿವರ ಗಮನಿಸಿ

Published On - 8:00 am, Thu, 18 November 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ