AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ

ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಅವಿನಾಶ್​ ಕುಮಾರ್ (29) ಕಳೆದ ನಾಲ್ಕು ತಿಂಗಳಿಂದಲೂ ರಜೆಯಲ್ಲಿದ್ದಾರೆ. ಅವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ.

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 18, 2021 | 8:06 AM

Share

ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಇನ್ನಿತರ ನೆರವು ಒದಗಿಸುತ್ತಿದ್ದ  ಮೂವರನ್ನು ಜಾರ್ಖಂಡ್​​ನ ಆ್ಯಂಟಿ ಟೆರರಿಸ್ಟ್​ (ಭಯೋತ್ಪಾದಕ ವಿರೋಧಿ) ದಳ ಬಂಧಿಸಿದೆ. ಬಂಧಿತ ಮೂವರಲ್ಲಿ ಒಬ್ಬ ಕೇಂದ್ರೀ ಮೀಸಲು ಪಡೆ (CRPF)ಯ ಕಾನ್​ಸ್ಟೆಬಲ್​​ ಆಗಿದ್ದು, ಇವರು  2017ರಿಂದಲೂ ಪುಲ್ವಾಮಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಇವರು ಸಿಪಿಐ (ಎಂ) -(ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸಂಘಟನೆಗೆ ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ, ಮದ್ದುಗುಂಡು ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲ ಇನ್ನಿತರ ಕೆಲವು ಕ್ರಿಮಿನಲ್​ ಕೇಸ್​ಗಳಲ್ಲೂ ಬೇಕಾದವರು ಆಗಿದ್ದಾರೆ. ಈ ಮೂವರೂ ಸೇರಿಕೊಂಡು ಈಗಾಗಲೇ ಎಕೆ 47 ಮತ್ತು ಐಎನ್​​ಎಸ್​ಎಎಸ್​ ರೈಫಲ್ಸ್​​ಗಳನ್ನು ಭಾರಿ ಪ್ರಮಾಣದಲ್ಲಿ ಮಾವೋವಾದಿಗಳಿಗೆ ಪೂರೈಕೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.  

ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಅವಿನಾಶ್​ ಕುಮಾರ್ (29) ಕಳೆದ ನಾಲ್ಕು ತಿಂಗಳಿಂದಲೂ ರಜೆಯಲ್ಲಿದ್ದಾರೆ. ಅವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. ಹಾಗೇ ಇವರೊಂದಿಗೆ ಸೇರಿ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ನಿರ್ಮಾಣ ಗುತ್ತಿಗೆದಾರರಾದ ಪಂಕಜ್​ ಸಿಂಗ್​ (48) ಮತ್ತು ರಿಶಿ ಕುಮಾರ್ (49) ವಿರುದ್ಧವೂ ಪ್ರಕರಣ ದಾಖಲಾಗಿದೆ. ಮೂವರೂ ಬಿಹಾರದವರೇ ಆಗಿದ್ದು, ಇವರನ್ನು ಬಂಧಿಸಿದ ದಿನಾಂಕ, ಸ್ಥಳದ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಲಿಲ್ಲ.

ಈ ಮೂವರೂ ಸೇರಿ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ಸಿಪಿಐ(ಮಾವೋವಾದಿ) ಸಂಘಟನೆಯ ಕೇಡರ್​ಗಳಿಗೆ ಮತ್ತು ಇನ್ನಿತರ ಗ್ಯಾಂಗ್​ಸ್ಟರ್​ಗಳಿಗೆ ಪೂರೈಕೆ ಮಾಡುತ್ತಿದ್ದಾರೆ. ಮೂವರೂ ಬಿಹಾರದವರೇ ಆಗಿದ್ದು, ಅಲ್ಲಿನ ಭಯೋತ್ಪಾದಕ ನಿಗ್ರಹ ದಳದ ಸಹಾಯದಿಂದ ಬಂಧಿಸಲಾಗಿದೆ ಎಂದು ಜಾರ್ಖಂಡ ಎಟಿಎಸ್ ಎಸ್​ಪಿ ಪ್ರಶಾಂತ್​ ಆನಂದ್​ ತಿಳಿಸಿದ್ದಾರೆ. ಇದೀಗ ಬಂಧಿತನಾಗಿರುವ ಕಾನ್​ಸ್ಟೆಬಲ್​​ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ನ 182ನೇ ಬೆಟಾಲಿಯನ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಅದಕ್ಕೂ ಮೊದಲು ಛತ್ತೀಸ್​ಗಢ್​​ನ ಜಗದಲ್​​ಪುರ 204 ಕೋಬ್ರಾ ಬೆಟಾಲಿಯನ್​​ನಲ್ಲಿ ಇದ್ದ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Gold Price Today: ಇಂದು ಹಲವೆಡೆ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ನೀವು ಚಿನ್ನಾಭರಣ ಕೊಳ್ಳುವುದಾದರೆ ದರ ವಿವರ ಗಮನಿಸಿ

Published On - 8:00 am, Thu, 18 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ