AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಇಡಿ ಸ್ಫೋಟ, ಯೋಧರನ್ನು ರಕ್ಷಿಸುವ ವೇಳೆ ಸಿಆರ್​ಪಿಎಫ್​ ಶ್ವಾನಕ್ಕೆ ಗಂಭೀರ ಗಾಯ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಶ್ವಾನವೊಂದು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸೈನಿಕರ ಪ್ರಾಣ ಉಳಿಸಿದ ಸುದ್ದಿ ಇದೀಗ ಮುನ್ನೆಲೆಗೆ ಬರುತ್ತಿದೆ. . ಗುರುವಾರ ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಗಸ್ತು ತಿರುಗುತ್ತಿದ್ದಾಗ ಯೋಧರೊಂದಿಗೆ ಬಂದಿದ್ದ ಸಿಆರ್‌ಪಿಎಫ್ ಶ್ವಾನ ಐಇಡಿ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದೆ.

ಐಇಡಿ ಸ್ಫೋಟ, ಯೋಧರನ್ನು ರಕ್ಷಿಸುವ ವೇಳೆ ಸಿಆರ್​ಪಿಎಫ್​ ಶ್ವಾನಕ್ಕೆ ಗಂಭೀರ ಗಾಯ
ನಾಯಿImage Credit source: India TV
ನಯನಾ ರಾಜೀವ್
|

Updated on: Jan 17, 2025 | 9:13 AM

Share

ಭಾರತೀಯ ಸೇನೆಯಲ್ಲಿರುವ ಶ್ವಾನಕ್ಕೆ ಯೋಧರಷ್ಟೇ ಧೈರ್ಯ, ಕಾಳಜಿ ಎಲ್ಲವೂ ಇರುತ್ತದೆ. ಯೋಧರಂತೆಯೇ ಏನಾದರೂ ಅವಘಡ ಸಂಭವಿಸಿದಾಗ ಅವರನ್ನು ರಕ್ಷಿಸಲು ಧಾವಿಸುತ್ತವೆ, ಅದಕ್ಕಾಗಿ ವಿಶೇಷ ತರಬೇತಿಯನ್ನು ನೀಡಿರುತ್ತಾರೆ. ಹಾಗೆಯೇ ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿತ್ತು. ಸ್ಫೋಟದ ವೇಳೆ ಸೈನಿಕರ ಜೊತೆಗಿದ್ದ ಸಿಆರ್‌ಪಿಎಫ್ ಶ್ವಾನ ಗಂಭೀರವಾಗಿ ಗಾಯಗೊಂಡಿದೆ.

ಜಿಲ್ಲೆಯ ಚಿಣಗೇಲೂರು ಗ್ರಾಮದ ಬಳಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಮೂರು ವರ್ಷದ ‘ಬೆಲ್ಜಿಯನ್ ಶೆಫರ್ಡ್ ಟ್ರ್ಯಾಕರ್’ ‘ಆಂಡ್ರೋ’ ಬಲಗಾಲು ಮೂಳೆ ಮುರಿದಿದೆ.

ನಕ್ಸಲ್ ವಿರೋಧಿ ಕಾರ್ಯಾಚರಣೆಯ ಭಾಗವಾಗಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ 229 ನೇ ಬೆಟಾಲಿಯನ್‌ನ ‘ಆಲ್ಫಾ’ ಕಂಪನಿಯ ಸೈನಿಕರ ಜೀವವನ್ನು ನಾಯಿ ರಕ್ಷಿಸಿದೆ. ಸಮೀಪದ ಬಿಜಾಪುರ ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಮತ್ತಷ್ಟು ಓದಿ: ಮೈಸೂರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಸಾಕು ನಾಯಿ ಛಿದ್ರ ಛಿದ್ರ! ಸೂಕ್ತ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಮತ್ತು ಇತರ ಭದ್ರತಾ ಪಡೆಗಳು ವಿವಿಧ ರಾಜ್ಯಗಳ ಎಡಪಂಥೀಯ ಉಗ್ರಗಾಮಿ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆಗಳಲ್ಲಿ IEDಗಳನ್ನು ಪತ್ತೆಹಚ್ಚಲು ತರಬೇತಿ ಪಡೆದ ನಾಯಿಗಳನ್ನು ಬಳಸುತ್ತವೆ. ನಾರಾಯಣಪುರ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ.

ಫೆಬ್ರವರಿ 2023 ರಲ್ಲಿ, ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ನಾಯಿಯೊಂದು ತನ್ನ ಪ್ರಾಣವನ್ನು ತ್ಯಾಗ ಮಾಡಿ ಅನೇಕ ಸೈನಿಕರನ್ನು ಸಾವಿನಿಂದ ರಕ್ಷಿಸಿತ್ತು. ನಾರಾಯಣಪುರದಲ್ಲಿ ಬಾಂಬ್‌ಗೆ ಸಿಲುಕಿ ನಾಯಿಯೊಂದು ಪ್ರಾಣ ಕಳೆದುಕೊಂಡಿದ್ದರೆ ಐಟಿಬಿಪಿ ಯೋಧನಿಗೆ ಸಣ್ಣಪುಟ್ಟ ಗಾಯಗಳಾಗಿತ್ತು.

ವಿಶೇಷವೆಂದರೆ ಹಳ್ಳಿಯಿಂದ ಆಗಾಗ ನಾಯಿ ಬರುತ್ತಿದ್ದು, ಸೈನಿಕರು ಅದಕ್ಕೆ ಸ್ವಲ್ಪ ಆಹಾರ ನೀಡುತ್ತಿದ್ದರು. ಘಟನೆಯ ದಿನ ಬಾಂಬ್ ನೋಡಿದಾಗ ಅದರ ಮೇಲೆ ಕುಳಿತು ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ