AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ, ಯೋಗಿ ಆದಿತ್ಯನಾಥ್​ರನ್ನು ಹತ್ಯೆ ಮಾಡುವುದಾಗಿ ಸಿಆರ್​ಪಿಎಫ್​ಗೆ ಇಮೇಲ್​; ತನಿಖೆ ನಡೆಸುತ್ತಿರುವ ಅಧಿಕಾರಿಗಳು

ಅಮಿತ್ ಶಾ ನಿನ್ನೆ ಚತ್ತೀಸ್​ಗಡ್​​ದ ಬಸ್​ಗುಡಾ ಸಿಆರ್​ಪಿಎಫ್ ಕ್ಯಾಂಪ್​ಗೆ ಭೇಟಿ ನೀಡಿದ್ದರು. ನಕ್ಸಲ್​ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಅಮಿತ್ ಶಾ, ಯೋಗಿ ಆದಿತ್ಯನಾಥ್​ರನ್ನು ಹತ್ಯೆ ಮಾಡುವುದಾಗಿ ಸಿಆರ್​ಪಿಎಫ್​ಗೆ ಇಮೇಲ್​; ತನಿಖೆ ನಡೆಸುತ್ತಿರುವ ಅಧಿಕಾರಿಗಳು
ಅಮಿತ್ ಶಾ ಮತ್ತು ಯೋಗಿ ಆದಿತ್ಯನಾಥ್​
Lakshmi Hegde
|

Updated on: Apr 06, 2021 | 3:10 PM

Share

ನವದೆಹಲಿ: ಗೃಹಸಚಿವ ಅಮಿತ್​ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಹತ್ಯೆ ಮಾಡುವುದಾಗಿ ಕೇಂದ್ರೀಯ ಮೀಸಲು ಪಡೆ (CRPF)ಗೆ ಬೆದರಿಕೆ ಇಮೇಲ್​ವೊಂದು ಬಂದಿದೆ. ಈ ಇಬ್ಬರೂ ರಾಜಕೀಯ ನಾಯಕರ ಜೀವ ತೆಗೆಯುವುದಾಗಿ ಸಿಆರ್​ಪಿಎಫ್​ನ ಮುಂಬೈ ಪ್ರಧಾನ ಕಚೇರಿಗೆ ಇಮೇಲ್​ ಕಳಿಸಿದ್ದಾಗಿ ಮೂಲಗಳು ತಿಳಿಸಿದ್ದು, ಕೆಲವು ಪುಣ್ಯಸ್ಥಳಗಳು, ಪ್ರಮುಖ ಪ್ರದೇಶಗಳ ಮೇಲೆ ಕೂಡ ದಾಳಿ ನಡೆಸುವುದಾಗಿ ಮೇಲ್​ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್​ರನ್ನು ಆತ್ಮಾಹುತಿ ದಾಳಿಯ ಮೂಲಕ ಹತ್ಯೆ ಮಾಡುವುದಾಗಿ ಬೆದರಿಕೆ ಇಮೇಲ್​ ಬಂದಿದೆ. ತಾವು 11 ಜನ ಸೂಸೈಡ್​ ಬಾಂಬರ್​ಗಳಿದ್ದಿದ್ದಾಗ್ಯೂ ಅವರು ಹೇಳಿಕೊಂಡಿದ್ದಾರೆ. ಈ ಮೇಲ್​ನ್ನು ತನಿಖಾ ದಳಗಳು ಮತ್ತು ಭದ್ರತಾ ಪಡೆಗಳ ಮುಖ್ಯಸ್ಥರಿಗೂ ಫಾರ್​​ವರ್ಡ್ ಮಾಡಲಾಗಿದೆ ಎಂದು ಸಿಆರ್​ಪಿಎಫ್​ ಹೇಳಿದೆ. ಇಮೇಲ್​ ಬಂದು ಕೆಲವು ದಿನಗಳು ಕಳೆದಿದ್ದು, ಇಂದು ಬೆಳಗ್ಗೆಯಷ್ಟೇ ವಿಷಯ ಬೆಳಕಿಗೆ ಬಂದಿದೆ.

ಅಮಿತ್ ಶಾ ನಿನ್ನೆ ಚತ್ತೀಸ್​ಗಡ್​​ದ ಬಸ್​ಗುಡಾ ಸಿಆರ್​ಪಿಎಫ್ ಕ್ಯಾಂಪ್​ಗೆ ಭೇಟಿ ನೀಡಿದ್ದರು. ನಕ್ಸಲ್​ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಮಿತ್ ಶಾ, ಯೋಗಿ ಆದಿತ್ಯನಾಥ್​ಗೆ ಜೀವ ಬೆದರಿಕೆ ಇದೇ ಮೊದಲೇನೂ ಅಲ್ಲ. ಇದೇ ವರ್ಷ ಜನವರಿಯಲ್ಲಿ ಉತ್ತರಪ್ರದೇಶ ತುರ್ತು ಸೇವೆ ವಿಭಾಗಕ್ಕೆ, ಯೋಗಿ ಆದಿತ್ಯನಾಥ್​ರನ್ನು 24 ಗಂಟೆಯಲ್ಲಿ ಎಕೆ 47 ರೈಫಲ್​​ನಿಂದ ಕೊಲ್ಲುವುದಾಗಿ ಸಂದೇಶ ಕಳಿಸಲಾಗಿತ್ತು. ನವೆಂಬರ್​​ನಲ್ಲೂ ಇಂಥದ್ದೇ ಒಂದು ಸಂದೇಶ ಇದೇ ವಿಭಾಗಕ್ಕೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಗ್ರಾದ ಅಪ್ರಾಪ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: Kerala Assembly Elections 2021: ನಟ ಮಮ್ಮೂಟ್ಟಿಗೆ ಕೋಡು ಇದೆಯಾ; ಮತಗಟ್ಟೆಯಲ್ಲಿ ಬಿಜೆಪಿ ಪ್ರತಿಭಟನೆ

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

CRPF received an email threatening to kill UP CM Yogi Adityanath and Union Home Minister Amit Shah

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!