AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ, ಯೋಗಿ ಆದಿತ್ಯನಾಥ್​ರನ್ನು ಹತ್ಯೆ ಮಾಡುವುದಾಗಿ ಸಿಆರ್​ಪಿಎಫ್​ಗೆ ಇಮೇಲ್​; ತನಿಖೆ ನಡೆಸುತ್ತಿರುವ ಅಧಿಕಾರಿಗಳು

ಅಮಿತ್ ಶಾ ನಿನ್ನೆ ಚತ್ತೀಸ್​ಗಡ್​​ದ ಬಸ್​ಗುಡಾ ಸಿಆರ್​ಪಿಎಫ್ ಕ್ಯಾಂಪ್​ಗೆ ಭೇಟಿ ನೀಡಿದ್ದರು. ನಕ್ಸಲ್​ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಅಮಿತ್ ಶಾ, ಯೋಗಿ ಆದಿತ್ಯನಾಥ್​ರನ್ನು ಹತ್ಯೆ ಮಾಡುವುದಾಗಿ ಸಿಆರ್​ಪಿಎಫ್​ಗೆ ಇಮೇಲ್​; ತನಿಖೆ ನಡೆಸುತ್ತಿರುವ ಅಧಿಕಾರಿಗಳು
ಅಮಿತ್ ಶಾ ಮತ್ತು ಯೋಗಿ ಆದಿತ್ಯನಾಥ್​
Lakshmi Hegde
|

Updated on: Apr 06, 2021 | 3:10 PM

Share

ನವದೆಹಲಿ: ಗೃಹಸಚಿವ ಅಮಿತ್​ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಹತ್ಯೆ ಮಾಡುವುದಾಗಿ ಕೇಂದ್ರೀಯ ಮೀಸಲು ಪಡೆ (CRPF)ಗೆ ಬೆದರಿಕೆ ಇಮೇಲ್​ವೊಂದು ಬಂದಿದೆ. ಈ ಇಬ್ಬರೂ ರಾಜಕೀಯ ನಾಯಕರ ಜೀವ ತೆಗೆಯುವುದಾಗಿ ಸಿಆರ್​ಪಿಎಫ್​ನ ಮುಂಬೈ ಪ್ರಧಾನ ಕಚೇರಿಗೆ ಇಮೇಲ್​ ಕಳಿಸಿದ್ದಾಗಿ ಮೂಲಗಳು ತಿಳಿಸಿದ್ದು, ಕೆಲವು ಪುಣ್ಯಸ್ಥಳಗಳು, ಪ್ರಮುಖ ಪ್ರದೇಶಗಳ ಮೇಲೆ ಕೂಡ ದಾಳಿ ನಡೆಸುವುದಾಗಿ ಮೇಲ್​ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್​ರನ್ನು ಆತ್ಮಾಹುತಿ ದಾಳಿಯ ಮೂಲಕ ಹತ್ಯೆ ಮಾಡುವುದಾಗಿ ಬೆದರಿಕೆ ಇಮೇಲ್​ ಬಂದಿದೆ. ತಾವು 11 ಜನ ಸೂಸೈಡ್​ ಬಾಂಬರ್​ಗಳಿದ್ದಿದ್ದಾಗ್ಯೂ ಅವರು ಹೇಳಿಕೊಂಡಿದ್ದಾರೆ. ಈ ಮೇಲ್​ನ್ನು ತನಿಖಾ ದಳಗಳು ಮತ್ತು ಭದ್ರತಾ ಪಡೆಗಳ ಮುಖ್ಯಸ್ಥರಿಗೂ ಫಾರ್​​ವರ್ಡ್ ಮಾಡಲಾಗಿದೆ ಎಂದು ಸಿಆರ್​ಪಿಎಫ್​ ಹೇಳಿದೆ. ಇಮೇಲ್​ ಬಂದು ಕೆಲವು ದಿನಗಳು ಕಳೆದಿದ್ದು, ಇಂದು ಬೆಳಗ್ಗೆಯಷ್ಟೇ ವಿಷಯ ಬೆಳಕಿಗೆ ಬಂದಿದೆ.

ಅಮಿತ್ ಶಾ ನಿನ್ನೆ ಚತ್ತೀಸ್​ಗಡ್​​ದ ಬಸ್​ಗುಡಾ ಸಿಆರ್​ಪಿಎಫ್ ಕ್ಯಾಂಪ್​ಗೆ ಭೇಟಿ ನೀಡಿದ್ದರು. ನಕ್ಸಲ್​ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಮಿತ್ ಶಾ, ಯೋಗಿ ಆದಿತ್ಯನಾಥ್​ಗೆ ಜೀವ ಬೆದರಿಕೆ ಇದೇ ಮೊದಲೇನೂ ಅಲ್ಲ. ಇದೇ ವರ್ಷ ಜನವರಿಯಲ್ಲಿ ಉತ್ತರಪ್ರದೇಶ ತುರ್ತು ಸೇವೆ ವಿಭಾಗಕ್ಕೆ, ಯೋಗಿ ಆದಿತ್ಯನಾಥ್​ರನ್ನು 24 ಗಂಟೆಯಲ್ಲಿ ಎಕೆ 47 ರೈಫಲ್​​ನಿಂದ ಕೊಲ್ಲುವುದಾಗಿ ಸಂದೇಶ ಕಳಿಸಲಾಗಿತ್ತು. ನವೆಂಬರ್​​ನಲ್ಲೂ ಇಂಥದ್ದೇ ಒಂದು ಸಂದೇಶ ಇದೇ ವಿಭಾಗಕ್ಕೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಗ್ರಾದ ಅಪ್ರಾಪ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: Kerala Assembly Elections 2021: ನಟ ಮಮ್ಮೂಟ್ಟಿಗೆ ಕೋಡು ಇದೆಯಾ; ಮತಗಟ್ಟೆಯಲ್ಲಿ ಬಿಜೆಪಿ ಪ್ರತಿಭಟನೆ

ಟೊಮ್ಯಾಟೊ ದರ ಒಮ್ಮೆಲೆ ಕುಸಿತ: ಬೆಳೆದ ಟೊಮ್ಯಾಟೊವನ್ನೆಲ್ಲಾ ರಸ್ತೆಗೆ ಸುರಿದು ರೈತರ ಆಕ್ರೋಶ

CRPF received an email threatening to kill UP CM Yogi Adityanath and Union Home Minister Amit Shah

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್