AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crude Bomb Attack: ಬಿಜೆಪಿ ರ‍್ಯಾಲಿ ಮೇಲೆ ಕಚ್ಚಾ ಬಾಂಬ್‌ ದಾಳಿ, ಪಶ್ಚಿಮ ಬಂಗಾಳದಲ್ಲಿ ಉದ್ವಿಗ್ನತೆ ಸ್ಥಿತಿ

ಪಶ್ಚಿಮ ಬಂಗಾಳದಲ್ಲಿ ಭಾನುವಾರ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಬಿಜೆಪಿ ರ್ಯಾಲಿ ಮೇಲೆ ಹಲವಾರು ಕಚ್ಚಾ ಬಾಂಬ್‌ಗಳನ್ನು ಎಸೆಯುತ್ತಿದ್ದಂತೆ ಉದ್ವಿಗ್ನತೆ ಉಂಟಾಯಿತು. ರಾಜ್ಯದಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನಾ ಮೆರವಣಿಗೆ ವೇಳೆ ಸಿತಾಲ್ಕುಚಿಯಲ್ಲಿ ಈ ಘಟನೆ ನಡೆದಿದೆ.

Crude Bomb Attack: ಬಿಜೆಪಿ ರ‍್ಯಾಲಿ ಮೇಲೆ ಕಚ್ಚಾ ಬಾಂಬ್‌ ದಾಳಿ, ಪಶ್ಚಿಮ ಬಂಗಾಳದಲ್ಲಿ ಉದ್ವಿಗ್ನತೆ ಸ್ಥಿತಿ
Crude bomb attack
TV9 Web
| Edited By: |

Updated on:Sep 12, 2022 | 9:54 AM

Share

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಭಾನುವಾರ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಬಿಜೆಪಿ ರ್ಯಾಲಿ ಮೇಲೆ ಹಲವಾರು ಕಚ್ಚಾ ಬಾಂಬ್‌ಗಳನ್ನು ಎಸೆಯುತ್ತಿದ್ದಂತೆ ಉದ್ವಿಗ್ನತೆ ಉಂಟಾಯಿತು. ರಾಜ್ಯದಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನಾ ಮೆರವಣಿಗೆ ವೇಳೆ ಸಿತಾಲ್ಕುಚಿಯಲ್ಲಿ ಈ ಘಟನೆ ನಡೆದಿದೆ. ಕಚ್ಚಾ ಬಾಂಬ್‌ಗಳನ್ನು ಟಿಎಂಸಿ ಬೆಂಬಲಿಗರು ಎಸೆದಿದ್ದಾರೆ ಎನ್ನಲಾಗಿದ್ದು, ಇದರ ಜೊತೆಗೆ ಅವರು ಬಿಜೆಪಿ ಕಾರ್ಯಕರ್ತರ ಮೇಲೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ವಿಧಾನಸಭಾ ಚುನಾವಣೆಯ ನಂತರ ಇದೇ ಮೊದಲ ಬಾರಿಗೆ ಸಿತಾಲ್ಕುಚಿಯಲ್ಲಿ ಬಿಜೆಪಿ ರ್ಯಾಲಿ ನಡೆಸಿದೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಉದ್ವಿಗ್ನತೆ ಸೃಷ್ಟಿಯಾಗದಂತೆ ಪೊಲೀಸರು ರ್ಯಾಲಿಯನ್ನು ತಡೆದಿದ್ದಾರೆ. ಈ ದಾಳಿಯಿಂದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಆದರೆ ಯಾರೂ ಆಸ್ಪತ್ರೆಗೆ ದಾಖಲಾಗಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜಂಗಲ್ ರಾಜ್ ಚಾಲ್ತಿಯಲ್ಲಿದೆ ಮತ್ತು ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಸಾರ್ವಜನಿಕರ ಗಮನ ಸೆಳೆಯಲು ಬಿಜೆಪಿಯೇ ದಾಳಿ ನಡೆಸಿದೆ ಎಂದು ಟಿಎಂಸಿ ಆರೋಪಿಸಿದೆ. ಈ ಪ್ರದೇಶದಲ್ಲಿ ಬಿಜೆಪಿ ಬೆಂಬಲಿಗರು ಟಿಎಂಸಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ. ನಾವು ಮಲ್ಬಜಾರ್‌ನಲ್ಲಿ ಅಭಿಷೇಕ್ ಬ್ಯಾನರ್ಜಿಯವರ ಸಾರ್ವಜನಿಕ ಸಭೆಯಲ್ಲಿ ನಿರತರಾಗಿದ್ದೆವು. ನಾವು ಸಿತಾಲ್ಕುಚಿಯಲ್ಲಿ ಏಕೆ ತೊಂದರೆ ಕೊಡಬೇಕು? ಎಂದು ಉತ್ತರ ಬಂಗಾಳ ಅಭಿವೃದ್ಧಿ ಸಚಿವ, ಟಿಎಂಸಿಯ ದಿನ್ಹತಾ ಶಾಸಕ ಉದಯನ್ ಗುಹಾ ಘಟನೆಗೆ ಪ್ರತಿಕ್ರಿಯಿಸಿದ್ದಾರೆ.

Published On - 9:52 am, Mon, 12 September 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!