AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಂಡು ಎಂದು ಭಾವಿಸಿ ಕಚ್ಚಾ ಬಾಂಬ್​ ಹಾರಿಸಿ ಆಟವಾಡಿದ ಮಕ್ಕಳು; ಸ್ಫೋಟಗೊಂಡು ಮೂರು ಮಕ್ಕಳಿಗೆ ಗಂಭೀರ ಗಾಯ

ಮೂವರೂ ಮಕ್ಕಳು ಮುರ್ಶಿದಾಬಾದ್​ ಜಿಲ್ಲೆಯ ಹಳ್ಳಿಯೊಂದರ ಕ್ರಿಕೆಟ್​ ಬಯಲಿನಲ್ಲಿ ಕ್ರಿಕೆಟ್​ ಆಡುತ್ತಿದ್ದರು. ಅದರಲ್ಲಿ ಬ್ಯಾಟಿಂಗ್​ ಮಾಡುತ್ತಿದ್ದ ಬಾಲಕ, ಬಾಲ್​​ನ್ನು ಹೊಡೆದ ರಭಸಕ್ಕೆ ಅದು ಹತ್ತಿರದಲ್ಲೇ ಇದ್ದ ಸೂರ್ಯಕಾಂತಿ ಹೂವಿನ ತೋಟಕ್ಕೆ ಹೋಗಿ ಬಿತ್ತು.

ಚೆಂಡು ಎಂದು ಭಾವಿಸಿ ಕಚ್ಚಾ ಬಾಂಬ್​ ಹಾರಿಸಿ ಆಟವಾಡಿದ ಮಕ್ಕಳು; ಸ್ಫೋಟಗೊಂಡು ಮೂರು ಮಕ್ಕಳಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Jan 22, 2022 | 6:23 PM

Share

ಕಚ್ಚಾಬಾಂಬ್​​ನ್ನು ಚೆಂಡು ಎಂದು ಭಾವಿಸಿ ಮಕ್ಕಳು ಆಟವಾಡಿ, ಅದು ಸ್ಫೋಟಗೊಂಡು ಮೂವರು ಮಕ್ಕಳು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್​ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳು 11-14ವರ್ಷದವರೇ ಆಗಿದ್ದಾರೆ.  ಮಮುನ್ ಅಲಿ (11), ಆಶಿಕ್​ ಶೇಖ್​ (14) ಮತ್ತು ಜೆವೆಲ್​ ಶೇಖ್​ (12) ಗಾಯಗೊಂಡವರು. ಇವರನ್ನು ಮುರ್ಶಿದಾಬಾದ್​ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮುಮುನ್​ ಪರಿಸ್ಥಿತಿ ಗಂಭೀರವಾಗಿದ್ದು, ಆತನನ್ನು ಕೋಲ್ಕತ್ತ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. 

ಈ ಮೂವರೂ ಮಕ್ಕಳು ಮುರ್ಶಿದಾಬಾದ್​ ಜಿಲ್ಲೆಯ ಹಳ್ಳಿಯೊಂದರ ಕ್ರಿಕೆಟ್​ ಬಯಲಿನಲ್ಲಿ ಕ್ರಿಕೆಟ್​ ಆಡುತ್ತಿದ್ದರು. ಅದರಲ್ಲಿ ಬ್ಯಾಟಿಂಗ್​ ಮಾಡುತ್ತಿದ್ದ ಬಾಲಕ, ಬಾಲ್​​ನ್ನು ಹೊಡೆದ ರಭಸಕ್ಕೆ ಅದು ಹತ್ತಿರದಲ್ಲೇ ಇದ್ದ ಸೂರ್ಯಕಾಂತಿ ಹೂವಿನ ತೋಟಕ್ಕೆ ಹೋಗಿ ಬಿತ್ತು. ನಂತರ ಚೆಂಡನ್ನು ಹುಡುಕಲು ಎಲ್ಲ ಬಾಲಕರೂ ಹೊಲಕ್ಕೆ ಹೋಗಿದ್ದರು. ಆಗ ಈ ಕಚ್ಚಾಬಾಂಬ್​ ಸಿಕ್ಕಿತ್ತು. ನೋಡಲು ಚೆಂಡಿನಂತೇ ಕಾಣುವ ಕಚ್ಚಾಬಾಂಬ್​​ನ್ನು ಎತ್ತುಕೊಂಡು ಅದನ್ನೇ ಹಾರಿಸಲು ಪ್ರಾರಂಭಿಸಿದರು.  ಅದು ಕೆಳಗೆ ಬಿದ್ದು ಸ್ಫೋಟಗೊಂಡ ಪರಿಣಾಮ ಮೂವರು ಗಾಯಗೊಂಡಿದ್ದಾರೆ.

ಈ ಬಗ್ಗೆ ಆಶಿಕ್​ ಅವರ ತಂದೆ ಮಿರ್ಜುವಾನ್ ಮಂಡಲ್​ ಪ್ರತಿಕ್ರಿಯೆ ನೀಡಿ, ನನ್ನ ಮಗ ಆಶಿಕ್​ ಮತ್ತು ಆತನ ಸ್ನೇಹಿತರೆಲ್ಲ ಸೇರಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ದೊಡ್ಡದಾಗಿ ಶಬ್ದಕೇಳಿ ನಾನು ಅಲ್ಲಿಗೆ ಹೋದೆ. ಆದರೆ ಅದು ಬಾಂಬ್ ಸ್ಫೋಟ ಎಂದು ಹೋದ ಬಳಿಕವೇ ಗೊತ್ತಾಯಿತು ಎಂದು ಹೇಳಿದ್ದಾರೆ. ಮುರ್ಶಿದಾಬಾದ್​ನಲ್ಲಿ ಒಟ್ಟು ಏಳು ಸ್ಥಳೀಯ ಸಂಸ್ಥೆಗಳ ಚುನಾವಣೆ ಫೆಬ್ರವರಿಯಲ್ಲಿ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಸ್ಥಳೀಯ ರಾಜಕೀಯ ಪಕ್ಷಗಳ ಬೆಂಬಲಿತ ಗೂಂಡಾಗಳೇ ಹೀಗೆ ಬಾಂಬ್ ಸ್ಫೋಟಿಸಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.  ಕೆಲವೇ ದಿನಗಳ ಹಿಂದೆ ಇದೇ ಜಿಲ್ಲೆಯ ಬೇಳ್ದಂಗಾ ಎಂಬಲ್ಲಿ ಹೊಲದಲ್ಲಿ ಕೆಲವು ಕಚ್ಚಾ ಬಾಂಬ್​ಗಳು ಸ್ಫೋಟಗೊಂಡು ಒಬ್ಬರು ಮೃತಪಟ್ಟಿದ್ದರು. ಇನ್ನೂ ಕೆಲವು ಗಾಯಗೊಂಡಿದ್ದರು. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral Video:’ಕೊರೋನಾ ವಡೆ’ ತಯಾರಿಸಿ ರೆಸಿಪಿ ವಿಡಿಯೋ ಹಂಚಿಕೊಂಡ ಮಹಿಳೆ

Published On - 6:20 pm, Sat, 22 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ