AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಿಗಳಿಗೆ ಇಸ್ತ್ರಿ​ ಇಲ್ಲದ ಬಟ್ಟೆ ತೊಟ್ಟು ಬನ್ನಿ ಎಂದ ಕಂಪನಿ

ಇನ್ನುಮುಂದೆ ಪ್ರತಿ ಸೋಮವಾರ ಇಸ್ತ್ರಿ ಇಲ್ಲದ ಬಟ್ಟೆಯನ್ನು ಧರಿಸುವಂತೆ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಹೇಳಿದೆ. ಕಂಪನಿಯ ನಿರ್ಧಾರದ ಹಿಂದಿರುವ ಕಾರಣ ಹೀಗಿದೆ.

ಉದ್ಯೋಗಿಗಳಿಗೆ ಇಸ್ತ್ರಿ​ ಇಲ್ಲದ ಬಟ್ಟೆ ತೊಟ್ಟು ಬನ್ನಿ ಎಂದ ಕಂಪನಿ
Follow us
ನಯನಾ ರಾಜೀವ್
|

Updated on: May 07, 2024 | 11:15 AM

ಬಟ್ಟೆಗೆ ಇಸ್ತ್ರಿ(Iron) ಇಲ್ಲದೆ ಮನೆಯಿಂದ ಹೊರಗೆ ಕಾಲಿಡದ ಜನರಿದ್ದಾರೆ, ಹಾಗೆಯೇ ವೀಕೆಂಡ್​ ಯಾವಾಗ ಬರುತ್ತೆ ಯಾವಾಗ ಟಿ-ಶರ್ಟ್​ ಜೀನ್ಸ್​ ಹಾಕಿಕೊಂಡು ಆರಾಮವಾಗಿ ಆಫೀಸಿಗೆ ಹೋಗಬಹುದು ಎಂದು ಕಾಯುವವರೂ ಇದ್ದಾರೆ. ಆದರೆ ವಾರದ ಆರಂಭದಲ್ಲೇ ಇಸ್ತ್ರಿ ಇಲ್ಲದ ಬಟ್ಟೆ ತೊಟ್ಟು ಆಫೀಸ್​ಗೆ ಬನ್ನಿ ಎಂದು ಈ ಕಂಪನಿ ಹೇಳಿರುವುದು ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಆದರೆ ಇದಕ್ಕೊಂದು ಕಾರಣವೂ ಇದೆ.

ಈ ಕಂಪನಿಯು ಪ್ರತಿ ಸೋಮವಾರ ಇಸ್ತ್ರಿ ಇಲ್ಲದ ಬಟ್ಟೆಯನ್ನು ತೊಟ್ಟು ಕಚೇರಿಗೆ ಬರುವಂತೆ ಹೇಳಿದೆ. ರಿಂಕಲ್ಸ್ ಅಚ್ಛೇ ಹೈ ಅಂದರೆ ರಿಂಕಲ್ಸ್ ಒಳ್ಳೆಯದು ಎನ್ನುವ ಅಭಿಯಾನ ಆರಂಭಿಸಲಾಗಿದೆ.

ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಇಲಾಖೆಯ ಕಾರ್ಯದರ್ಶಿ ಮತ್ತು ಸಿಎಸ್‌ಐಆರ್‌ನ ಮೊದಲ ಮಹಿಳಾ ಮಹಾನಿರ್ದೇಶಕಿ ಡಾ ಎನ್ ಕಲೈಸೆಲ್ವಿ ಈ ನಿರ್ಧಾರ ಪ್ರಕಟಿಸಿದ್ದಾರೆ.

ಮತ್ತಷ್ಟು ಓದಿ: ಮಳೆಗಾಲದಲ್ಲಿ ಒದ್ದೆ ಬಟ್ಟೆಗಳನ್ನು ಸುಲಭವಾಗಿ ಒಣಗಿಸಲು ಕೆಲವು ಸಲಹೆಗಳು ಇಲ್ಲಿವೆ

ಪ್ರತಿಯೊಂದು ಬಟ್ಟೆಯನ್ನು ಇಸ್ತ್ರಿ ಮಾಡುವುದರಿಂದ 200 ಗ್ರಾಂ ಇಂಗಾಲದ ಡೈಆಕ್ಸೈಡ್ ಹೊರಸೂಸುತ್ತದೆ. ಆದ್ದರಿಂದ, ಇಸ್ತ್ರಿ ಮಾಡದ ಬಟ್ಟೆಗಳನ್ನು ಧರಿಸುವುದರಿಂದ, 200 ರಷ್ಟು ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯನ್ನು ತಡೆಯಬಹುದು ಎಂದು ಹೇಳಿದ್ದಾರೆ.

ಮೇ 1-15ರವರೆಗೆ ಸ್ವಚ್ಛತಾ ಪಕವಾಡದ ಅಂಗವಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗದಿಎ. ಹವಾಮಾನ ಬದಲಾವಣೆ ಬಗ್ಗೆ ಅರಿವು ಮೂಡಿಸುವ ಗುರಿಯನ್ನು ಇವರು ಹೊಂದಿದ್ದಾರೆ.

ಹಾಗೆಯೇ ಕೆಲಸದ ಸ್ಥಳದಲ್ಲಿ ವಿದ್ಯುತ್ ಶುಲ್ಕವನ್ನು ಶೇಕಡಾ 10 ರಷ್ಟು ಕಡಿತಗೊಳಿಸುವ ಆರಂಭಿಕ ಗುರಿಯನ್ನು ಹೊಂದಿದೆ. ಎಸ್​ಒಪಿಯನ್ನು ಜೂನ್-ಆಗಸ್ಟ್ 2024 ರ ಅವಧಿಯಲ್ಲಿ ಪ್ರಾಯೋಗಿಕ ಪ್ರಯೋಗವಾಗಿ ಜಾರಿಗೊಳಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು