AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ: ಸಿ ಟಿ ರವಿ ಹೇಳಿಕೆ

CT Ravi: ಆರ್​ಎಸ್​ಎಸ್​​ ಭಯೋತ್ಪಾದನೆಗೆ ಬೆಂಬಲವನ್ನು ಕೊಟ್ಟಿಲ್ಲ. ನಾನು ರಾಷ್ಟ್ರಭಕ್ತನಾಗುತ್ತೇನೆ ಹೊರತು ಗುಲಾಮನಾಗಲ್ಲ. ನಾನು ಕುಟುಂಬದ ಗುಲಾಮನಾಗುವುದಿಲ್ಲ ಎಂದು ಸಿ.ಟಿ. ರವಿ ಹೇಳಿದ್ದಾರೆ.

ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ: ಸಿ ಟಿ ರವಿ ಹೇಳಿಕೆ
ಸಿ.ಟಿ. ರವಿ
TV9 Web
| Edited By: |

Updated on: Aug 21, 2021 | 6:44 PM

Share

ದೆಹಲಿ: ನಾನು ಜವಾಹರ್​​ ಲಾಲ್​​ ನೆಹರು ಚಾರಿತ್ರ್ಯ ಹರಣ ಮಾಡಿಲ್ಲ. ಪ್ರಧಾನಿ ಮೋದಿ ಹೆಸರು ಶೌಚಾಲಯಕ್ಕೆ ಇಡಿ ಅಂತಾರೆ. ನರೇಂದ್ರ ಮೋದಿ ಹೆಸರಿಡುವುದು ಅಗೌರವ ಅಂತ ನಾನು ಹೇಳಲ್ಲ. 217 ಯೋಜನೆಗಳಿಗೆ ಒಂದು ಕುಟುಂಬದ ಹೆಸರಿಟ್ಟಿದ್ದಾರೆ. ಆ ಕುಟುಂಬದ ಕೊಡುಗೆ ಇಲ್ಲವೆಂದು ಹೇಳಲ್ಲ. ಆದರೆ, ಒಂದು ಕುಟುಂಬದಿಂದ ಅನೇಕ ತಪ್ಪುಗಳಾಗಿವೆ ಎಂದು ದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಹೇಳಿದ್ದಾರೆ. ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ ಎಂದು ಸಿ.ಟಿ ರವಿ ತಿಳಿಸಿದ್ದಾರೆ.

ನೆಹರು, ಮಹಾತ್ಮ ಗಾಂಧೀಜಿಯ ವಿಚಾರಗಳು ತದ್ವಿರುದ್ಧ ಆಗಿದೆ. ನನ್ನ ವಿರುದ್ಧ 21 ಕಾಂಗ್ರೆಸ್ ನಾಯಕರು ಅವಾಚ್ಯ ಶಬ್ದ ಬಳಸಿದ್ದಾರೆ. ಆರ್​ಎಸ್​ಎಸ್​ನ್ನು​ ಭಯೋತ್ಪಾದಕ ಸಂಘಟನೆಗೆ ಹೋಲಿಸಲಾಗುತ್ತಿದೆ. ಆರ್​ಎಸ್​ಎಸ್​​ ಭಯೋತ್ಪಾದನೆಗೆ ಬೆಂಬಲವನ್ನು ಕೊಟ್ಟಿಲ್ಲ. ನಾನು ರಾಷ್ಟ್ರಭಕ್ತನಾಗುತ್ತೇನೆ ಹೊರತು ಗುಲಾಮನಾಗಲ್ಲ. ನಾನು ಕುಟುಂಬದ ಗುಲಾಮನಾಗುವುದಿಲ್ಲ ಎಂದು ಸಿ.ಟಿ. ರವಿ ಹೇಳಿದ್ದಾರೆ.

ರಾಷ್ಟ್ರಭಕ್ತರಿಗೂ, ಭಯೋತ್ಪಾದಕರಿಗೂ ವ್ಯತ್ಯಾಸ ಗೊತ್ತಿಲ್ಲ. ವ್ಯತ್ಯಾಸ ಗೊತ್ತಿರದ ಮಾನಸಿಕ ಅಸ್ವಸ್ಥರು ಕಾಂಗ್ರೆಸ್​ನವರು. ಸಾವಿರ ಕೋಟಿ ಒಡೆಯ ಎಂದು ನನ್ನ ಮೇಲೆ‌ ಆರೋಪ ಮಾಡುತ್ತಾರೆ. ಆರೋಪ ಸಾಬೀತು ಮಾಡಿ ನಾನು ವಾಪಸ್ ಕೊಡುತ್ತೇನೆ ಎಂದು ನವದೆಹಲಿಯಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ತಿಳಿಸಿದ್ದಾರೆ. ಕಾಂಗ್ರೆಸೇತರರೂ ಸ್ವಾತಂತ್ರ್ಯ ಹೋರಟ ಮಾಡಿದ್ದಾರೆ. ಕಾಂಗ್ರೆಸ್ ಹುಟ್ಟುಹಾಕಿದ್ದು ಭಾರತೀಯರಲ್ಲ. ನಾನು ರಾಷ್ಟ್ರಭಕ್ತನಾಗುತ್ತೇಯೇ ಹೊರತು ಕುಟುಂಬ ಗುಲಾಮನಾಗಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆಗೆ ಹೋಗ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ, ಸಿಟಿ ರವಿ ಬಗ್ಗೆ ಟೀಕೆ

ಸಿಟಿ ರವಿ ನೆನಪಾದವರನ್ನು, ಅಡ್ಡ ಸಿಕ್ಕವರನ್ನು ಕಚ್ತಾ ಕಚ್ತಾ ಬರ್ತಾರೆ: ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಟಾಂಗ್

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ