AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್, ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್, ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?
ಸಿಟಿ ರವಿ
ಹರೀಶ್ ಜಿ.ಆರ್​.
| Edited By: ವಿವೇಕ ಬಿರಾದಾರ|

Updated on:Jul 29, 2023 | 11:36 AM

Share

ನವದೆಹಲಿ: ಭಾರತೀಯ ಜನತಾ ಪಕ್ಷ (BJP) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ (CT Ravi) ಅವರಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್​.ಸಂತೋಷ್ (BL Santosh) ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂಟು ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಳಾಗಿ ನೇಮಕ ಮಾಡಲಾಗಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದೆಯಾ ಹೈಕಮಾಂಡ್ ?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮುಖಾಂತರ ಹೀನಾಯವಾಗಿ ಸೋಲು ಕಂಡಿತು. ಇದರಿಂದ ಬಿಜೆಪಿ ನಾಯಕರಿಗೆ ಭಾರಿ ಮುಖಭಂಗವಾಯಿತು ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್​​​ ರಾಜ್ಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡು, ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕದ ಬಿಎಲ್​ ಸಂತೋಷ್​ ಹೊರತು ಪಡಿಸಿ ಬೇರೆಯವರಿಗೆ ಸ್ಥಾನ ನೀಡಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.

ಇದನ್ನೂ ಓದಿ: ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ತೀರ್ಮಾನವಾಗಿದೆ: ಹೆಚ್​​.ಡಿ.ದೇವೇಗೌಡ

ಸದ್ಯದಲ್ಲೆ ಬದಲಾಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ?

ಇನ್ನು ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಅವರ ಅಧಿಕಾರವಧಿ ಮುಗಿದಿದ್ದು, ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಮಾತು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಬಿಜೆಪಿ ಕೇಂದ್ರ ನಾಯಕರು ಪ್ಲಾನ್​ ರೂಪಿಸಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ. ಆದರೆ ಈ ಅಧ್ಯಕ್ಷ ಕುರ್ಚಿ ಮೇಲೆ  ರಾಜ್ಯ ಕೆಲ ಹಿರಿಯ ನಾಯಕರು ಈಗಾಗಲೆ ಟವಲ್​ ಹಾಕಿದ್ದಾರೆ. ಅವರನ್ನು ಬಿಟ್ಟು ಒಂದು ವೇಳೆ ಸಿ.ಟಿ ರವಿ ಅಧ್ಯಕ್ಷ ಸ್ಥಾನದಲ್ಲಿ ಕೂತರೇ ಮಾಜಿ ಪ್ರಧಾನಿ ದೇವೇಗೌಡರು ನುಡಿದ ಭವಿಷ್ಯವಾಣಿ ನಿಜವಾಗಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Sat, 29 July 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು