AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ತೆಲಂಗಾಣ ಸಂಸ್ಕೃತಿ ವಿಶ್ವಪ್ರಸಿದ್ಧವಾದುದು; ತೆಲಂಗಾಣ ಸಂಸ್ಥಾಪನಾ ದಿನದಂದು ಪ್ರಧಾನಿ ಮೋದಿ ಶ್ಲಾಘನೆ

Telangana Formation Day 2022: ತೆಲಂಗಾಣ ರಾಜ್ಯ ಸಂಸ್ಥಾಪನಾ ದಿನದಂದು ನನ್ನ ಸಹೋದರಿಯರು ಮತ್ತು ಸಹೋದರರಿಗೆ ಶುಭಾಶಯಗಳು. ತೆಲಂಗಾಣದ ಸಂಸ್ಕೃತಿ ವಿಶ್ವಪ್ರಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Narendra Modi: ತೆಲಂಗಾಣ ಸಂಸ್ಕೃತಿ ವಿಶ್ವಪ್ರಸಿದ್ಧವಾದುದು; ತೆಲಂಗಾಣ ಸಂಸ್ಥಾಪನಾ ದಿನದಂದು ಪ್ರಧಾನಿ ಮೋದಿ ಶ್ಲಾಘನೆ
ನರೇಂದ್ರ ಮೋದಿ
TV9 Web
| Edited By: |

Updated on: Jun 02, 2022 | 4:29 PM

Share

ನವದೆಹಲಿ: ತೆಲಂಗಾಣ ಸಂಸ್ಥಾಪನಾ ದಿನಾಚರಣೆಯ (Telangana Formation Day) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಜೂನ್ 2) ತೆಲಂಗಾಣ ಜನತೆಗೆ ಶುಭಾಶಯ ಕೋರಿದ್ದಾರೆ. ತೆಲಂಗಾಣದ ಜನರು ಕಠಿಣ ಪರಿಶ್ರಮ ಮತ್ತು ರಾಷ್ಟ್ರೀಯ ಪ್ರಗತಿಗೆ ಅಪ್ರತಿಮ ಸಮರ್ಪಣೆಗೆ ಹೆಸರಾಗಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. “ತೆಲಂಗಾಣ ರಾಜ್ಯ ಸಂಸ್ಥಾಪನಾ ದಿನದಂದು ನನ್ನ ಸಹೋದರಿಯರು ಮತ್ತು ಸಹೋದರರಿಗೆ ಶುಭಾಶಯಗಳು. ತೆಲಂಗಾಣದ ಜನರು ಕಠಿಣ ಪರಿಶ್ರಮ ಮತ್ತು ರಾಷ್ಟ್ರೀಯ ಪ್ರಗತಿಗೆ, ಅಪ್ರತಿಮ ಸಮರ್ಪಣೆಗೆ ಸಮಾನಾರ್ಥಕರಾಗಿದ್ದಾರೆ. ತೆಲಂಗಾಣದ ಸಂಸ್ಕೃತಿ ವಿಶ್ವಪ್ರಸಿದ್ಧವಾಗಿದೆ. ತೆಲಂಗಾಣ ಜನರ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಬುಧವಾರ ಹೈದರಾಬಾದ್‌ನಲ್ಲಿ ರಾಜ್ಯ ರಚನೆ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಜನರ ತ್ಯಾಗದಿಂದ ತೆಲಂಗಾಣ ರಚನೆ ಸಾಧ್ಯವಾಯಿತು ಮತ್ತು ಅದೇ ಉತ್ಸಾಹದಿಂದ ತೆಲಂಗಾಣವನ್ನು ನಿರ್ಮಿಸಲಾಗಿದೆ ಎಂದು ಚಂದ್ರಶೇಖರ್ ರಾವ್ ಹೇಳಿದ್ದಾರೆ. ತೆಲಂಗಾಣ ರಚನೆ ದಿನದ ಸಂದರ್ಭದಲ್ಲಿ ಸರ್ಕಾರವು 172 ಪುಟಗಳ ‘ಪ್ರಗತಿ ವರದಿ’ಯನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಎತ್ತಿ ತೋರಿಸುತ್ತದೆ.

ಶಾದಿ ಮುಬಾರಕ್, ಕೆಸಿಆರ್ ಕಿಟ್‌ಗಳು, ಕಲ್ಯಾಣ ಲಕ್ಷ್ಮಿ, ರೈತ ಬಿಮಾ, ರೈತ ಬಂಧು, ಆಸರಾ ಪಿಂಚಣಿಗಳ ಮೂಲಕ ರಾಜ್ಯದ ಹೆಚ್ಚಿನ ಜನಸಂಖ್ಯೆಗೆ ಅನುಕೂಲವಾಗಿರುವ ಯೋಜನೆಗಳನ್ನು ಸರ್ಕಾರ ತನ್ನ ವರದಿಯಲ್ಲಿ ತಿಳಿಸಲಾಗಿದೆ. ಈ ವರದಿಯ ಪ್ರಕಾರ, 2018ರಿಂದ ಸುಮಾರು 63 ಲಕ್ಷ ರೈತರು ವರ್ಷಕ್ಕೆ ಎರಡು ಬಾರಿ ರೈತ ಬಂಧು ಸ್ವೀಕರಿಸುತ್ತಿದ್ದಾರೆ. 2018ರಿಂದ ಎಕರೆಗೆ 5,000 ರೂ. ನೀಡಲಾಗುತ್ತಿದೆ.

ಇದನ್ನೂ ಓದಿ: Telangana Formation Day 2022: ಇಂದು ತೆಲಂಗಾಣ ಸಂಸ್ಥಾಪನಾ ದಿನ; ಭಾರತದ ಕಿರಿಯ ರಾಜ್ಯದ ಬಗ್ಗೆ ನಿಮಗೆಷ್ಟು ಗೊತ್ತು?

ತೆಲಂಗಾಣವು ಕೃಷಿ, ನೀರಾವರಿ, ವಿದ್ಯುತ್, ಶಿಕ್ಷಣ, ಆರೋಗ್ಯ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಗುಣಾತ್ಮಕ ಬೆಳವಣಿಗೆಯನ್ನು ದಾಖಲಿಸಿದೆ ಎಂದು ಸಿಎಂ ಚಂದ್ರಶೇಖರ್ ರಾವ್ ಹೇಳಿದ್ದಾರೆ. ಕೇಂದ್ರ ಸರ್ಕಾರ ಮತ್ತು ಇತರ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಘೋಷಿಸಿದ ಪ್ರಶಸ್ತಿಗಳು ಮತ್ತು ಪುರಸ್ಕಾರಗಳು ರಾಜ್ಯದ ಅಭಿವೃದ್ಧಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ತೆಲಂಗಾಣವು ಸುಮಾರು 2,500 ವರ್ಷಗಳಷ್ಟು ಸುದೀರ್ಘವಾದ ಮತ್ತು ಪ್ರಸಿದ್ಧ ಇತಿಹಾಸವನ್ನು ಹೊಂದಿದೆ. 2014ರ ಜೂನ್ 2ರಂದು ತೆಲಂಗಾಣವನ್ನು ಭೌಗೋಳಿಕ ಮತ್ತು ರಾಜಕೀಯ ಘಟಕವಾಗಿ ಯೂನಿಯನ್ ಆಫ್ ಇಂಡಿಯಾದ 29 ನೇ ಮತ್ತು ಕಿರಿಯ ರಾಜ್ಯವಾಗಿ ಸ್ಥಾಪಿಸಲಾಯಿತು. ತೆಲಂಗಾಣ 1,12,077 ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಹಾಗೇ, 3,50,03,674 ಜನಸಂಖ್ಯೆಯನ್ನು ಹೊಂದಿದೆ. 1948ರ ಸೆಪ್ಟೆಂಬರ್ 17ರಿಂದ 1956ರ ನವೆಂಬರ್ 1ರವರೆಗೆ ಆಂಧ್ರಪ್ರದೇಶವನ್ನು ರಾಜ್ಯವನ್ನಾಗಿ ಸ್ಥಾಪಿಸಲು ಆಂಧ್ರ ರಾಜ್ಯದೊಂದಿಗೆ ತೆಲಂಗಾಣವನ್ನು ಸೇರಿಸುವವರೆಗೂ ತೆಲಂಗಾಣವು ಹೈದರಾಬಾದ್ ರಾಜ್ಯದ ಭಾಗವಾಗಿತ್ತು.

ತೆಲಂಗಾಣವು ಭಾರತದ ಅತಿ ಕಿರಿಯ ರಾಜ್ಯವಾಗಿದೆ. ಈ ರಾಜ್ಯ ಭಾರತದ ಉತ್ತರ ಮತ್ತು ದಕ್ಷಿಣದ ನಡುವಿನ ಕೊಂಡಿಯಾಗಿದ್ದು, ಡೆಕ್ಕನ್ ಪ್ರಸ್ಥಭೂಮಿಯ ಮಲೆನಾಡಿನಲ್ಲಿ ಈ ರಾಜ್ಯವಿದೆ. ಆಗಿನ ಅಖಂಡ ಆಂಧ್ರಪ್ರದೇಶದ ವಿಭಜನೆಗೆ ಕಾರಣವಾದ ತೆಲಂಗಾಣ ಚಳವಳಿಯ ಯಶಸ್ಸು ತೆಲಂಗಾಣ ರಚನೆಯಿಂದ ಗುರುತಿಸಲ್ಪಟ್ಟಿದೆ. 2014ರ ಜೂನ್ 2ರಂದು 57 ವರ್ಷಗಳ ಚಳುವಳಿಯ ಪ್ರತಿಫಲವಾಗಿ ತೆಲಂಗಾಣ ರಾಜ್ಯ ತಲೆ ಎತ್ತಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು