AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur violence: ಮಣಿಪುರದ 5 ಜಿಲ್ಲೆಗಳಲ್ಲಿ ಕರ್ಫ್ಯೂ ವಾಪಸ್, ಇತರ ಜಿಲ್ಲೆಗಳಲ್ಲಿ ಕೆಲವು ಗಂಟೆಗಳ ಕಾಲ ಸಡಿಲಿಕೆ

ಮಣಿಪುರದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಹಿಂತೆಗೆದುಕೊಳ್ಳಲಾಗಿದ್ದು, ಇತರ ಜಿಲ್ಲೆಗಳಲ್ಲಿ ಕೆಲವು ಗಂಟೆಗಳ ಕಾಲ ನಿಷೇಧಾಜ್ಞೆಗಳನ್ನು ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Manipur violence: ಮಣಿಪುರದ 5 ಜಿಲ್ಲೆಗಳಲ್ಲಿ ಕರ್ಫ್ಯೂ ವಾಪಸ್, ಇತರ ಜಿಲ್ಲೆಗಳಲ್ಲಿ ಕೆಲವು ಗಂಟೆಗಳ ಕಾಲ ಸಡಿಲಿಕೆ
ಅಕ್ಷಯ್​ ಪಲ್ಲಮಜಲು​​
|

Updated on:Jun 02, 2023 | 3:23 PM

Share

ಇಂಫಾಲ್: ಮಣಿಪುರದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಹಿಂತೆಗೆದುಕೊಳ್ಳಲಾಗಿದ್ದು, ಇತರ ಜಿಲ್ಲೆಗಳಲ್ಲಿ ಕೆಲವು ಗಂಟೆಗಳ ಕಾಲ ನಿಷೇಧಾಜ್ಞೆಗಳನ್ನು ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ ನಂತರ ಈ ಘೋಷಣೆ ಬಂದಿದೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೇಟಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಮೇ 3 ರಂದು ಬೆಟ್ಟದ ಜಿಲ್ಲೆಗಳಲ್ಲಿ ‘ಬುಡಕಟ್ಟು ಐಕ್ಯತಾ ಮೆರವಣಿಗೆ’ ಆಯೋಜಿಸಿದ ನಂತರ ಜನಾಂಗೀಯ ಹಿಂಸಾಚಾರವು ಮೊದಲು ಭುಗಿಲೆದ್ದಿತು. ಹಿಂಸಾಚಾರದ ಮೊದಲು ಕುಕಿ ಗ್ರಾಮಸ್ಥರನ್ನು ಮೀಸಲು ಅರಣ್ಯ ಭೂಮಿಯಿಂದ ಹೊರಹಾಕುವ ಬಗ್ಗೆ ಉದ್ವಿಗ್ನತೆ ಉಂಟಾಗಿತ್ತು, ಈ ಸಣ್ಣ ಆಂದೋಲನಗಳ ದೊಡ್ಡ ಘರ್ಷಣೆಗೆ ಕಾರಣವಾಯಿತು.

ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ (Manipur violence) ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಅಮಿತ್​ ಶಾ ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Manipur Violence Explainer: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ಮಣಿಪುರದಲ್ಲಿ ಕುಕಿ ಮತ್ತು ಮೇಟಿ ಸಮುದಾಯದ ನಡುವಿನ ಸಂಘರ್ಷಕ್ಕೆ ಕಾರಣವಾದ ಆತುರದ ನಿರ್ಧಾರದಿಂದ ಮೀಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ನೀಡಲು ರಾಜ್ಯ ಸರ್ಕಾರವನ್ನು ಶಿಫಾರಸು ಮಾಡುವಂತೆ ಕೇಳಿದೆ. ಕುಕಿಗಳು ಮತ್ತು ಮೇಟಿಗಳೆರಡೂ ನೆಲೆಸಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಕುಕಿಗಳು ಮತ್ತು ಮೇಟಿ ಸುರಕ್ಷಿತವಾಗಿ ಮನೆಗೆ ಮರುಳುವಂತೆ ಮಾಡುವುದು ನಮ್ಮ ಕರ್ತವ್ಯ , ಆ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು. ಅವರು ಕಾಂಗ್‌ಪೊಕ್ಪಿ ಮತ್ತು ಮೊರೆಯಲ್ಲಿ ಕುಕಿ ಸಮುದಾಯದ ಮುಖಂಡರು ಮತ್ತು ಸದಸ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Published On - 3:10 pm, Fri, 2 June 23