AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ತಮಾಷೆಯಲ್ಲ, ಸ್ವಲ್ಪವಾದರೂ ಸಂವೇದನೆ ಇರಲಿ: ರಾಹುಲ್​ ಗಾಂಧಿ ಟ್ವೀಟ್​​

ದೇಶದಲ್ಲಿ ಕೇವಲ ಪೆಟ್ರೋಲ್​-ಡೀಸೆಲ್​, ಎಲ್​ಪಿಜಿ ಬೆಲೆಯಷ್ಟೇ ಅಲ್ಲದೆ, ಬಹುತೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಅಡುಗೆ ಎಣ್ಣೆ, ತರಕಾರಿಗಳ ಬೆಲೆಯೂ ಏರಿಕೆಯಾಗಿದೆ.

ಇದು ತಮಾಷೆಯಲ್ಲ, ಸ್ವಲ್ಪವಾದರೂ ಸಂವೇದನೆ ಇರಲಿ: ರಾಹುಲ್​ ಗಾಂಧಿ ಟ್ವೀಟ್​​
ರಾಹುಲ್​ ಗಾಂಧಿ
TV9 Web
| Edited By: |

Updated on: Nov 03, 2021 | 12:55 PM

Share

ದೆಹಲಿ: ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟ್ವೀಟ್​ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಎದುರಾಗಿರುವ ಸನ್ನಿವೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಯಾಕೆಂದರೆ ಇದು ತಮಾಷೆಯಲ್ಲ ಎಂದು ಹೇಳಿದ್ದಾರೆ. ದೇಶಾದ್ಯಂತ ದೀಪಾವಳಿ ಸಂಭ್ರಮದಲ್ಲಿರುವ ಜನರಿಗೆ ಬೆಲೆ ಏರಿಕೆ ಶಾಕ್​ ಆಗುತ್ತಲೇ ಇದೆ. ಇತ್ತೀಚೆಗೆ 19 ಕೆಜಿ ತೂಕದ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 266ರೂ.ಏರಿಕೆಯಾಗಿದ್ದು, ದೆಹಲಿಯಲ್ಲಿ 2000 ರೂ.ಗಡಿ ದಾಟಿದೆ. ಅದರ ಬೆನ್ನಲ್ಲೇ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದಾರೆ.

ಇಂದು ಬೆಳಗ್ಗೆ ಹಿಂದಿಯಲ್ಲಿ ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ, ಈಗ ದೀಪಾವಳಿ ಹಬ್ಬ ಬಂದಿದೆ. ಬೆಲೆ ಏರಿಕೆ ಉತ್ತುಂಗದಲ್ಲಿದೆ. ಇದು ತಮಾಷೆಯ ವಿಚಾರವಲ್ಲ. ಸಾಮಾನ್ಯ ಜನರ ಪರಿಸ್ಥಿತಿ ಬಗ್ಗೆ ನರೇಂದ್ರ ಮೋದಿ ಸರ್ಕಾರ ಸ್ವಲ್ಪವಾದರೂ ಸಂವೇದನೆ ತೋರಬೇಕು ಎಂಬುದು ನನ್ನ ಆಶಯ ಎಂದು ಹೇಳಿದ್ದಾರೆ.

ಇನ್ನು ದೇಶದಲ್ಲಿ ಕೇವಲ ಪೆಟ್ರೋಲ್​-ಡೀಸೆಲ್​, ಎಲ್​ಪಿಜಿ ಬೆಲೆಯಷ್ಟೇ ಅಲ್ಲದೆ, ಬಹುತೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಅಡುಗೆ ಎಣ್ಣೆ, ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಅದರಲ್ಲೂ ಇಂಧನ ದರವಂತೂ ಐತಿಹಾಸಿಕ ಹೆಚ್ಚಳಕಂಡಿದ್ದು, ಸಾಮಾನ್ಯ ಜನರಿಗೆ ಬಹುದೊಡ್ಡ ಹೊರೆಯಾಗಿದೆ. ಈ ಬಗ್ಗೆ ರಾಹುಲ್​ ಗಾಂಧಿಯಷ್ಟೆ ಅಲ್ಲದೆ, ಕಾಂಗ್ರೆಸ್​ನ ಇತರ ನಾಯಕರೂ ಅಸಮಾಧಾನ ಹೊರಹಾಕಿದ್ದಾರೆ.

ಅಗತ್ಯವಸ್ತುಗಳ ಬೆಲೆ ಏರಿಕೆ ಬಗ್ಗೆ ಟ್ವೀಟ್​ ಮಾಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​, ನಾವು ಇದೀಗ ಸ್ವಾತಂತ್ರ್ಯ ಬಂದ ಸಂಭ್ರಮದ 75ನೇ ವರ್ಷದ ಆಚರಣೆ ಮಾಡುತ್ತಿದ್ದೇವೆ. ಅಂದರೆ ಆಜಾದಿ ಕಾ ಅಮೃತ್​ ಮಹೋತ್ಸವ್​ನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ದಾಖಲೆಯ ಏರಿಕೆ ಕಂಡ ಪೆಟ್ರೋಲ್​-ಡೀಸೆಲ್​ ಬೆಲೆಗಳು ಸದಾ ಇತಿಹಾಸದಲ್ಲಿ ನೆನಪಾಗಿ ಉಳಿಯುತ್ತವೆ ಎಂದು ಹೇಳಿದ್ದಾರೆ.  ಈ ಹಣದುಬ್ಬರವೆಂಬುದು ಪ್ರಧಾನಿ ಮೋದಿ ಸರ್ಕಾರ ಸಾಮಾನ್ಯ ಜನರಿಗೆ ನೀಡುತ್ತಿರುವ ದೀಪಾವಳಿ ಉಡುಗೊರೆ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Puneeth Rajkumar: ಮಾನವೀಯ ಮೌಲ್ಯಗಳನ್ನು ಪುನೀತ್​ರಿಂದ ಕಲಿಯಬೇಕು; ಅಪ್ಪು ಸ್ಮರಿಸಿ ಕಂಬನಿ ಮಿಡಿದ ರಾಮ್ ಚರಣ್

Bank Holidays: ದೇಶದಾದ್ಯಂತ ಹಬ್ಬದ ಪ್ರಯುಕ್ತ ಈ ವಾರದಲ್ಲಿ 5 ದಿನ ಬ್ಯಾಂಕ್ ರಜಾ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್