AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ತಮಾಷೆಯಲ್ಲ, ಸ್ವಲ್ಪವಾದರೂ ಸಂವೇದನೆ ಇರಲಿ: ರಾಹುಲ್​ ಗಾಂಧಿ ಟ್ವೀಟ್​​

ದೇಶದಲ್ಲಿ ಕೇವಲ ಪೆಟ್ರೋಲ್​-ಡೀಸೆಲ್​, ಎಲ್​ಪಿಜಿ ಬೆಲೆಯಷ್ಟೇ ಅಲ್ಲದೆ, ಬಹುತೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಅಡುಗೆ ಎಣ್ಣೆ, ತರಕಾರಿಗಳ ಬೆಲೆಯೂ ಏರಿಕೆಯಾಗಿದೆ.

ಇದು ತಮಾಷೆಯಲ್ಲ, ಸ್ವಲ್ಪವಾದರೂ ಸಂವೇದನೆ ಇರಲಿ: ರಾಹುಲ್​ ಗಾಂಧಿ ಟ್ವೀಟ್​​
ರಾಹುಲ್​ ಗಾಂಧಿ
TV9 Web
| Edited By: |

Updated on: Nov 03, 2021 | 12:55 PM

Share

ದೆಹಲಿ: ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟ್ವೀಟ್​ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಎದುರಾಗಿರುವ ಸನ್ನಿವೇಶವನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಯಾಕೆಂದರೆ ಇದು ತಮಾಷೆಯಲ್ಲ ಎಂದು ಹೇಳಿದ್ದಾರೆ. ದೇಶಾದ್ಯಂತ ದೀಪಾವಳಿ ಸಂಭ್ರಮದಲ್ಲಿರುವ ಜನರಿಗೆ ಬೆಲೆ ಏರಿಕೆ ಶಾಕ್​ ಆಗುತ್ತಲೇ ಇದೆ. ಇತ್ತೀಚೆಗೆ 19 ಕೆಜಿ ತೂಕದ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 266ರೂ.ಏರಿಕೆಯಾಗಿದ್ದು, ದೆಹಲಿಯಲ್ಲಿ 2000 ರೂ.ಗಡಿ ದಾಟಿದೆ. ಅದರ ಬೆನ್ನಲ್ಲೇ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದಾರೆ.

ಇಂದು ಬೆಳಗ್ಗೆ ಹಿಂದಿಯಲ್ಲಿ ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ, ಈಗ ದೀಪಾವಳಿ ಹಬ್ಬ ಬಂದಿದೆ. ಬೆಲೆ ಏರಿಕೆ ಉತ್ತುಂಗದಲ್ಲಿದೆ. ಇದು ತಮಾಷೆಯ ವಿಚಾರವಲ್ಲ. ಸಾಮಾನ್ಯ ಜನರ ಪರಿಸ್ಥಿತಿ ಬಗ್ಗೆ ನರೇಂದ್ರ ಮೋದಿ ಸರ್ಕಾರ ಸ್ವಲ್ಪವಾದರೂ ಸಂವೇದನೆ ತೋರಬೇಕು ಎಂಬುದು ನನ್ನ ಆಶಯ ಎಂದು ಹೇಳಿದ್ದಾರೆ.

ಇನ್ನು ದೇಶದಲ್ಲಿ ಕೇವಲ ಪೆಟ್ರೋಲ್​-ಡೀಸೆಲ್​, ಎಲ್​ಪಿಜಿ ಬೆಲೆಯಷ್ಟೇ ಅಲ್ಲದೆ, ಬಹುತೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಅಡುಗೆ ಎಣ್ಣೆ, ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಅದರಲ್ಲೂ ಇಂಧನ ದರವಂತೂ ಐತಿಹಾಸಿಕ ಹೆಚ್ಚಳಕಂಡಿದ್ದು, ಸಾಮಾನ್ಯ ಜನರಿಗೆ ಬಹುದೊಡ್ಡ ಹೊರೆಯಾಗಿದೆ. ಈ ಬಗ್ಗೆ ರಾಹುಲ್​ ಗಾಂಧಿಯಷ್ಟೆ ಅಲ್ಲದೆ, ಕಾಂಗ್ರೆಸ್​ನ ಇತರ ನಾಯಕರೂ ಅಸಮಾಧಾನ ಹೊರಹಾಕಿದ್ದಾರೆ.

ಅಗತ್ಯವಸ್ತುಗಳ ಬೆಲೆ ಏರಿಕೆ ಬಗ್ಗೆ ಟ್ವೀಟ್​ ಮಾಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​, ನಾವು ಇದೀಗ ಸ್ವಾತಂತ್ರ್ಯ ಬಂದ ಸಂಭ್ರಮದ 75ನೇ ವರ್ಷದ ಆಚರಣೆ ಮಾಡುತ್ತಿದ್ದೇವೆ. ಅಂದರೆ ಆಜಾದಿ ಕಾ ಅಮೃತ್​ ಮಹೋತ್ಸವ್​ನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ದಾಖಲೆಯ ಏರಿಕೆ ಕಂಡ ಪೆಟ್ರೋಲ್​-ಡೀಸೆಲ್​ ಬೆಲೆಗಳು ಸದಾ ಇತಿಹಾಸದಲ್ಲಿ ನೆನಪಾಗಿ ಉಳಿಯುತ್ತವೆ ಎಂದು ಹೇಳಿದ್ದಾರೆ.  ಈ ಹಣದುಬ್ಬರವೆಂಬುದು ಪ್ರಧಾನಿ ಮೋದಿ ಸರ್ಕಾರ ಸಾಮಾನ್ಯ ಜನರಿಗೆ ನೀಡುತ್ತಿರುವ ದೀಪಾವಳಿ ಉಡುಗೊರೆ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Puneeth Rajkumar: ಮಾನವೀಯ ಮೌಲ್ಯಗಳನ್ನು ಪುನೀತ್​ರಿಂದ ಕಲಿಯಬೇಕು; ಅಪ್ಪು ಸ್ಮರಿಸಿ ಕಂಬನಿ ಮಿಡಿದ ರಾಮ್ ಚರಣ್

Bank Holidays: ದೇಶದಾದ್ಯಂತ ಹಬ್ಬದ ಪ್ರಯುಕ್ತ ಈ ವಾರದಲ್ಲಿ 5 ದಿನ ಬ್ಯಾಂಕ್ ರಜಾ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ