AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ.

ಕೊರೊನಾ ಸೋಂಕಿತರ ಜೀವರಕ್ಷಕ ರೆಮ್​ಡೆಸಿವಿರ್​ ಮೇಲಿನ ಆಮದು ಸುಂಕ ಮನ್ನಾ ಮಾಡಿದ ಕೇಂದ್ರ ಸರ್ಕಾರ
ರೆಮ್​​ಡೆಸಿವಿರ್​ ಚುಚ್ಚುಮದ್ದು
Lakshmi Hegde
|

Updated on: Apr 21, 2021 | 1:03 PM

Share

ದೇಶದಲ್ಲಿ ಕೊರೊನಾ ಸೋಂಕಿತರಿಗೆ ನೀಡುತ್ತಿರುವ ರೆಮ್​ಡೆಸಿವಿರ್​ ಔಷಧದ ಅಭಾವ ಉಂಟಾಗಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ರೆಮ್​ಡೆಸಿವಿರ್​ ಇಂಜೆಕ್ಷನ್​ ಮತ್ತು ಅದರ ಎಪಿಐ/ಕೆಎಸ್​ಎಂ ಮೇಲಿನ ಕಸ್ಟಮ್ಸ್​ ಸುಂಕವನ್ನು ಮನ್ನಾ ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ಎಸ್​. ಸದಾನಂದ ಗೌಡ ಟ್ವೀಟ್ ಮಾಡಿ ತಿಳಿಸಿದ್ದಾರೆ.

ರೆಮ್​ಡೆಸಿವಿರ್​ ಔಷಧಿಯ ತುರ್ತು ಅಗತ್ಯತೆಯನ್ನು ಪರಿಗಣಿಸಿ, ಔಷಧೀಯ ಇಲಾಖೆಯ ಶಿಫಾರಸಿನ ಮೇರೆಗೆ ರೆಮ್​ಡೆಸಿವಿರ್ ಮೇಲಿನ ಕಸ್ಟಮ್ಸ್​ ಸುಂಕವನ್ನು, ಕಂದಾಯ ಇಲಾಖೆ ಮನ್ನಾ ಮಾಡಿದೆ. ಹೀಗೆ ಮಾಡುವುದರಿಂದ ದೇಶೀಯವಾಗಿ ರೆಮ್​ಡೆಸಿವಿರ್ ಇಂಜಕ್ಷನ್​ ಉತ್ಪಾದನೆ ಹೆಚ್ಚುತ್ತದೆ ಎಂದು ಸದಾನಂದ ಗೌಡ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಆಕ್ಸಿಜನ್, ವ್ಯಾಕ್ಸಿನ್​, ರೆಮ್​ಡೆಸಿವರ್​ ಸೇರಿ ಕೊರೊನಾ ರೋಗಿಗಳಿಗೆ ಅಗತ್ಯವಿರುವ ಬಹುತೇಕ ವ್ಯವಸ್ಥೆಗಳ ಅಭಾವ ಎದುರಾಗಿದೆ. ಕೊರೊನಾ ಶುರುವಾದಾಗಿನಿಂದಲೂ ರೋಗಿಗಳಿಗೆ ರೆಮ್​ಡೆಸಿವರ್​ ಇಂಜಕ್ಷನ್ ಕೊಡಲಾಗುತ್ತಿದೆ. ಇದರ ಕೊರತೆ ಎದುರಾಗಿದ್ದರಿಂದ ಆಮದು ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಇದೀಗ ಈ ಆಮದು ಸುಂಕವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದರಿಂದ ದೇಶೀಯ ಔಷಧೀಯ ಕಂಪನಿಗಳಿಗೆ ಹೊರೆ ಕಡಿಮೆಯಾಗಲಿದೆ.

ಇದನ್ನೂ ಓದಿ: ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

ನಾಲ್ಕು ದಶಕದಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ಬಲಿ

LPG Cylinder Price: ಕೇವಲ 9 ರೂಪಾಯಿಗೆ ಸಿಲಿಂಡರ್​ ಪಡೆಯಬಹುದೇ? 800 ರೂ. ರಿಯಾಯಿತಿ ಇದೆಯೇ?

Follow Us
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್