AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕಂದರಾಬಾದ್​ನ ಮಿಲಿಟರಿ ವಾಸ್ತವ್ಯದ ಪ್ರದೇಶಕ್ಕೆ ನೀರು, ವಿದ್ಯುತ್​ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ ಸಚಿವ ಕೆಟಿಆರ್​

ವಿದ್ಯಾವಂತರಾಗಿರುವ ಕೆಟಿಆರ್ ಬಾಯಲ್ಲಿ ಇಂಥ ಹೇಳಿಕೆ ನೀಡಿ ಶಾಕ್​ ಆಯಿತು. ಭಾರತೀಯ ಸೇನೆಗೆ ಗೌರವ ಕೊಡದೆ ಮಾತನಾಡಿದ್ದಾರೆ. ಇಡೀ ದೇಶ ರಕ್ಷಣೆ ಮಾಡುವ ಸೇನೆ ಬಗ್ಗೆ ಇಂಥ ಮಾತನಾಡುವುದು ಸರಿಯಲ್ಲ ಎಂದು ಬಿಜೆಪಿ ಪ್ರತಿಕ್ರಿಯೆ ನೀಡಿದೆ.

ಸಿಕಂದರಾಬಾದ್​ನ ಮಿಲಿಟರಿ ವಾಸ್ತವ್ಯದ ಪ್ರದೇಶಕ್ಕೆ ನೀರು, ವಿದ್ಯುತ್​ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ ಸಚಿವ ಕೆಟಿಆರ್​
ಕೆ.ಟಿ.ರಾಮರಾವ್​
TV9 Web
| Updated By: Lakshmi Hegde|

Updated on:Mar 13, 2022 | 12:51 PM

Share

ಸಿಕಂದರಾಬಾದ್​​ನಲ್ಲಿನ ಮಿಲಿಟರಿ ಸ್ಟೇಶನ್(Secunderabad Cantonment)​ ಇರುವ ಕಂಟೋನ್ಮೆಂಟ್​​ಗೆ ಕುಡಿಯುವ ನೀರು ಮತ್ತು ವಿದ್ಯುತ್​ ಸಂಪರ್ಕ ಕಡಿತಗೊಳಿಸುವುದಾಗಿ ತೆಲಂಗಾಣ ಮುನ್ಸಿಪಲ್ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವ ಕೆ.ಟಿ.ರಾಮರಾವ್​  ಎಚ್ಚರಿಕೆ ನೀಡಿದ್ದಾರೆ. ತೆಲಂಗಾಣ ವಿಧಾನಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು,  ಸ್ಥಳೀಯ ಸೇನಾ ಪ್ರಾಧಿಕಾರ ರಸ್ತೆಗಳನ್ನು ಬಂದ್​ ಮಾಡುತ್ತಿದೆ. ಅಲ್ಲದೆ ಚೆಕ್​ ಡ್ಯಾಂಗಳನ್ನು ನಿರ್ಮಿಸುವ ಮೂಲಕ ಹೈದರಾಬಾದ್ (Hyderabad) ನಾಗರಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಹೀಗೇ ಆದರೆ ಮಿಲಿಟರಿ ಸೌಕರ್ಯ ಪ್ರದೇಶಗಳಿಗೆ ಕುಡಿಯುವ ನೀರು ಮತ್ತು ವಿದ್ಯುತ್​ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಈ ಮಿಲಿಟರಿ ಪ್ರಾಧಿಕಾರ ನಿರ್ಮಾಣ ಮಾಡಿರುವ ಹಲವು ಚೆಕ್​ ಡ್ಯಾಂ( ಹರಿವ ನೀರಿಗೆ ಅಡ್ಡಲಾಗಿ ಹಾಕುವ ಸಣ್ಣ ಪ್ರಮಾಣದ ಕಟ್ಟುಗಳು)ಗಳಿಂದಾಗಿ 2020ರಲ್ಲಿ ಪ್ರವಾಹ ಎದುರಾದಾಗ ಅನೇಕ ಭಾಗಗಳು ಮುಳುಗಡೆಯಾಗಿ ನಾಗರಿಕರು ಕಷ್ಟಪಟ್ಟಿದ್ದಾರೆ ಎಂದೂ ಆರೋಪಿಸಿದ್ದಾರೆ.

ತೆಲಂಗಾಣ ಬೇರೆ ದೇಶವಲ್ಲ. ಸಿಕಂದರಾಬಾದ್​​ನ ಮಿಲಿಟರಿ ಪ್ರಾಧಿಕಾರದ ಸಿಬ್ಬಂದಿ ತಮಗೆ ಬೇಕಾದಾಗ ರಸ್ತೆಗಳನ್ನು ಬಂದ್ ಮಾಡಿಕೊಳ್ಳುತ್ತಾರೆ. ಇದರಿಂದ ನಾಗರಿಕರಿಗೆ ತೀವ್ರ ಸಮಸ್ಯೆಯಾಗಿದೆ. ಅವರು ಈ ಕೆಲಸ ನಿಲ್ಲಿಸದೆ ಹೋದರೆ, ಜನರ ಕಷ್ಟ ಅರ್ಥ ಮಾಡಿಕೊಳ್ಳದೆ ಹೋದರೆ, ನಾವು ಕಂಟೋನ್ಮೆಂಟ್ ಭಾಗಗಳಿಗೆ ವಿದ್ಯುತ್​ ಮತ್ತು ನೀರಿನ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ. ಆಗ ಅವರೇನು ಮಾಡುತ್ತಾರೆ ನೋಡೋಣ ಎಂದು ಹೇಳಿದ್ದಾರೆ.  ಹಾಗೇ, ರಕ್ಷಣಾ ಪಡೆಗಳು ಬಲ್ಕಾಪುರದಲ್ಲಿ ನಿರ್ಮಾಣ ಮಾಡಿರುವ ಚೆಕ್​ ಡ್ಯಾಂ ಬಗ್ಗೆಯೂ ಸಚಿವರು ಕಿಡಿ ಕಾರಿದ್ದಾರೆ. ಇದರಿಂದಾಗಿ ಅಲ್ಲಿರು ನದೀಂ ಕೊಲೊನಿ ಮುಳುಗುತ್ತಿದೆ ಎಂದು ಹೇಳಿರುವ ಕೆಟಿಆರ್​, ಗೋಲ್ಕೊಂಡಾ ಕೋಟೆ ಬಳಿ ನಾಲೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸರ್ಕಾರಕ್ಕೆ ಒಪ್ಪಿಗೆ ನೀಡುತ್ತಿಲ್ಲ. ಮಿಲಿಟರಿ ಪ್ರಾಧಿಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗಳೆರಡೂ ಸರ್ಕಾರಕ್ಕೆ ಅಡ್ಡಗಾಲು ಹಾಕುತ್ತಿವೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಟೀಕೆ

ಸಚಿವ ಕೆಟಿಆರ್​ ಸೇನಾ ಸಿಬ್ಬಂದಿಗೆ ಹಾಕಿರುವ ಬೆದರಿಕೆಯನ್ನು ಬಿಜೆಪಿ ವಿರೋಧಿಸಿದೆ. ವಿದ್ಯಾವಂತರಾಗಿರುವ ಕೆಟಿಆರ್ ಬಾಯಲ್ಲಿ ಇಂಥ ಹೇಳಿಕೆ ನೀಡಿ ಶಾಕ್​ ಆಯಿತು. ಭಾರತೀಯ ಸೇನೆಗೆ ಗೌರವ ಕೊಡದೆ ಮಾತನಾಡಿದ್ದಾರೆ. ಇಡೀ ದೇಶ ರಕ್ಷಣೆ ಮಾಡುವ ಸೇನೆ ಬಗ್ಗೆ ಇಂಥ ಮಾತನಾಡುವುದು ಸರಿಯಲ್ಲ. ಅವರೂ ಕೂಡ ಭದ್ರತೆ ವಿಚಾರಕ್ಕೆ ಸಂಬಂಧಪಟ್ಟಂತೆ ಸೇನಾ ನೆಲೆಗಳ ಸುತ್ತಲಿನ ರಸ್ತೆಗಳನ್ನು ಬಂದ್ ಮಾಡಿಕೊಳ್ಳುತ್ತಾರೆ. ಕೆಟಿಆರ್ ಮಾತುಗಳನ್ನು ಕೇಳಿದರೆ ಅವರು ಹೈದರಾಬಾದ್​ನಿಂದ ಸೇನಾ ನೆಲೆಯನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಅನ್ನಿಸುತ್ತದೆ ಎಂದು ಬಿಜೆಪಿ ನಾಯಕ ಎನ್​.ವಿ.ಸುಭಾಷ್​ ಹೇಳಿದ್ದಾರೆ.  ಹೀಗೆ ಸೇನಾ ಸಿಬ್ಬಂದಿಗೆ ನೀರು, ವಿದ್ಯುತ್​ ಕೊಡುವುದಿಲ್ಲವೆಂದು ಬೆದರಿಕೆ ಹಾಕುವುದು ಸರಿಯಲ್ಲ. ಅದರ ಬದಲಿಗೆ ಸರ್ಕಾರ ಮಾತುಕತೆ ಮೂಲಕ ಸಮಸ್ಯೆ ಪರಿಹಾರ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಭಾರೀ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಸಿಕಂದರಾಬಾದ್ ಕ್ಲಬ್

Published On - 12:36 pm, Sun, 13 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?