AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕಂದರಾಬಾದ್​ನ ಮಿಲಿಟರಿ ವಾಸ್ತವ್ಯದ ಪ್ರದೇಶಕ್ಕೆ ನೀರು, ವಿದ್ಯುತ್​ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ ಸಚಿವ ಕೆಟಿಆರ್​

ವಿದ್ಯಾವಂತರಾಗಿರುವ ಕೆಟಿಆರ್ ಬಾಯಲ್ಲಿ ಇಂಥ ಹೇಳಿಕೆ ನೀಡಿ ಶಾಕ್​ ಆಯಿತು. ಭಾರತೀಯ ಸೇನೆಗೆ ಗೌರವ ಕೊಡದೆ ಮಾತನಾಡಿದ್ದಾರೆ. ಇಡೀ ದೇಶ ರಕ್ಷಣೆ ಮಾಡುವ ಸೇನೆ ಬಗ್ಗೆ ಇಂಥ ಮಾತನಾಡುವುದು ಸರಿಯಲ್ಲ ಎಂದು ಬಿಜೆಪಿ ಪ್ರತಿಕ್ರಿಯೆ ನೀಡಿದೆ.

ಸಿಕಂದರಾಬಾದ್​ನ ಮಿಲಿಟರಿ ವಾಸ್ತವ್ಯದ ಪ್ರದೇಶಕ್ಕೆ ನೀರು, ವಿದ್ಯುತ್​ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ ಸಚಿವ ಕೆಟಿಆರ್​
ಕೆ.ಟಿ.ರಾಮರಾವ್​
TV9 Web
| Edited By: |

Updated on:Mar 13, 2022 | 12:51 PM

Share

ಸಿಕಂದರಾಬಾದ್​​ನಲ್ಲಿನ ಮಿಲಿಟರಿ ಸ್ಟೇಶನ್(Secunderabad Cantonment)​ ಇರುವ ಕಂಟೋನ್ಮೆಂಟ್​​ಗೆ ಕುಡಿಯುವ ನೀರು ಮತ್ತು ವಿದ್ಯುತ್​ ಸಂಪರ್ಕ ಕಡಿತಗೊಳಿಸುವುದಾಗಿ ತೆಲಂಗಾಣ ಮುನ್ಸಿಪಲ್ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವ ಕೆ.ಟಿ.ರಾಮರಾವ್​  ಎಚ್ಚರಿಕೆ ನೀಡಿದ್ದಾರೆ. ತೆಲಂಗಾಣ ವಿಧಾನಸಭೆಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು,  ಸ್ಥಳೀಯ ಸೇನಾ ಪ್ರಾಧಿಕಾರ ರಸ್ತೆಗಳನ್ನು ಬಂದ್​ ಮಾಡುತ್ತಿದೆ. ಅಲ್ಲದೆ ಚೆಕ್​ ಡ್ಯಾಂಗಳನ್ನು ನಿರ್ಮಿಸುವ ಮೂಲಕ ಹೈದರಾಬಾದ್ (Hyderabad) ನಾಗರಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಹೀಗೇ ಆದರೆ ಮಿಲಿಟರಿ ಸೌಕರ್ಯ ಪ್ರದೇಶಗಳಿಗೆ ಕುಡಿಯುವ ನೀರು ಮತ್ತು ವಿದ್ಯುತ್​ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಈ ಮಿಲಿಟರಿ ಪ್ರಾಧಿಕಾರ ನಿರ್ಮಾಣ ಮಾಡಿರುವ ಹಲವು ಚೆಕ್​ ಡ್ಯಾಂ( ಹರಿವ ನೀರಿಗೆ ಅಡ್ಡಲಾಗಿ ಹಾಕುವ ಸಣ್ಣ ಪ್ರಮಾಣದ ಕಟ್ಟುಗಳು)ಗಳಿಂದಾಗಿ 2020ರಲ್ಲಿ ಪ್ರವಾಹ ಎದುರಾದಾಗ ಅನೇಕ ಭಾಗಗಳು ಮುಳುಗಡೆಯಾಗಿ ನಾಗರಿಕರು ಕಷ್ಟಪಟ್ಟಿದ್ದಾರೆ ಎಂದೂ ಆರೋಪಿಸಿದ್ದಾರೆ.

ತೆಲಂಗಾಣ ಬೇರೆ ದೇಶವಲ್ಲ. ಸಿಕಂದರಾಬಾದ್​​ನ ಮಿಲಿಟರಿ ಪ್ರಾಧಿಕಾರದ ಸಿಬ್ಬಂದಿ ತಮಗೆ ಬೇಕಾದಾಗ ರಸ್ತೆಗಳನ್ನು ಬಂದ್ ಮಾಡಿಕೊಳ್ಳುತ್ತಾರೆ. ಇದರಿಂದ ನಾಗರಿಕರಿಗೆ ತೀವ್ರ ಸಮಸ್ಯೆಯಾಗಿದೆ. ಅವರು ಈ ಕೆಲಸ ನಿಲ್ಲಿಸದೆ ಹೋದರೆ, ಜನರ ಕಷ್ಟ ಅರ್ಥ ಮಾಡಿಕೊಳ್ಳದೆ ಹೋದರೆ, ನಾವು ಕಂಟೋನ್ಮೆಂಟ್ ಭಾಗಗಳಿಗೆ ವಿದ್ಯುತ್​ ಮತ್ತು ನೀರಿನ ಸಂಪರ್ಕ ಕಡಿತಗೊಳಿಸಬೇಕಾಗುತ್ತದೆ. ಆಗ ಅವರೇನು ಮಾಡುತ್ತಾರೆ ನೋಡೋಣ ಎಂದು ಹೇಳಿದ್ದಾರೆ.  ಹಾಗೇ, ರಕ್ಷಣಾ ಪಡೆಗಳು ಬಲ್ಕಾಪುರದಲ್ಲಿ ನಿರ್ಮಾಣ ಮಾಡಿರುವ ಚೆಕ್​ ಡ್ಯಾಂ ಬಗ್ಗೆಯೂ ಸಚಿವರು ಕಿಡಿ ಕಾರಿದ್ದಾರೆ. ಇದರಿಂದಾಗಿ ಅಲ್ಲಿರು ನದೀಂ ಕೊಲೊನಿ ಮುಳುಗುತ್ತಿದೆ ಎಂದು ಹೇಳಿರುವ ಕೆಟಿಆರ್​, ಗೋಲ್ಕೊಂಡಾ ಕೋಟೆ ಬಳಿ ನಾಲೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸರ್ಕಾರಕ್ಕೆ ಒಪ್ಪಿಗೆ ನೀಡುತ್ತಿಲ್ಲ. ಮಿಲಿಟರಿ ಪ್ರಾಧಿಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗಳೆರಡೂ ಸರ್ಕಾರಕ್ಕೆ ಅಡ್ಡಗಾಲು ಹಾಕುತ್ತಿವೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಟೀಕೆ

ಸಚಿವ ಕೆಟಿಆರ್​ ಸೇನಾ ಸಿಬ್ಬಂದಿಗೆ ಹಾಕಿರುವ ಬೆದರಿಕೆಯನ್ನು ಬಿಜೆಪಿ ವಿರೋಧಿಸಿದೆ. ವಿದ್ಯಾವಂತರಾಗಿರುವ ಕೆಟಿಆರ್ ಬಾಯಲ್ಲಿ ಇಂಥ ಹೇಳಿಕೆ ನೀಡಿ ಶಾಕ್​ ಆಯಿತು. ಭಾರತೀಯ ಸೇನೆಗೆ ಗೌರವ ಕೊಡದೆ ಮಾತನಾಡಿದ್ದಾರೆ. ಇಡೀ ದೇಶ ರಕ್ಷಣೆ ಮಾಡುವ ಸೇನೆ ಬಗ್ಗೆ ಇಂಥ ಮಾತನಾಡುವುದು ಸರಿಯಲ್ಲ. ಅವರೂ ಕೂಡ ಭದ್ರತೆ ವಿಚಾರಕ್ಕೆ ಸಂಬಂಧಪಟ್ಟಂತೆ ಸೇನಾ ನೆಲೆಗಳ ಸುತ್ತಲಿನ ರಸ್ತೆಗಳನ್ನು ಬಂದ್ ಮಾಡಿಕೊಳ್ಳುತ್ತಾರೆ. ಕೆಟಿಆರ್ ಮಾತುಗಳನ್ನು ಕೇಳಿದರೆ ಅವರು ಹೈದರಾಬಾದ್​ನಿಂದ ಸೇನಾ ನೆಲೆಯನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಅನ್ನಿಸುತ್ತದೆ ಎಂದು ಬಿಜೆಪಿ ನಾಯಕ ಎನ್​.ವಿ.ಸುಭಾಷ್​ ಹೇಳಿದ್ದಾರೆ.  ಹೀಗೆ ಸೇನಾ ಸಿಬ್ಬಂದಿಗೆ ನೀರು, ವಿದ್ಯುತ್​ ಕೊಡುವುದಿಲ್ಲವೆಂದು ಬೆದರಿಕೆ ಹಾಕುವುದು ಸರಿಯಲ್ಲ. ಅದರ ಬದಲಿಗೆ ಸರ್ಕಾರ ಮಾತುಕತೆ ಮೂಲಕ ಸಮಸ್ಯೆ ಪರಿಹಾರ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಭಾರೀ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಸಿಕಂದರಾಬಾದ್ ಕ್ಲಬ್

Published On - 12:36 pm, Sun, 13 March 22

ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ