AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CV Anand Bose: ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಸಿವಿ ಆನಂದ ಬೋಸ್ ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರು 'ಕಲ್ಪನಾ ಮನುಷ್ಯ' ಎಂದು ಬಣ್ಣಿಸಿದ ಮಾಜಿ ಅಧಿಕಾರಿ ಸಿವಿ ಆನಂದ ಬೋಸ್ ಅವರನ್ನು ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಗುರುವಾರ ನೇಮಿಸಲಾಗಿದೆ.

CV Anand Bose: ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಸಿವಿ ಆನಂದ ಬೋಸ್ ನೇಮಕ
CV Anand Bose
TV9 Web
| Edited By: |

Updated on:Nov 18, 2022 | 10:37 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಕಲ್ಪನಾ ಮನುಷ್ಯ‘ ಎಂದು ಬಣ್ಣಿಸಿದ ಮಾಜಿ ಅಧಿಕಾರಿ ಸಿವಿ ಆನಂದ ಬೋಸ್ ಅವರನ್ನು ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಗುರುವಾರ ನೇಮಿಸಲಾಗಿದೆ. 71 ವಯಸ್ಸಿನ ಬೋಸ್ ಅವರು ಕೇರಳದ ಕೇಡರ್‌ನ 1977 ಬ್ಯಾಚ್ (ನಿವೃತ್ತ) ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಯಾಗಿದ್ದರು. ಡಾ.ಸಿ.ವಿ. ಆನಂದ ಬೋಸ್ ಅವರನ್ನು ಪಶ್ಚಿಮ ಬಂಗಾಳದ ನಿಯಮಿತ ರಾಜ್ಯಪಾಲರನ್ನಾಗಿ ನೇಮಿಸಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಮಣಿಪುರದ ಗವರ್ನರ್ ಲಾ ಗಣೇಶನ್ ಅವರು ಜುಲೈನಿಂದ ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿ ವಹಿಸಿದ್ದರು, ಪ್ರಸ್ತುತ ಜಗದೀಪ್ ಧನಕರ್ ಅವರನ್ನು ಉಪರಾಷ್ಟ್ರಪತಿಯಾದ ಲಾ ಗಣೇಶನ್ ಅವರು ಹೆಚ್ಚುವರಿ ಉಸ್ತುವಾರಿಯನ್ನು ವಹಿಸಿದ್ದರು. ಇದೀಗ ಸಿವಿ ಆನಂದ ಬೋಸ್ ಅವರನ್ನು ನೇಮಕ ಮಾಡಿ ಆದೇಶ ನೀಡಿದ್ದಾರೆ. ಭಾರತದ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಧಂಖರ್ ಅವರು ಸುಮಾರು ಮೂರು ವರ್ಷಗಳ ಕಾಲ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ಇದೀಗ ಅವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಸಿವಿ ಆನಂದ ಬೋಸ್ ಆಯ್ಕೆಯಾಗಿದ್ದಾರೆ. ಕೇರಳದ ಕೊಟ್ಟಾಯಂನ ಮನ್ನನಂನಲ್ಲಿ ಜನಿಸಿದ ಬೋಸ್ ಅವರು 2011 ರಲ್ಲಿ ನಿವೃತ್ತರಾಗುವ ಮೊದಲು ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ನಿರ್ವಾಹಕರಾಗಿ ಸೇವೆ ಸಲ್ಲಿಸಿದರು.

ಇದನ್ನು ಓದಿ: ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಂತೆ ಕರ್ನಾಟಕದಲ್ಲೂ ಮದರಸಗಳ ಬ್ಯಾನ್​ಗೆ ಮನವಿ

ಸೇವೆಯ ‘ಮೇಕ್ ಓವರ್ ಮ್ಯಾನ್’ ಮತ್ತು ವಸತಿ ತಜ್ಞ ಎಂದು ಕರೆಯಲ್ಪಡುವ ಅವರನ್ನು ಕೇರಳ ಸರ್ಕಾರ ‘ಕಲ್ಪನೆಗಳ ಅಧಿಪತಿ’ ಮತ್ತು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರು ‘ಸ್ಫೂರ್ತಿ ಪಡೆದ ನಾಗರಿಕ ಸೇವಕ’ ಎಂದು ಬಣ್ಣಿಸಿದ್ದಾರೆ. ಬೋಸ್ ಅವರು ಕೇರಳ ಮತ್ತು ಕೇಂದ್ರದಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಕೇರಳದ ಕ್ವಿಲಾನ್ ಜಿಲ್ಲೆಯ (ಈಗ ಕೊಲ್ಲಂ) ಜಿಲ್ಲಾಧಿಕಾರಿಯಾಗಿದ್ದರು, ರಾಜ್ಯದ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಮತ್ತು ಕೃಷಿ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಸೆಂಟ್ರಲ್ ವೇರ್‌ಹೌಸಿಂಗ್ ಕಾರ್ಪೊರೇಶನ್‌ನ (CWC) ಮಾಜಿ ಅಧ್ಯಕ್ಷರಾಗಿದ್ದ ಬೋಸ್, ವಿಶ್ವಸಂಸ್ಥೆಯ ಸಮಾಲೋಚನಾ ಸ್ಥಾನಮಾನದಲ್ಲಿ ಹ್ಯಾಬಿಟಾಟ್ ಅಲೈಯನ್ಸ್‌ನ ಅಧ್ಯಕ್ಷರಾಗಿದ್ದರು. ಅವರು ಪ್ರತಿಷ್ಠಿತ ಜವಾಹರಲಾಲ್ ನೆಹರು ಫೆಲೋಶಿಪ್‌ಗೆ ಭಾಜನರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 am, Fri, 18 November 22

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ