AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಬ್ಲ್ಯೂಆರ್​ಸಿ ಆದೇಶಕ್ಕೆ ಒಪ್ಪದ ಕರ್ನಾಟಕ, ತಮಿಳುನಾಡು; ಸೆ.18ಕ್ಕೆ CWMA ಸಭೆ ನಿಗದಿ

ರೈತರ ಭಾರೀ ವಿರೋಧದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂ ಆರ್​ಸಿ ಕರ್ನಾಟಕಕ್ಕೆ ಆದೇಶಿಸಿತ್ತು. ಮುಂದಿನ 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿತ್ತು. ಆದರೆ ಇದಕ್ಕೆ ಕರ್ನಾಟಕ ಒಪ್ಪದ ಕಾರಣ, ಸೆಪ್ಟೆಂಬರ್ 18 ರಂದು ಕಾವೇರಿ ನೀರು ನಿರ್ವಹಣಾ ಪ್ರಧಾಕಾರದ ಸಭೆ ನಿಗದಿ ಮಾಡಲಾಗಿದೆ.

ಸಿಡಬ್ಲ್ಯೂಆರ್​ಸಿ ಆದೇಶಕ್ಕೆ ಒಪ್ಪದ ಕರ್ನಾಟಕ, ತಮಿಳುನಾಡು; ಸೆ.18ಕ್ಕೆ CWMA ಸಭೆ ನಿಗದಿ
ಸಿಡಬ್ಲ್ಯುಆರ್​ಸಿ ಆದೇಶಕ್ಕೆ ಕರ್ನಾಟಕ, ತಮಿಳುನಾಡು ಒಪ್ಪದ ಹಿನ್ನೆಲೆ ಸೆ.18ಕ್ಕೆ CWMA ಸಭೆ ನಿಗದಿ
ಹರೀಶ್ ಜಿ.ಆರ್​.
| Edited By: Rakesh Nayak Manchi|

Updated on:Sep 15, 2023 | 2:00 PM

Share

ನವದೆಹಲಿ, ಸೆ.15: ತಮಿಳುನಾಡಿಗೆ ಪ್ರತಿದಿನ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯೂಆರ್​ಸಿ (CWRC) ಆದೇಶವನ್ನು ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಒಪ್ಪದ ಹಿನ್ನೆಲೆ ಸೆಪ್ಟೆಂಬರ್ 18 ರಂದು ಕಾವೇರಿ ನೀರು ನಿರ್ವಹಣಾ ಪ್ರಧಾಕಾರದ (CWMA) ಸಭೆ ನಿಗದಿ ಮಾಡಲಾಗಿದೆ.

ಕರ್ನಾಟಕದಲ್ಲಿ ಮಳೆ ಅಭಾವದಿಂದ ನೀರಿನ ಅಭಾವ ಇದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂ ಆರ್​ಸಿ ಆದೇಶ ಹೊರಡಿಸಿತ್ತು. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 15 ದಿನ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: ಕಾವೇರಿ ನದಿಯ 3 ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಕುಸಿತ, ಕಳೆದ 10 ವರ್ಷಕ್ಕಿಂತ ಈ ವರ್ಷ ಭಾರಿ ಕಡಿಮೆ

ಸಿಡಬ್ಲ್ಯೂಆರ್​ಸಿ ಆದೇಶಕ್ಕೆ ಕರ್ನಾಟಕದ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದೇಶಕ್ಕೆ ತಮಿಳುನಾಡು ಕೂಡ ಆಕ್ಷೇಪ ವ್ಯಕ್ತಪಡಿಸಿತ್ತು. ಇತ್ತ ಕರ್ನಾಟಕದಲ್ಲಿ ಅದರಲ್ಲೂ ಮಂಡ್ಯ ಜಿಲ್ಲೆಯಲ್ಲಿ ರೈತರ ಆಕ್ರೋಶದ ಕಿಡಿ ಹೆಚ್ಚಾಗಿತ್ತು.

ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ. ತಮಿಳುನಾಡಿಗೆ ನೀರು ಬಿಡುವಷ್ಟು ನೀರು ನಮ್ಮಲ್ಲಿ ಇಲ್ಲ ಎಂದು ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Fri, 15 September 23

Follow Us
Harish GR
Harish GR
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು