AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಬ್ಲ್ಯೂಆರ್​ಸಿ ಆದೇಶಕ್ಕೆ ಒಪ್ಪದ ಕರ್ನಾಟಕ, ತಮಿಳುನಾಡು; ಸೆ.18ಕ್ಕೆ CWMA ಸಭೆ ನಿಗದಿ

ರೈತರ ಭಾರೀ ವಿರೋಧದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂ ಆರ್​ಸಿ ಕರ್ನಾಟಕಕ್ಕೆ ಆದೇಶಿಸಿತ್ತು. ಮುಂದಿನ 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿತ್ತು. ಆದರೆ ಇದಕ್ಕೆ ಕರ್ನಾಟಕ ಒಪ್ಪದ ಕಾರಣ, ಸೆಪ್ಟೆಂಬರ್ 18 ರಂದು ಕಾವೇರಿ ನೀರು ನಿರ್ವಹಣಾ ಪ್ರಧಾಕಾರದ ಸಭೆ ನಿಗದಿ ಮಾಡಲಾಗಿದೆ.

ಸಿಡಬ್ಲ್ಯೂಆರ್​ಸಿ ಆದೇಶಕ್ಕೆ ಒಪ್ಪದ ಕರ್ನಾಟಕ, ತಮಿಳುನಾಡು; ಸೆ.18ಕ್ಕೆ CWMA ಸಭೆ ನಿಗದಿ
ಸಿಡಬ್ಲ್ಯುಆರ್​ಸಿ ಆದೇಶಕ್ಕೆ ಕರ್ನಾಟಕ, ತಮಿಳುನಾಡು ಒಪ್ಪದ ಹಿನ್ನೆಲೆ ಸೆ.18ಕ್ಕೆ CWMA ಸಭೆ ನಿಗದಿ
ಹರೀಶ್ ಜಿ.ಆರ್​.
| Edited By: Rakesh Nayak Manchi|

Updated on:Sep 15, 2023 | 2:00 PM

Share

ನವದೆಹಲಿ, ಸೆ.15: ತಮಿಳುನಾಡಿಗೆ ಪ್ರತಿದಿನ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯೂಆರ್​ಸಿ (CWRC) ಆದೇಶವನ್ನು ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಒಪ್ಪದ ಹಿನ್ನೆಲೆ ಸೆಪ್ಟೆಂಬರ್ 18 ರಂದು ಕಾವೇರಿ ನೀರು ನಿರ್ವಹಣಾ ಪ್ರಧಾಕಾರದ (CWMA) ಸಭೆ ನಿಗದಿ ಮಾಡಲಾಗಿದೆ.

ಕರ್ನಾಟಕದಲ್ಲಿ ಮಳೆ ಅಭಾವದಿಂದ ನೀರಿನ ಅಭಾವ ಇದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂ ಆರ್​ಸಿ ಆದೇಶ ಹೊರಡಿಸಿತ್ತು. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 15 ದಿನ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: ಕಾವೇರಿ ನದಿಯ 3 ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಕುಸಿತ, ಕಳೆದ 10 ವರ್ಷಕ್ಕಿಂತ ಈ ವರ್ಷ ಭಾರಿ ಕಡಿಮೆ

ಸಿಡಬ್ಲ್ಯೂಆರ್​ಸಿ ಆದೇಶಕ್ಕೆ ಕರ್ನಾಟಕದ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದರು. ಆದೇಶಕ್ಕೆ ತಮಿಳುನಾಡು ಕೂಡ ಆಕ್ಷೇಪ ವ್ಯಕ್ತಪಡಿಸಿತ್ತು. ಇತ್ತ ಕರ್ನಾಟಕದಲ್ಲಿ ಅದರಲ್ಲೂ ಮಂಡ್ಯ ಜಿಲ್ಲೆಯಲ್ಲಿ ರೈತರ ಆಕ್ರೋಶದ ಕಿಡಿ ಹೆಚ್ಚಾಗಿತ್ತು.

ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ. ತಮಿಳುನಾಡಿಗೆ ನೀರು ಬಿಡುವಷ್ಟು ನೀರು ನಮ್ಮಲ್ಲಿ ಇಲ್ಲ ಎಂದು ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Fri, 15 September 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ