AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಸೈಬರ್ ವಂಚನೆ: ಆನ್​ಲೈನ್​ನಲ್ಲಿ 82 ಲಕ್ಷ ರೂ. ಕಳೆದುಕೊಂಡ ಟೆಕ್ಕಿ, ಉಗ್ರ ಸಂಘಟನೆಗೂ ಇದೆ ಲಿಂಕ್

ಹೈದರಾಬಾದ್​ ಪೊಲೀಸರು ಚೀನಾದ ವ್ಯಕ್ತಿಗಳ ಕೈವಾಡವಿರುವ ಬೃಹತ್ ಸೈಬರ್ ವಂಚನೆ ಜಾಲವನ್ನು ಪತ್ತೆ ಮಾಡಿದ್ದಾರೆ.

Cyber Crime: ಸೈಬರ್ ವಂಚನೆ: ಆನ್​ಲೈನ್​ನಲ್ಲಿ 82 ಲಕ್ಷ ರೂ. ಕಳೆದುಕೊಂಡ ಟೆಕ್ಕಿ, ಉಗ್ರ ಸಂಘಟನೆಗೂ ಇದೆ ಲಿಂಕ್
ಸೈಬರ್ ಕ್ರೈಂ
ನಯನಾ ರಾಜೀವ್
|

Updated on: Jul 25, 2023 | 8:05 AM

Share

ಹೈದರಾಬಾದ್, ಜುಲೈ 25: ಹೈದರಾಬಾದ್​ ಪೊಲೀಸರು ಚೀನಾದ ವ್ಯಕ್ತಿಗಳ ಕೈವಾಡವಿರುವ ಬೃಹತ್ ಸೈಬರ್ ವಂಚನೆ ಜಾಲವನ್ನು ಪತ್ತೆ ಮಾಡಿದ್ದಾರೆ. ಇವರು ಇದರಲ್ಲಿ ಕನಿಷ್ಠ 15,000 ಭಾರತೀಯರು ಒಂದು ವರ್ಷದೊಳಗೆ 700 ಕೋಟಿ ರೂ.ಗೂ ಹೆಚ್ಚು ಹಣವನ್ನು ವಂಚಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೈದರಾಬಾದ್​ನ ಸಾಫ್ಟ್​ವೇರ್ ಇಂಜಿನಿಯರ್ ಶಿವ ಎಂಬುವವರು ಆನ್​ಲೈನ್​ನಲ್ಲಿ 82 ಲಕ್ಷ ರೂ ಕಳೆದುಕೊಂಡಿದ್ದು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೈದರಾಬಾದ್​ ಸೈಬರ್ ಕ್ರೈಂ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಚೀನಾ ಬೆಂಬಲಿತ ತಂಡವೊಂದು 700 ಕೋಟಿ ರೂ ವಂಚನೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಸಂಬಂಧ ಇಲ್ಲಿಯವರೆಗೆ 9 ಮಂದಿಯನ್ನು ಬಂಧಿಸಲಾಗಿದೆ.

ಚೀನಾದಲ್ಲಿ ಕಾರ್ಯಾಚರಿಸುತ್ತಿರುವ ಕೆವಿನ್ ಜುನ್, ಲು ಲಾಂಗ್ಶೋ ಮತ್ತು ಶಾಶಾ ಎಂಬ ಮೂವರನ್ನು ಒಳಗೊಂಡ ಈ ಗ್ಯಾಂಗ್ ಭಾರತದಲ್ಲಿ ಕೆಲವರ ಸಹಕಾರದೊಂದಿಗೆ ಕೆಲಸ ಮಾಡುತ್ತಿದೆ. ಇದಕ್ಕೂ ಹಾಗೂ ಭಯೋತ್ಪಾದಕ ಸಂಘಟನೆಯೊಂದಕ್ಕೆ ಸಂಬಂಧವಿದೆ ಎನ್ನಲಾಗಿದೆ.

ಮತ್ತಷ್ಟು ಓದಿ: ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

ಈ ವಂಚನೆಯ ಮಾಸ್ಟರ್​ಮೈಂಡ್ ಅಹಮದಾಬಾದ್​ನ ಪ್ರಕಾಶ ಪ್ರಜಾಪತಿ ಹಾಗೂ ಕುಮಾರ್ ಪ್ರಜಾಪತಿ ಎಂದು ಗುರುತಿಸಲಾಗಿದ್ದು ಅವರನ್ನು ಬಂಧಿಸಲಾಗಿದೆ.

ವಿವಿಧ ಬೋಗಸ್ ಕಂಪನಿ ಹೆಸರಿನಲ್ಲಿ 48 ಬ್ಯಾಂಕ್ ಖಾತೆಗಳಿಗೆ 584 ಕೋಟಿ ರೂ. ಜಮಾ ಆಗಿದೆ. ಹೆಚ್ಚಿನ ತನಿಖೆಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಇನ್ನೂ 128 ಕೋಟಿ ರೂ.ಗಳನ್ನು ಅಕ್ರಮವಾಗಿ ಹೂಡಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಯೂಟ್ಯೂಬ್ ಹಾಗೂ ಫೇಸ್​ಬುಕ್ ಮೂಲಕ ಈ ತಂಡ ಅಮಾಯಕರನ್ನು ಟಾರ್ಗೆಟ್ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಹಣವನ್ನು ದುಬೈ ಮೂಲಕ ಚೀನಾಕ್ಕೆ ರವಾನಿಸಲಾಗಿದೆ ಮತ್ತು ಅದರಲ್ಲಿ ಕೆಲವನ್ನು ಲೆಬನಾನ್ ಮೂಲದ ಭಯೋತ್ಪಾದಕ ಗುಂಪು ಹೆಜ್ಬುಲ್ಲಾ ನಿರ್ವಹಿಸುತ್ತಿರುವ ಖಾತೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾವು ಈ ಬಗ್ಗೆ ಕೇಂದ್ರ ಏಜೆನ್ಸಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇವೆ ಮತ್ತು ಕೇಂದ್ರ ಗೃಹ ಸಚಿವಾಲಯದ ಸೈಬರ್ ಕ್ರೈಂ ಘಟಕಕ್ಕೆ ವಿವರಗಳನ್ನು ನೀಡಲಾಗಿದೆ.

ಹಣದ ಒಂದು ಭಾಗವನ್ನು ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸಲಾಗಿದೆ ಮತ್ತು ಹಿಜ್ಬುಲ್ಲಾ ನಿರ್ವಹಿಸುವ ವ್ಯಾಲೆಟ್‌ಗೆ ಠೇವಣಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಹೂಡಿಕೆ ಮತ್ತು ಅರೆಕಾಲಿಕ ಉದ್ಯೋಗಗಳ ಹೆಸರಿನಲ್ಲಿ ಜನರನ್ನು ಆಮಿಷವೊಡ್ಡಿರುವುದು ಕಂಡುಬಂದಿದೆ. 5-6 ಲಕ್ಷ ಹಣವನ್ನು ಕಳೆದುಕೊಂಡವರನ್ನು ವಾಟ್ಸಾಪ್​ ಹಾಗೂ ಟೆಲಿಗ್ರಾಮ್​ನಲ್ಲಿ ಸಂಪರ್ಕಿಸಿ ಅವರಿಗೆ 5 ಸಾವಿರ ಮೊತ್ತದ ಸಣ್ಣ ಮೊತ್ತವನ್ನು ಹೂಡಿಕೆ ಮಾಡಲು ಕೇಳಿದ್ದಾರೆ, ಮೊದಲ ಕಾರ್ಯ ಪೂರ್ಣಗೊಂಡ ಬಳಿಕ ದುಪ್ಪಟ್ಟು ಹಣ ನೀಡಿ, ನಂತರ ಹೆಚ್ಚಿನ ಮೊತ್ತವನ್ನು ಹಾಕಿಸಿಕೊಂಡು ಯಾಮಾರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!