Cyber Crime: ಸೈಬರ್ ವಂಚನೆ: ಆನ್​ಲೈನ್​ನಲ್ಲಿ 82 ಲಕ್ಷ ರೂ. ಕಳೆದುಕೊಂಡ ಟೆಕ್ಕಿ, ಉಗ್ರ ಸಂಘಟನೆಗೂ ಇದೆ ಲಿಂಕ್

ಹೈದರಾಬಾದ್​ ಪೊಲೀಸರು ಚೀನಾದ ವ್ಯಕ್ತಿಗಳ ಕೈವಾಡವಿರುವ ಬೃಹತ್ ಸೈಬರ್ ವಂಚನೆ ಜಾಲವನ್ನು ಪತ್ತೆ ಮಾಡಿದ್ದಾರೆ.

Cyber Crime: ಸೈಬರ್ ವಂಚನೆ: ಆನ್​ಲೈನ್​ನಲ್ಲಿ 82 ಲಕ್ಷ ರೂ. ಕಳೆದುಕೊಂಡ ಟೆಕ್ಕಿ, ಉಗ್ರ ಸಂಘಟನೆಗೂ ಇದೆ ಲಿಂಕ್
ಸೈಬರ್ ಕ್ರೈಂ

Updated on: Jul 25, 2023 | 8:05 AM

ಹೈದರಾಬಾದ್, ಜುಲೈ 25: ಹೈದರಾಬಾದ್​ ಪೊಲೀಸರು ಚೀನಾದ ವ್ಯಕ್ತಿಗಳ ಕೈವಾಡವಿರುವ ಬೃಹತ್ ಸೈಬರ್ ವಂಚನೆ ಜಾಲವನ್ನು ಪತ್ತೆ ಮಾಡಿದ್ದಾರೆ. ಇವರು ಇದರಲ್ಲಿ ಕನಿಷ್ಠ 15,000 ಭಾರತೀಯರು ಒಂದು ವರ್ಷದೊಳಗೆ 700 ಕೋಟಿ ರೂ.ಗೂ ಹೆಚ್ಚು ಹಣವನ್ನು ವಂಚಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೈದರಾಬಾದ್​ನ ಸಾಫ್ಟ್​ವೇರ್ ಇಂಜಿನಿಯರ್ ಶಿವ ಎಂಬುವವರು ಆನ್​ಲೈನ್​ನಲ್ಲಿ 82 ಲಕ್ಷ ರೂ ಕಳೆದುಕೊಂಡಿದ್ದು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೈದರಾಬಾದ್​ ಸೈಬರ್ ಕ್ರೈಂ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಚೀನಾ ಬೆಂಬಲಿತ ತಂಡವೊಂದು 700 ಕೋಟಿ ರೂ ವಂಚನೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಸಂಬಂಧ ಇಲ್ಲಿಯವರೆಗೆ 9 ಮಂದಿಯನ್ನು ಬಂಧಿಸಲಾಗಿದೆ.

ಚೀನಾದಲ್ಲಿ ಕಾರ್ಯಾಚರಿಸುತ್ತಿರುವ ಕೆವಿನ್ ಜುನ್, ಲು ಲಾಂಗ್ಶೋ ಮತ್ತು ಶಾಶಾ ಎಂಬ ಮೂವರನ್ನು ಒಳಗೊಂಡ ಈ ಗ್ಯಾಂಗ್ ಭಾರತದಲ್ಲಿ ಕೆಲವರ ಸಹಕಾರದೊಂದಿಗೆ ಕೆಲಸ ಮಾಡುತ್ತಿದೆ. ಇದಕ್ಕೂ ಹಾಗೂ ಭಯೋತ್ಪಾದಕ ಸಂಘಟನೆಯೊಂದಕ್ಕೆ ಸಂಬಂಧವಿದೆ ಎನ್ನಲಾಗಿದೆ.

ಮತ್ತಷ್ಟು ಓದಿ: ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

ಈ ವಂಚನೆಯ ಮಾಸ್ಟರ್​ಮೈಂಡ್ ಅಹಮದಾಬಾದ್​ನ ಪ್ರಕಾಶ ಪ್ರಜಾಪತಿ ಹಾಗೂ ಕುಮಾರ್ ಪ್ರಜಾಪತಿ ಎಂದು ಗುರುತಿಸಲಾಗಿದ್ದು ಅವರನ್ನು ಬಂಧಿಸಲಾಗಿದೆ.

ವಿವಿಧ ಬೋಗಸ್ ಕಂಪನಿ ಹೆಸರಿನಲ್ಲಿ 48 ಬ್ಯಾಂಕ್ ಖಾತೆಗಳಿಗೆ 584 ಕೋಟಿ ರೂ. ಜಮಾ ಆಗಿದೆ. ಹೆಚ್ಚಿನ ತನಿಖೆಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಇನ್ನೂ 128 ಕೋಟಿ ರೂ.ಗಳನ್ನು ಅಕ್ರಮವಾಗಿ ಹೂಡಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಯೂಟ್ಯೂಬ್ ಹಾಗೂ ಫೇಸ್​ಬುಕ್ ಮೂಲಕ ಈ ತಂಡ ಅಮಾಯಕರನ್ನು ಟಾರ್ಗೆಟ್ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಹಣವನ್ನು ದುಬೈ ಮೂಲಕ ಚೀನಾಕ್ಕೆ ರವಾನಿಸಲಾಗಿದೆ ಮತ್ತು ಅದರಲ್ಲಿ ಕೆಲವನ್ನು ಲೆಬನಾನ್ ಮೂಲದ ಭಯೋತ್ಪಾದಕ ಗುಂಪು ಹೆಜ್ಬುಲ್ಲಾ ನಿರ್ವಹಿಸುತ್ತಿರುವ ಖಾತೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾವು ಈ ಬಗ್ಗೆ ಕೇಂದ್ರ ಏಜೆನ್ಸಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇವೆ ಮತ್ತು ಕೇಂದ್ರ ಗೃಹ ಸಚಿವಾಲಯದ ಸೈಬರ್ ಕ್ರೈಂ ಘಟಕಕ್ಕೆ ವಿವರಗಳನ್ನು ನೀಡಲಾಗಿದೆ.

ಹಣದ ಒಂದು ಭಾಗವನ್ನು ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸಲಾಗಿದೆ ಮತ್ತು ಹಿಜ್ಬುಲ್ಲಾ ನಿರ್ವಹಿಸುವ ವ್ಯಾಲೆಟ್‌ಗೆ ಠೇವಣಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಹೂಡಿಕೆ ಮತ್ತು ಅರೆಕಾಲಿಕ ಉದ್ಯೋಗಗಳ ಹೆಸರಿನಲ್ಲಿ ಜನರನ್ನು ಆಮಿಷವೊಡ್ಡಿರುವುದು ಕಂಡುಬಂದಿದೆ. 5-6 ಲಕ್ಷ ಹಣವನ್ನು ಕಳೆದುಕೊಂಡವರನ್ನು ವಾಟ್ಸಾಪ್​ ಹಾಗೂ ಟೆಲಿಗ್ರಾಮ್​ನಲ್ಲಿ ಸಂಪರ್ಕಿಸಿ ಅವರಿಗೆ 5 ಸಾವಿರ ಮೊತ್ತದ ಸಣ್ಣ ಮೊತ್ತವನ್ನು ಹೂಡಿಕೆ ಮಾಡಲು ಕೇಳಿದ್ದಾರೆ, ಮೊದಲ ಕಾರ್ಯ ಪೂರ್ಣಗೊಂಡ ಬಳಿಕ ದುಪ್ಪಟ್ಟು ಹಣ ನೀಡಿ, ನಂತರ ಹೆಚ್ಚಿನ ಮೊತ್ತವನ್ನು ಹಾಕಿಸಿಕೊಂಡು ಯಾಮಾರಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us