Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ಫಾರ್ಮ್ ಹೌಸ್ ಮೇಲೆ ಪೊಲೀಸ್ ದಾಳಿ: ಆಪರೇಷನ್ ಕಮಲಕ್ಕೆ ತಂದಿದ್ದ ಎನ್ನಲಾದ 15 ಕೋಟಿ ರೂ. ಸೀಜ್

ತೆಲಂಗಾಣದಲ್ಲಿ ಟಿಆರ್‌ಎಸ್-ಬಿಜೆಪಿ ಜಿದ್ದಾಜಿದ್ದಿ ಬಿರುಸುಗೊಂಡಿದೆ. ಇದರ ಮಧ್ಯೆ ಪೋಲೀಸರು ಭರ್ಜರಿ ಕಾರ್ಯಚರಣೆ ಮಾಡಿ ಆಪರೇಷನ್ ಕಮಲಕ್ಕಾಗಿ ತಂದಿದ್ದ ಎನ್ನಲಾದ ಹಣವನ್ನು ಸೀಜ್ ಮಾಡಿದ್ದಾರೆ.

ತೆಲಂಗಾಣದ ಫಾರ್ಮ್ ಹೌಸ್ ಮೇಲೆ ಪೊಲೀಸ್ ದಾಳಿ: ಆಪರೇಷನ್ ಕಮಲಕ್ಕೆ ತಂದಿದ್ದ ಎನ್ನಲಾದ 15 ಕೋಟಿ ರೂ. ಸೀಜ್
Cyberabad Police conduct raids
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 26, 2022 | 11:00 PM

ಹೈದರಾಬಾದ್‌: ತೆಲಂಗಾಣದ ಸೈಬರಾಬಾದ್  ಪೊಲೀಸರು ಅಝಿಜ್ ನಗರದ ಫಾರ್ಮ್ ಹೌಸ್ ಮೇಲೆ‌ ದಾಳಿ ಮಾಡಿದ್ದು, ಬರೋಬ್ಬರಿ 15 ಕೋಟಿ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಹೈದರಾಬಾದ್‌ನ ಹೈದರಾಬಾದ್‌ನ ಅಜೀಜ್‌ ನಗರದ ಫಾರ್ಮ್ ಹೌಸ್ ಮೇಲೆ  ಇಂದು(ಅಕ್ಟೋಬರ್ 26) ಪೊಲೀಸರು ದಾಳಿ ಮಾಡಿದ್ದು, 15 ಕೋಟಿ ರೂಪಾಯಿ ನಗದು ಜಪ್ತಿ ಮಾಡುವುದರ ಜೊತೆ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹರಿಯಾಣದ ಫರಿದಾಬಾದ್ ಮೂಲದ ಪೂಜಾರಿಯಾಗಿರುವ ಸತೀಶ್ ಶರ್ಮಾ (33), ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ D. ಸಿಂಹಯಾಜಿ(45), ಹಾಗೂ ಸರೂರನಗರದ ಉದ್ಯಮಿ ನಂದಕುಮಾರ್ (48) ಎನ್ನುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹಣದ ಮೂಲದ ಬಗ್ಗೆ ತನಿಖೆ ನಡೆಸಿದ್ದಾರೆ. ಫಾರ್ಮ್‌ ಹೌಸ್‌ ಶಾಸಕ ಪೈಲಟ್ ರೋಹಿತ್‌ ರೆಡ್ಡಿಗೆ ಸೇರಿದ್ದು, ಶಾಸಕ ರೋಹಿತ್‌ ರೆಡ್ಡಿರನ್ನೂ ಖರೀದಿಸಲು ಯತ್ನಿಸಲಾಗಿದೆಯಂತೆ. ಅಲ್ಲದೇ TRS ಶಾಸಕರಾದ ಹರ್ಷವರ್ಧನ್‌ ರೆಡ್ಡಿ, ರೇಗ ಕಾಂತಾರಾವ್‌, ಗುವ್ವಲ ಬಾಲರಾಜ್‌ರನ್ನು ಖರೀದಿಸಲು ಒಬ್ಬೊಬ್ಬ ಶಾಸಕರಿಗೂ ತಲಾ 100 ಕೋಟಿ ರೂ. ಆಫರ್ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

TRSನ(ಭಾರತ್ ರಾಷ್ಟ್ರ ಸಮಿತಿ ) ನಾಲ್ಕು ಶಾಸಕರನ್ನು ಖರೀದಿಸಲು ಈ ಹಣ ತರಲಾಗಿದೆ ಎಂಬ ಮಾಹಿತಿ ಪೊಲೀಸ್​ ಮೂಲಗಳಿಂದ ತಿಳಿದುಬಂದಿದೆ. ಆಪರೇಷನ್ ಕಮಲಕ್ಕಾಗಿ 15 ಕೋಟಿ ರೂ. ತಂದಿದ್ದು, ಹಣದ ಜೊತೆ ದೆಹಲಿಯಿಂದ ಬಂದಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಸರ್ಕಾರ ರಚಿಸಿದ ನಂತರ, ಬಿಜೆಪಿ ಈಗ ತೆಲಂಗಾಣದಲ್ಲಿ ಅಧಿಕಾರವನ್ನು ಆಕ್ರಮಿಸಿಕೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಟಿಆರ್‌ಎಸ್-ಬಿಜೆಪಿ ಜಿದ್ದಾಜಿದ್ದಿ ಬಿರುಸುಗೊಂಡಿದೆ. ಇದರ ಮಧ್ಯೆ ಆಪರೇಷನ್ ಕಮಲಕ್ಕೆ ತಂದಿದ್ದ ಎನ್ನಲಾದ 15 ಕೋಟಿ ರೂ. ಸೀಜ್ ಮಾಡಿದ್ದು, ಇದಕ್ಕೆ ಇಂಬು ನೀಡಿದಂತಾಗಿದೆ.

Published On - 9:57 pm, Wed, 26 October 22

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!