Remal Cyclone: ಒಡಿಶಾ, ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಚಂಡಮಾರುತ, ಈ ರಾಜ್ಯಗಳಲ್ಲಿ ಭಾರಿ ಮಳೆ

Remal Cyclone: ಮುಂಗಾರು ಆಗಮನಕ್ಕೂ ಮುನ್ನ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದ್ದು, ಒಡಿಶಾ, ಪಶ್ಚಿಮ ಬಂಗಾಳಕ್ಕೆ ಚಂಡಮಾರುತ ಅಪ್ಪಳಿಸಲಿದೆ. ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

Remal Cyclone: ಒಡಿಶಾ, ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಚಂಡಮಾರುತ, ಈ ರಾಜ್ಯಗಳಲ್ಲಿ ಭಾರಿ ಮಳೆ
ಚಂಡಮಾರುತImage Credit source: National Geographic
Follow us
|

Updated on:May 23, 2024 | 2:14 PM

ಇಂದು ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತ(Cyclone) ಅಪ್ಪಳಿಸುವ ಸಾಧ್ಯತೆ ಇದೆ. ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು ನೀಡಿದೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗದ ಕರಾವಳಿಯುದ್ದಕ್ಕೂ, ಭಾರೀ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾ ಅಲ್ಲದೆ, ಚಂಡಮಾರುತವು ಮೇ 23 ಮತ್ತು ಮೇ 27 ರ ನಡುವೆ ಮಹಾರಾಷ್ಟ್ರ ಮತ್ತು ಗುಜರಾತ್‌ನ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಮೇ 28ರ ಸುಮಾರಿಗೆ ಗುಜರಾತ್ ಮತ್ತು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ಓದಿ: Cyclone: ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿದೆ ಚಂಡಮಾರುತ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ

ಕರ್ನಾಟಕ, ಪುದುಚೇರಿ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಲಕ್ಷದ್ವೀಪ ಮತ್ತು ತೆಲಂಗಾಣದಲ್ಲಿ ಮೇ 23 ರವರೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವಿಶೇಷವಾಗಿ ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳಲ್ಲಿರುವವರು ಜಾಗರೂಕತೆ ವಹಿಸುವಂತೆ ರಾಜ್ಯ ಸರ್ಕಾರವು ನಿವಾಸಿಗಳನ್ನು ಒತ್ತಾಯಿಸಿದೆ. ನೈಋತ್ಯ ಮುಂಗಾರು ಮೇ 31ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:28 am, Thu, 23 May 24

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ