AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸದ ನಡುವೆ ಅಪ್ಪಳಿಸುತ್ತಿದೆ ಅಂಫಾನ್ ಚಂಡಮಾರುತ!

ಮಂಗಳೂರು: ಇಡೀ ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಭಾರತದ ಹಲವೆಡೆ ಅಂಫಾನ್ ಚಂಡಮಾರುತ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಲ್ಲೂ ದಕ್ಷಿಣ ರಾಜ್ಯಗಳಲ್ಲಿ ಅಂಫಾನ್ ಚಂಡಮಾರುತ ಎಫೆಕ್ಟ್ ತೀವ್ರವಾಗಿರಲಿದೆ ಎಂದು ತಿಳಿಸಿದೆ. ಕಡಲನಗರಿ ಮಂಗಳೂರಿನಲ್ಲೂ ಭಾರೀ ಮಳೆ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜೋರಾದ ಗಾಳಿ ಮಳೆಗೆ ಕಡಲನಗರಿ ನಲುಗಿ ಹೋಗಿದೆ. ಸಮುದ್ರದ ಅಲೆಗಳಲ್ಲಿ ಭಾರೀ ಏರಿಳಿತ‌ವಾಗುತ್ತಿದೆ. ಭಾರೀ […]

ಕೊರೊನಾ ಅಟ್ಟಹಾಸದ ನಡುವೆ ಅಪ್ಪಳಿಸುತ್ತಿದೆ ಅಂಫಾನ್ ಚಂಡಮಾರುತ!
ಸಾಧು ಶ್ರೀನಾಥ್​
|

Updated on:May 18, 2020 | 11:12 AM

Share

ಮಂಗಳೂರು: ಇಡೀ ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಭಾರತದ ಹಲವೆಡೆ ಅಂಫಾನ್ ಚಂಡಮಾರುತ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಲ್ಲೂ ದಕ್ಷಿಣ ರಾಜ್ಯಗಳಲ್ಲಿ ಅಂಫಾನ್ ಚಂಡಮಾರುತ ಎಫೆಕ್ಟ್ ತೀವ್ರವಾಗಿರಲಿದೆ ಎಂದು ತಿಳಿಸಿದೆ.

ಕಡಲನಗರಿ ಮಂಗಳೂರಿನಲ್ಲೂ ಭಾರೀ ಮಳೆ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜೋರಾದ ಗಾಳಿ ಮಳೆಗೆ ಕಡಲನಗರಿ ನಲುಗಿ ಹೋಗಿದೆ. ಸಮುದ್ರದ ಅಲೆಗಳಲ್ಲಿ ಭಾರೀ ಏರಿಳಿತ‌ವಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ತಗ್ಗು ಪ್ರದೇಶದಲ್ಲಿರುವ ರಸ್ತೆಗಳು ಜಲಾವೃತವಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ತಡರಾತ್ರಿ ಮಳೆಯಾಗಿದೆ. ಬೆಳಗಿನ ಜಾವವೂ ಸಹ ನಗರದ ಹಲವೆಡೆ ಮಳೆಯಾಗಿದ್ದು, ಜೋರಾಗಿ ಗಾಳಿ ಬೀಸುತ್ತಿದೆ.

ಮುಂದಿನ 6 ಗಂಟೆಗಳಲ್ಲಿ ಚಂಡಮಾರುತದ ತೀವ್ರತೆ ಹೆಚ್ಚು: ಈಗಾಗಲೇ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಲ್ಲಿ ಬಿರುಗಾಳಿ ಬೀಸುತ್ತಿದ್ದು, ಮುಂದಿನ 6 ಗಂಟೆಗಳಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡಿನಲ್ಲೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಈರೋಡ್, ಸೇಲಂ, ಧರ್ಮಪುರಿ, ಕೃಷ್ಣಗಿರಿ, ಕೊಯಮತ್ತೂರು ಸೇರಿ ಹಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

ಬಿರುಗಾಳಿಯ ರಭಸಕ್ಕೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಸೇಲಂ, ಧರ್ಮಪುರಿ, ಕೃಷ್ಣಗಿರಿ ಜಿಲ್ಲೆ ಸೇರಿದಂತೆ ಹಲವೆಡೆ ಇನ್ನು ಭಾರೀ ಪ್ರಮಾಣದಲ್ಲಿ ಮಳೆ‌ಯಾಗಲಿದೆ. ಹೀಗಾಗಿ ಜನರು‌ ಜಾಗೃತರಾಗಿರಬೇಕೆಂದು ಹವಾಮಾನ ಇಲಾಖೆ‌ ಎಚ್ಚರಿಕೆ ನೀಡಿದೆ.

Published On - 8:30 am, Mon, 18 May 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ