AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಟ್ಟಹಾಸದ ನಡುವೆ ಅಪ್ಪಳಿಸುತ್ತಿದೆ ಅಂಫಾನ್ ಚಂಡಮಾರುತ!

ಮಂಗಳೂರು: ಇಡೀ ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಭಾರತದ ಹಲವೆಡೆ ಅಂಫಾನ್ ಚಂಡಮಾರುತ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಲ್ಲೂ ದಕ್ಷಿಣ ರಾಜ್ಯಗಳಲ್ಲಿ ಅಂಫಾನ್ ಚಂಡಮಾರುತ ಎಫೆಕ್ಟ್ ತೀವ್ರವಾಗಿರಲಿದೆ ಎಂದು ತಿಳಿಸಿದೆ. ಕಡಲನಗರಿ ಮಂಗಳೂರಿನಲ್ಲೂ ಭಾರೀ ಮಳೆ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜೋರಾದ ಗಾಳಿ ಮಳೆಗೆ ಕಡಲನಗರಿ ನಲುಗಿ ಹೋಗಿದೆ. ಸಮುದ್ರದ ಅಲೆಗಳಲ್ಲಿ ಭಾರೀ ಏರಿಳಿತ‌ವಾಗುತ್ತಿದೆ. ಭಾರೀ […]

ಕೊರೊನಾ ಅಟ್ಟಹಾಸದ ನಡುವೆ ಅಪ್ಪಳಿಸುತ್ತಿದೆ ಅಂಫಾನ್ ಚಂಡಮಾರುತ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 11:12 AM

Share

ಮಂಗಳೂರು: ಇಡೀ ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಭಾರತದ ಹಲವೆಡೆ ಅಂಫಾನ್ ಚಂಡಮಾರುತ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಲ್ಲೂ ದಕ್ಷಿಣ ರಾಜ್ಯಗಳಲ್ಲಿ ಅಂಫಾನ್ ಚಂಡಮಾರುತ ಎಫೆಕ್ಟ್ ತೀವ್ರವಾಗಿರಲಿದೆ ಎಂದು ತಿಳಿಸಿದೆ.

ಕಡಲನಗರಿ ಮಂಗಳೂರಿನಲ್ಲೂ ಭಾರೀ ಮಳೆ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜೋರಾದ ಗಾಳಿ ಮಳೆಗೆ ಕಡಲನಗರಿ ನಲುಗಿ ಹೋಗಿದೆ. ಸಮುದ್ರದ ಅಲೆಗಳಲ್ಲಿ ಭಾರೀ ಏರಿಳಿತ‌ವಾಗುತ್ತಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ತಗ್ಗು ಪ್ರದೇಶದಲ್ಲಿರುವ ರಸ್ತೆಗಳು ಜಲಾವೃತವಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ತಡರಾತ್ರಿ ಮಳೆಯಾಗಿದೆ. ಬೆಳಗಿನ ಜಾವವೂ ಸಹ ನಗರದ ಹಲವೆಡೆ ಮಳೆಯಾಗಿದ್ದು, ಜೋರಾಗಿ ಗಾಳಿ ಬೀಸುತ್ತಿದೆ.

ಮುಂದಿನ 6 ಗಂಟೆಗಳಲ್ಲಿ ಚಂಡಮಾರುತದ ತೀವ್ರತೆ ಹೆಚ್ಚು: ಈಗಾಗಲೇ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಲ್ಲಿ ಬಿರುಗಾಳಿ ಬೀಸುತ್ತಿದ್ದು, ಮುಂದಿನ 6 ಗಂಟೆಗಳಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡಿನಲ್ಲೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಈರೋಡ್, ಸೇಲಂ, ಧರ್ಮಪುರಿ, ಕೃಷ್ಣಗಿರಿ, ಕೊಯಮತ್ತೂರು ಸೇರಿ ಹಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

ಬಿರುಗಾಳಿಯ ರಭಸಕ್ಕೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಸೇಲಂ, ಧರ್ಮಪುರಿ, ಕೃಷ್ಣಗಿರಿ ಜಿಲ್ಲೆ ಸೇರಿದಂತೆ ಹಲವೆಡೆ ಇನ್ನು ಭಾರೀ ಪ್ರಮಾಣದಲ್ಲಿ ಮಳೆ‌ಯಾಗಲಿದೆ. ಹೀಗಾಗಿ ಜನರು‌ ಜಾಗೃತರಾಗಿರಬೇಕೆಂದು ಹವಾಮಾನ ಇಲಾಖೆ‌ ಎಚ್ಚರಿಕೆ ನೀಡಿದೆ.

Published On - 8:30 am, Mon, 18 May 20

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್