AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amphan ಚಂಡಮಾರುತ Super Cyclone ಆಗಿ ಪರಿವರ್ತನೆ! ಹೆಚ್ಚಿದೆ ಆತಂಕ..

ಹೈದರಾಬಾದ್: ಅದಾಗಲೇ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ತೀವ್ರತರ ಪರಿಣಾಮ ಬೀರುತ್ತಿರುವ ಅಂಫಾನ್ ಚಂಡಮಾರುತ ಇದೀಗ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ ಎಂಬ ಆತಂಕಕಾರಿ ಮಾಹಿತಿ ಸಿಕ್ಕಿದೆ. ಸದ್ಯ ಲಘು ಚಂಡಮಾರುತವಾಗಿ ಉತ್ತರ ವಾಯವ್ಯ ದಿಕ್ಕಿನಲ್ಲಿ ಪ್ರಯಾಣ ಮಾಡಿದ್ದು, ಇದರ ಪ್ರಭಾವದಿಂದಾಗಿ ಉಭಯ ತೆಲುಗು ರಾಜ್ಯಗಳಲ್ಲಿ ಮೇಘಾವೃತ ವಾತಾವರಣ, ಸದ್ಯ ಒಡಿಶಾದ ಪಾರಾದೀಪಕ್ಕೆ 780 ಕಿ.ಮಿ ದೂರದಲ್ಲಿ ಲಘು ತೂಫಾನ್ ರೂಪದಲ್ಲಿ ಸಾಗುತ್ತಿದೆ. ಮಂದಿನ 12 ಗಂಟೆಗಳಲ್ಲಿ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ ಎಂದು ಹವಾಮಾನ ಇಲಾಖೆ […]

Amphan ಚಂಡಮಾರುತ Super Cyclone ಆಗಿ ಪರಿವರ್ತನೆ! ಹೆಚ್ಚಿದೆ ಆತಂಕ..
ಸಾಧು ಶ್ರೀನಾಥ್​
|

Updated on:May 18, 2020 | 8:39 PM

Share

ಹೈದರಾಬಾದ್: ಅದಾಗಲೇ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ತೀವ್ರತರ ಪರಿಣಾಮ ಬೀರುತ್ತಿರುವ ಅಂಫಾನ್ ಚಂಡಮಾರುತ ಇದೀಗ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ ಎಂಬ ಆತಂಕಕಾರಿ ಮಾಹಿತಿ ಸಿಕ್ಕಿದೆ. ಸದ್ಯ ಲಘು ಚಂಡಮಾರುತವಾಗಿ ಉತ್ತರ ವಾಯವ್ಯ ದಿಕ್ಕಿನಲ್ಲಿ ಪ್ರಯಾಣ ಮಾಡಿದ್ದು, ಇದರ ಪ್ರಭಾವದಿಂದಾಗಿ ಉಭಯ ತೆಲುಗು ರಾಜ್ಯಗಳಲ್ಲಿ ಮೇಘಾವೃತ ವಾತಾವರಣ, ಸದ್ಯ ಒಡಿಶಾದ ಪಾರಾದೀಪಕ್ಕೆ 780 ಕಿ.ಮಿ ದೂರದಲ್ಲಿ ಲಘು ತೂಫಾನ್ ರೂಪದಲ್ಲಿ ಸಾಗುತ್ತಿದೆ.

ಮಂದಿನ 12 ಗಂಟೆಗಳಲ್ಲಿ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ ಎಂದು ಹವಾಮಾನ ಇಲಾಖೆ ಎಲ್ಲೋ ಮೆಸ್ಸೆಜ್ ಬಿಡುಗಡೆ ಮಾಡಿದೆ. ಇದೇ 20 ರಂದು ಹತಿಯಾ ಐಲ್ಯಾಂಡ್ ಬಳಿ ತೀವ್ರ ತೂಫಾನ್ ಆಗಿ ಪರಿವರ್ತನೆಗೊಂಡು ತೀರವನ್ನು ದಾಟಲಿದೆ ಅಂಫಾನ್ ಸೈಕ್ಲೋನ್. ಇದರ ಪ್ರಭಾವದಿಂದಾಗಿ ಆಂಧ್ರಪ್ರದೇಶದ ಸಮುದ್ರ ತೀರಗಳಲ್ಲಿ ಭಾರಿ ಬದಲಾವಣೆಯಾಗಲಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಾಗಿದೆ. ಆಂಧ್ರಪ್ರದೇಶದಲ್ಲಿನ ಬಂದರುಗಳಲ್ಲಿ ಅಧಿಕಾರಿಗಳು ಎರಡನೇ ನಂಬರಿನ ಎಚ್ಚರಿಕೆ ನೀಡಿದ್ದಾರೆ.

ಅಂಫಾನ್ ಚಂಡಮಾರುತದ ಪರಿಣಾಮ, ತಮಿಳುನಾಡಿನಲ್ಲಿಯೂ ಭಾರಿ ಬಿರುಗಾಳಿ ಮಳೆಗೆ ಮೀನುಗಾರರ ದೋಣಿಗಳು ಧ್ವಂಸಗೊಂಡಿವೆ. ರಾಮೇಶ್ವರಂ ಸಮುದ್ರ ಸೇರಿದಂತೆ ವಿವಿಧೆಡೆ ಅಂಫಾನ್ ಚಂಡಮಾರುತದಿಂದಾಗಿ ತೀವ್ರ ಬಿರುಗಾಳಿ, ಮಾರಕ ಅಲೆಗಳು ಎದ್ದಿವೆ. ಇದರಿಂದಾಗಿ ನೂರಕ್ಕೂ ಅಧಿಕ ಬೋಟ್​ಗಳು ಛಿದ್ರಗೊಂಡಿವೆ. ತೀವ್ರ ಗಾಳಿಗೆ ಬೋಟುಗಳು ವಿವಿಧ ತೀರಗಳಿಗೆ ಕೊಚ್ಚಿಕೊಂಡು ಹೋಗಿವೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ‌ ಹೈಲೆವಲ್ ಮೀಟಿಂಗ್: ಅಂಫಾನ್ ಚಂಡಮಾರುತ ಪರಿಸ್ಥಿತಿ ಅಧ್ಯಯನಕ್ಕಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ‌ ಹೈಲೆವಲ್ ಮೀಟಿಂಗ್ ನಡೆದಿದೆ. ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಗೃಹ ಖಾತೆ, ‌ವಿಪತ್ತು ತುರ್ತು ನಿರ್ವಹಣೆ ಅಧಿಕಾರಿಗಳನ್ನೊಳಗೊಂಡ ಉನ್ನತ ಸಭೆ ನಡೆದಿದೆ.

‘ಅಂಫಾನ್’ ಚಂಡಮಾರುತಕ್ಕೆ ಮೀನುಗಾರ ಬಲಿ:  ಆಂಧ್ರದ ವಿಜಯನಗರ ಜಿಲ್ಲೆಯ ಪತಿವಾಢ ಬರಿವಾಡ ಗ್ರಾಮದ ಮೀನುಗಾರ ಸಾವಿಗೀಡಾಗಿದ್ದಾನೆ. ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿಯಾದಾಗ ಆತ ಸಾವನ್ನಪ್ಪಿದ್ದಾನೆ.

Published On - 5:56 pm, Mon, 18 May 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ