AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amphan ಚಂಡಮಾರುತ Super Cyclone ಆಗಿ ಪರಿವರ್ತನೆ! ಹೆಚ್ಚಿದೆ ಆತಂಕ..

ಹೈದರಾಬಾದ್: ಅದಾಗಲೇ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ತೀವ್ರತರ ಪರಿಣಾಮ ಬೀರುತ್ತಿರುವ ಅಂಫಾನ್ ಚಂಡಮಾರುತ ಇದೀಗ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ ಎಂಬ ಆತಂಕಕಾರಿ ಮಾಹಿತಿ ಸಿಕ್ಕಿದೆ. ಸದ್ಯ ಲಘು ಚಂಡಮಾರುತವಾಗಿ ಉತ್ತರ ವಾಯವ್ಯ ದಿಕ್ಕಿನಲ್ಲಿ ಪ್ರಯಾಣ ಮಾಡಿದ್ದು, ಇದರ ಪ್ರಭಾವದಿಂದಾಗಿ ಉಭಯ ತೆಲುಗು ರಾಜ್ಯಗಳಲ್ಲಿ ಮೇಘಾವೃತ ವಾತಾವರಣ, ಸದ್ಯ ಒಡಿಶಾದ ಪಾರಾದೀಪಕ್ಕೆ 780 ಕಿ.ಮಿ ದೂರದಲ್ಲಿ ಲಘು ತೂಫಾನ್ ರೂಪದಲ್ಲಿ ಸಾಗುತ್ತಿದೆ. ಮಂದಿನ 12 ಗಂಟೆಗಳಲ್ಲಿ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ ಎಂದು ಹವಾಮಾನ ಇಲಾಖೆ […]

Amphan ಚಂಡಮಾರುತ Super Cyclone ಆಗಿ ಪರಿವರ್ತನೆ! ಹೆಚ್ಚಿದೆ ಆತಂಕ..
ಸಾಧು ಶ್ರೀನಾಥ್​
|

Updated on:May 18, 2020 | 8:39 PM

Share

ಹೈದರಾಬಾದ್: ಅದಾಗಲೇ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ತೀವ್ರತರ ಪರಿಣಾಮ ಬೀರುತ್ತಿರುವ ಅಂಫಾನ್ ಚಂಡಮಾರುತ ಇದೀಗ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ ಎಂಬ ಆತಂಕಕಾರಿ ಮಾಹಿತಿ ಸಿಕ್ಕಿದೆ. ಸದ್ಯ ಲಘು ಚಂಡಮಾರುತವಾಗಿ ಉತ್ತರ ವಾಯವ್ಯ ದಿಕ್ಕಿನಲ್ಲಿ ಪ್ರಯಾಣ ಮಾಡಿದ್ದು, ಇದರ ಪ್ರಭಾವದಿಂದಾಗಿ ಉಭಯ ತೆಲುಗು ರಾಜ್ಯಗಳಲ್ಲಿ ಮೇಘಾವೃತ ವಾತಾವರಣ, ಸದ್ಯ ಒಡಿಶಾದ ಪಾರಾದೀಪಕ್ಕೆ 780 ಕಿ.ಮಿ ದೂರದಲ್ಲಿ ಲಘು ತೂಫಾನ್ ರೂಪದಲ್ಲಿ ಸಾಗುತ್ತಿದೆ.

ಮಂದಿನ 12 ಗಂಟೆಗಳಲ್ಲಿ ಸೂಪರ್ ಸೈಕ್ಲೋನ್ ಆಗಿ ಪರಿವರ್ತನೆಯಾಗಲಿದೆ ಎಂದು ಹವಾಮಾನ ಇಲಾಖೆ ಎಲ್ಲೋ ಮೆಸ್ಸೆಜ್ ಬಿಡುಗಡೆ ಮಾಡಿದೆ. ಇದೇ 20 ರಂದು ಹತಿಯಾ ಐಲ್ಯಾಂಡ್ ಬಳಿ ತೀವ್ರ ತೂಫಾನ್ ಆಗಿ ಪರಿವರ್ತನೆಗೊಂಡು ತೀರವನ್ನು ದಾಟಲಿದೆ ಅಂಫಾನ್ ಸೈಕ್ಲೋನ್. ಇದರ ಪ್ರಭಾವದಿಂದಾಗಿ ಆಂಧ್ರಪ್ರದೇಶದ ಸಮುದ್ರ ತೀರಗಳಲ್ಲಿ ಭಾರಿ ಬದಲಾವಣೆಯಾಗಲಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಾಗಿದೆ. ಆಂಧ್ರಪ್ರದೇಶದಲ್ಲಿನ ಬಂದರುಗಳಲ್ಲಿ ಅಧಿಕಾರಿಗಳು ಎರಡನೇ ನಂಬರಿನ ಎಚ್ಚರಿಕೆ ನೀಡಿದ್ದಾರೆ.

ಅಂಫಾನ್ ಚಂಡಮಾರುತದ ಪರಿಣಾಮ, ತಮಿಳುನಾಡಿನಲ್ಲಿಯೂ ಭಾರಿ ಬಿರುಗಾಳಿ ಮಳೆಗೆ ಮೀನುಗಾರರ ದೋಣಿಗಳು ಧ್ವಂಸಗೊಂಡಿವೆ. ರಾಮೇಶ್ವರಂ ಸಮುದ್ರ ಸೇರಿದಂತೆ ವಿವಿಧೆಡೆ ಅಂಫಾನ್ ಚಂಡಮಾರುತದಿಂದಾಗಿ ತೀವ್ರ ಬಿರುಗಾಳಿ, ಮಾರಕ ಅಲೆಗಳು ಎದ್ದಿವೆ. ಇದರಿಂದಾಗಿ ನೂರಕ್ಕೂ ಅಧಿಕ ಬೋಟ್​ಗಳು ಛಿದ್ರಗೊಂಡಿವೆ. ತೀವ್ರ ಗಾಳಿಗೆ ಬೋಟುಗಳು ವಿವಿಧ ತೀರಗಳಿಗೆ ಕೊಚ್ಚಿಕೊಂಡು ಹೋಗಿವೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ‌ ಹೈಲೆವಲ್ ಮೀಟಿಂಗ್: ಅಂಫಾನ್ ಚಂಡಮಾರುತ ಪರಿಸ್ಥಿತಿ ಅಧ್ಯಯನಕ್ಕಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ‌ ಹೈಲೆವಲ್ ಮೀಟಿಂಗ್ ನಡೆದಿದೆ. ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಗೃಹ ಖಾತೆ, ‌ವಿಪತ್ತು ತುರ್ತು ನಿರ್ವಹಣೆ ಅಧಿಕಾರಿಗಳನ್ನೊಳಗೊಂಡ ಉನ್ನತ ಸಭೆ ನಡೆದಿದೆ.

‘ಅಂಫಾನ್’ ಚಂಡಮಾರುತಕ್ಕೆ ಮೀನುಗಾರ ಬಲಿ:  ಆಂಧ್ರದ ವಿಜಯನಗರ ಜಿಲ್ಲೆಯ ಪತಿವಾಢ ಬರಿವಾಡ ಗ್ರಾಮದ ಮೀನುಗಾರ ಸಾವಿಗೀಡಾಗಿದ್ದಾನೆ. ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿಯಾದಾಗ ಆತ ಸಾವನ್ನಪ್ಪಿದ್ದಾನೆ.

Published On - 5:56 pm, Mon, 18 May 20

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ