AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Asani: ಅಸನಿ ಚಂಡಮಾರುತದ ಪ್ರಭಾವ; ಅಂಡಮಾನ್​-ನಿಕೋಬಾರ್​​ನಲ್ಲಿ ಭರ್ಜರಿ ಗಾಳಿ-ಮಳೆ, ಜನರ ಸ್ಥಳಾಂತರ

ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಅಂಡಮಾನ್ ನಿಕೋಬಾರ್​​ನಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕೈಗೊಳ್ಳಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ತಂಡದ ಸುಮಾರು 150 ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ.

Cyclone Asani: ಅಸನಿ ಚಂಡಮಾರುತದ ಪ್ರಭಾವ; ಅಂಡಮಾನ್​-ನಿಕೋಬಾರ್​​ನಲ್ಲಿ ಭರ್ಜರಿ ಗಾಳಿ-ಮಳೆ, ಜನರ ಸ್ಥಳಾಂತರ
ಅಸನಿ ಚಂಡಮಾರುತ
TV9 Web
| Edited By: |

Updated on: Mar 20, 2022 | 4:59 PM

Share

ಅಸನಿ ಚಂಡಮಾರುತದ (Cyclone Asani) ಪ್ರಭಾವದಿಂದಾಗಿ ಇಂದು ಅಂಡಮಾನ್​-ನಿಕೋಬಾರ್​ ದ್ವೀಪ ಸಮೂಹದಲ್ಲಿ ಭರ್ಜರಿ ಗಾಳಿ-ಮಳೆಯಾಗುತ್ತಿದ್ದು, ಅಲ್ಲಿರುವ ಜನರನ್ನು ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರ ಮಾಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಅಸನಿ ಚಂಡಮಾರುತ ಏಳುವ ಎಚ್ಚರಿಕೆಯನ್ನು ಕಳೆದ ಕೆಲವು ದಿನಗಳ ಹಿಂದೆಯೇ ಭಾರತೀಯ ಹವಾಮಾನ ಇಲಾಖೆ ನೀಡಿತ್ತು. ಈ ಚಂಡಮಾರುತ ಬಾಂಗ್ಲಾದೇಶ, ಮಯನ್ಮಾರ್ ಕರಾವಳಿ ಮತ್ತು ಭಾರತದ ಅಂಡಮಾನ್​-ನಿಕೋಬಾರ್​ ದ್ವೀಪ ಸಮೂಹಕ್ಕೆ ಅಪ್ಪಳಿಸಲಿದ್ದು, ನಮ್ಮ ದೇಶದ ಇತರ ಪ್ರದೇಶಗಳ ಮೇಲೆ ಹೆಚ್ಚಿನ ಪ್ರಭಾವ ಬೀರುವುದಿಲ್ಲ ಎಂದೂ ಹೇಳಲಾಗಿದೆ. ಅದರಂತೆ ಅಂಡಮಾನ್​-ನಿಕೋಬಾರ್​​ನಲ್ಲಿ ಈಗಾಗಲೇ ಗಾಳಿಯ ತೀವ್ರತೆ ಹೆಚ್ಚಾಗಿದ್ದು, ಮಳೆ ಸುರಿಯುತ್ತಿದೆ. ಚಂಡಮಾರುತ ಎದ್ದ ಸಂದರ್ಭದಲ್ಲಿ ಸಂಬಂಧಪಟ್ಟ ಸಮುದ್ರ ತೀರಗಳಲ್ಲಿ ಅಲೆಗಳ ಅಬ್ಬರ ಜೋರಾಗಿರುವ ಕಾರಣ ಚೆನ್ನೈ ಮತ್ತು ವಿಶಾಖಪಟ್ಟಣಂ ಕರಾವಳಿ ತೀರಗಳಲ್ಲೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಅಂಡಮಾನ್ ನಿಕೋಬಾರ್​​ನಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕೈಗೊಳ್ಳಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ತಂಡದ ಸುಮಾರು 150 ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಜನರು ಗಾಬರಿಗೊಳ್ಳಬಾರದು.ಅವರ ಸುರಕ್ಷತೆಗಾಗಿ ಎಲ್ಲ ರೀತಿಯ ಕ್ರಮವನ್ನೂ ಕೈಗೊಳ್ಳಲಾಗಿದೆ.  ಪೋರ್ಟ್​ಬ್ಲೇರ್​​ನಲ್ಲಿ 68 ಎನ್​ಡಿಆರ್​ಎಫ್​ ಸಿಬ್ಬಂದಿಯಿದ್ದಾರೆ. ಡಿಗ್ಲಿಪುರ್​, ರಾಣ್​ಗಾಟ್​, ಹಟ್​ಬೇ ಪ್ರದೇಶಗಳಲ್ಲಿ ತಯಾಲ 25 ಸಿಬ್ಬಂದಿ ನಿಯೋಜನೆಗೊಂಡಿದ್ದಾರೆಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ಪಂಕಜ್​ ಕುಮಾರ್​ ತಿಳಿಸಿದ್ದಾರೆ.  ಹಾಗೇ, ಅಂಡಮಾನ್ ನಿಕೋಬಾರ್​ನಲ್ಲಿ ಸಹಾಯವಾಣಿಯನ್ನೂ ತೆರೆಯಲಾಗಿದೆ. ನಾಳೆ ಮುಂಜಾನೆ 5.30ರ ಹೊತ್ತಿಗೆ ಇಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಚಂಡಮಾರುತದಿಂದಾಗಿ ಮಾರ್ಚ್ 21ರಂದು ಮಧ್ಯ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತವು ಮಾರ್ಚ್ 22ರ ಬೆಳಿಗ್ಗೆ ಬಾಂಗ್ಲಾದೇಶ- ಉತ್ತರ ಮಯನ್ಮಾರ್ ಕರಾವಳಿಯ ಬಳಿ ತಲುಪುವ ನಿರೀಕ್ಷೆಯಿದೆ ಎಂದು IMD ಹೇಳಿದೆ.

ಇದನ್ನೂ ಓದಿ: ರಷ್ಯಾ- ಉಕ್ರೇನ್ ಯುದ್ಧ 25ನೇ ದಿನಕ್ಕೆ: 400 ಮಂದಿ ಆಶ್ರಯ ಪಡೆದ ಶಾಲೆ ಮೇಲೆ ರಷ್ಯಾ ಬಾಂಬ್ ದಾಳಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್