AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Asani: ಅಸನಿ ಚಂಡಮಾರುತದ ಪ್ರಭಾವ; ಅಂಡಮಾನ್​-ನಿಕೋಬಾರ್​​ನಲ್ಲಿ ಭರ್ಜರಿ ಗಾಳಿ-ಮಳೆ, ಜನರ ಸ್ಥಳಾಂತರ

ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಅಂಡಮಾನ್ ನಿಕೋಬಾರ್​​ನಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕೈಗೊಳ್ಳಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ತಂಡದ ಸುಮಾರು 150 ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ.

Cyclone Asani: ಅಸನಿ ಚಂಡಮಾರುತದ ಪ್ರಭಾವ; ಅಂಡಮಾನ್​-ನಿಕೋಬಾರ್​​ನಲ್ಲಿ ಭರ್ಜರಿ ಗಾಳಿ-ಮಳೆ, ಜನರ ಸ್ಥಳಾಂತರ
ಅಸನಿ ಚಂಡಮಾರುತ
TV9 Web
| Edited By: |

Updated on: Mar 20, 2022 | 4:59 PM

Share

ಅಸನಿ ಚಂಡಮಾರುತದ (Cyclone Asani) ಪ್ರಭಾವದಿಂದಾಗಿ ಇಂದು ಅಂಡಮಾನ್​-ನಿಕೋಬಾರ್​ ದ್ವೀಪ ಸಮೂಹದಲ್ಲಿ ಭರ್ಜರಿ ಗಾಳಿ-ಮಳೆಯಾಗುತ್ತಿದ್ದು, ಅಲ್ಲಿರುವ ಜನರನ್ನು ಸುರಕ್ಷಿತವಾಗಿ ಬೇರೆಡೆ ಸ್ಥಳಾಂತರ ಮಾಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಅಸನಿ ಚಂಡಮಾರುತ ಏಳುವ ಎಚ್ಚರಿಕೆಯನ್ನು ಕಳೆದ ಕೆಲವು ದಿನಗಳ ಹಿಂದೆಯೇ ಭಾರತೀಯ ಹವಾಮಾನ ಇಲಾಖೆ ನೀಡಿತ್ತು. ಈ ಚಂಡಮಾರುತ ಬಾಂಗ್ಲಾದೇಶ, ಮಯನ್ಮಾರ್ ಕರಾವಳಿ ಮತ್ತು ಭಾರತದ ಅಂಡಮಾನ್​-ನಿಕೋಬಾರ್​ ದ್ವೀಪ ಸಮೂಹಕ್ಕೆ ಅಪ್ಪಳಿಸಲಿದ್ದು, ನಮ್ಮ ದೇಶದ ಇತರ ಪ್ರದೇಶಗಳ ಮೇಲೆ ಹೆಚ್ಚಿನ ಪ್ರಭಾವ ಬೀರುವುದಿಲ್ಲ ಎಂದೂ ಹೇಳಲಾಗಿದೆ. ಅದರಂತೆ ಅಂಡಮಾನ್​-ನಿಕೋಬಾರ್​​ನಲ್ಲಿ ಈಗಾಗಲೇ ಗಾಳಿಯ ತೀವ್ರತೆ ಹೆಚ್ಚಾಗಿದ್ದು, ಮಳೆ ಸುರಿಯುತ್ತಿದೆ. ಚಂಡಮಾರುತ ಎದ್ದ ಸಂದರ್ಭದಲ್ಲಿ ಸಂಬಂಧಪಟ್ಟ ಸಮುದ್ರ ತೀರಗಳಲ್ಲಿ ಅಲೆಗಳ ಅಬ್ಬರ ಜೋರಾಗಿರುವ ಕಾರಣ ಚೆನ್ನೈ ಮತ್ತು ವಿಶಾಖಪಟ್ಟಣಂ ಕರಾವಳಿ ತೀರಗಳಲ್ಲೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಅಂಡಮಾನ್ ನಿಕೋಬಾರ್​​ನಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕೈಗೊಳ್ಳಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ತಂಡದ ಸುಮಾರು 150 ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಜನರು ಗಾಬರಿಗೊಳ್ಳಬಾರದು.ಅವರ ಸುರಕ್ಷತೆಗಾಗಿ ಎಲ್ಲ ರೀತಿಯ ಕ್ರಮವನ್ನೂ ಕೈಗೊಳ್ಳಲಾಗಿದೆ.  ಪೋರ್ಟ್​ಬ್ಲೇರ್​​ನಲ್ಲಿ 68 ಎನ್​ಡಿಆರ್​ಎಫ್​ ಸಿಬ್ಬಂದಿಯಿದ್ದಾರೆ. ಡಿಗ್ಲಿಪುರ್​, ರಾಣ್​ಗಾಟ್​, ಹಟ್​ಬೇ ಪ್ರದೇಶಗಳಲ್ಲಿ ತಯಾಲ 25 ಸಿಬ್ಬಂದಿ ನಿಯೋಜನೆಗೊಂಡಿದ್ದಾರೆಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ಪಂಕಜ್​ ಕುಮಾರ್​ ತಿಳಿಸಿದ್ದಾರೆ.  ಹಾಗೇ, ಅಂಡಮಾನ್ ನಿಕೋಬಾರ್​ನಲ್ಲಿ ಸಹಾಯವಾಣಿಯನ್ನೂ ತೆರೆಯಲಾಗಿದೆ. ನಾಳೆ ಮುಂಜಾನೆ 5.30ರ ಹೊತ್ತಿಗೆ ಇಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಚಂಡಮಾರುತದಿಂದಾಗಿ ಮಾರ್ಚ್ 21ರಂದು ಮಧ್ಯ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತವು ಮಾರ್ಚ್ 22ರ ಬೆಳಿಗ್ಗೆ ಬಾಂಗ್ಲಾದೇಶ- ಉತ್ತರ ಮಯನ್ಮಾರ್ ಕರಾವಳಿಯ ಬಳಿ ತಲುಪುವ ನಿರೀಕ್ಷೆಯಿದೆ ಎಂದು IMD ಹೇಳಿದೆ.

ಇದನ್ನೂ ಓದಿ: ರಷ್ಯಾ- ಉಕ್ರೇನ್ ಯುದ್ಧ 25ನೇ ದಿನಕ್ಕೆ: 400 ಮಂದಿ ಆಶ್ರಯ ಪಡೆದ ಶಾಲೆ ಮೇಲೆ ರಷ್ಯಾ ಬಾಂಬ್ ದಾಳಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ